Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಡುವಾಸಿ ಕೆಂಚಪ್ಪರನ್ನು ನಾಡಿಗೆ...

ಕಾಡುವಾಸಿ ಕೆಂಚಪ್ಪರನ್ನು ನಾಡಿಗೆ ಕರೆತರುವ ಪ್ರಯತ್ನ ವಿಫಲ

ವಾರ್ತಾಭಾರತಿವಾರ್ತಾಭಾರತಿ4 July 2016 6:56 PM IST
share
ಕಾಡುವಾಸಿ ಕೆಂಚಪ್ಪರನ್ನು ನಾಡಿಗೆ ಕರೆತರುವ ಪ್ರಯತ್ನ ವಿಫಲ

ಸುಳ್ಯ, ಜು.4: ಕಳೆದ 48 ವರ್ಷಗಳಿಂದ ಕಾಡಿನಲ್ಲಿ ವಾಸಿಸುತ್ತಿರುವ ಕೆಂಚಪ್ಪಅವರನ್ನು ನಾಡಿಗೆ ಕರೆತರುವ ಕಾರ್ಯ ವಿಫಲಗೊಂಡಿದೆ. ಅವರನ್ನು ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಸೇರಿಸಲು ತೆರಳಿದಾಗ ಕಾಡುಬಿಟ್ಟು ಬರಲು ನಿರಾಕರಿಸಿದ್ದಾರೆ.

ಕಳೆದ 48 ವರ್ಷಗಳಿಂದ ಮರ್ಕಂಜ ಗ್ರಾಮದ ಬಾಳೆಡಿ ರಕ್ಷಿತಾರಣ್ಯದಲ್ಲಿ ಸೂರು ಕಟ್ಟಿಕೊಂಡು ವಾಸಿಸುತ್ತಿರುವ ಕೆಂಚಪ್ಪರ ಬಗ್ಗೆ ಪತ್ರಿಕೆಗಳಲ್ಲಿ ಬಂದ ವರದಿಗೆ ಸ್ಪಂದಿಸಿರುವ ಜಿಲ್ಲಾಧಿಕಾರಿ ಕೆಂಚಪ್ಪರನ್ನು ನಾಡಿಗೆ ಕರೆತಂದು ಮಂಗಳೂರಿನಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಸೇರಿಸುವಂತೆ ಸುಳ್ಯ ತಹಶೀಲ್ದಾರ್ ಮತ್ತು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗೆ ಪತ್ರದ ಮೂಲಕ ಸೂಚಿಸಿದ್ದರು.

ಅದರಂತೆ ತಹಶೀಲ್ದಾರ್ ಶನಿವಾರ ಕಾಡಿಗೆ ತೆರಳಿ ನಗರದಲ್ಲಿರುವ ನಿರಾಶ್ರಿತ ಕೇಂದ್ರಕ್ಕೆ ಬರುವಂತೆ ಕೆಂಚಪ್ಪರಲ್ಲಿ ಮನವಿ ಮಾಡಿದರು. ಆದರೆ ಇದಕ್ಕೆ ಕೆಂಚಪ್ಪಅವರು ‘ನಾನು ಕಾಡಲ್ಲೇ ಇರುತ್ತೇನೆ. ಇಲ್ಲೇ ನನ್ನ ಬದುಕು’ ಎಂದು ನಿರಾಶ್ರಿತರ ಕೇಂದ್ರಕ್ಕೆ ಆಗಮಿಸಲು ನಿರಾಕರಿಸಿದ್ದಾರೆ. ಕೆಂಚಪ್ಪಅವರ ಸಂಬಂಧಿಕರು, ನೆರೆಹೊರೆಯವರು ಕೂಡ ಬಲವಂತವಾಗಿ ಅವರನ್ನು ಒಯ್ಯಬೇಡಿ ಎಂದಿದ್ದಾರೆ.

‘ಅವರಿಗೆ ಚೆನ್ನಾಗಿ ಹಸಿವಿದೆ. ನಮ್ಮಲ್ಲಿಗೆ ಬಂದು ಊಟ ಮಾಡಿಕೊಂಡು ಹೋಗುತ್ತಾರೆ. ಅವರಿಂದ ಯಾರಿಗೂ ಸಮಸ್ಯೆ ಇಲ್ಲ ಎಂದು ಅವರಿಗೆ ಊಟ ನೀಡುವ ಮನೆಯವರು ತಿಳಿಸಿದ್ದಾರೆ. ಈ ಹಿಂದೆಯೂ ಪತ್ರಿಕೆಯಲ್ಲಿ ಇವರ ಬಗ್ಗೆ ವರದಿ ಪ್ರಕಟವಾದಾಗ ಸಂಘ - ಸಂಸ್ಥೆಯವರು, ಸಾಮಾಜಿಕ ಕಳಕಳಿ ಉಳ್ಳವರು ನಾಡಿಗೆ ಬರುವಂತೆ ಮನವೊಲಿಸಿದಾಗ ಕೆಂಚಪ್ಪನಿರಾಕರಿಸಿದ್ದರು.

21ರ ಹರೆಯದಲ್ಲೇ ಊರು ತೊರೆದವರು ತನ್ನ 21ನೆ ವರ್ಷದಲ್ಲಿ ಏಕಾಏಕಿ ಮನೆ ತೊರೆದ ಕೆಂಚಪ್ಪ ಅವರು ಸುಮಾರು 7 ಕಿ.ಮೀ. ದೂರದ ಕಾಡು ಸೇರಿ ಸೂರು ಕಟ್ಟಿಕೊಂಡು ಅಲ್ಲಿಯೇ ಜೀವನ ಸಾಗಿಸತೊಡಗಿದ್ದರು. ಕಾಡಿನಲ್ಲಿ ಸಿಗುವ ಗೆಡ್ಡೆಗೆಣಸು, ಹಣ್ಣು ಹಂಪಲನ್ನು ಆಹಾರವಾಗಿ ಬಳಸುತ್ತಿದ್ದರು. ಕೆಲವು ವರ್ಷಗಳಿಂದ ಕಾಡಿನಲ್ಲಿ ಸಿಗುವ ಕಟ್ಟಿಗೆಯನ್ನು ತನ್ನ ಸಂಬಂಕರ ಮನೆಗೆ ತಂದು ಹಾಕಿ ಊಟ ಮಾಡಿಕೊಂಡು ಹೋಗುತ್ತಿದ್ದಾರೆ. ಕೆಂಚಪ್ಪ ಅವರಿಗೆ ಈಗ 79 ವಯಸ್ಸು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X