Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಣಾಜೆ: ಮನೆಯ ಅಡಿಭಾಗದಲ್ಲಿ ಬೃಹತ್ ಗುಹೆ...

ಕೊಣಾಜೆ: ಮನೆಯ ಅಡಿಭಾಗದಲ್ಲಿ ಬೃಹತ್ ಗುಹೆ ಪತ್ತೆ

ಮಣ್ಣು ಕುಸಿದು ಗುಹೆ ಬೆಳಕಿಗೆ; ಅಪಾಯದಂಚಿನಲ್ಲಿ ಮನೆ

ವಾರ್ತಾಭಾರತಿವಾರ್ತಾಭಾರತಿ4 July 2016 7:33 PM IST
share
ಕೊಣಾಜೆ: ಮನೆಯ ಅಡಿಭಾಗದಲ್ಲಿ ಬೃಹತ್ ಗುಹೆ ಪತ್ತೆ

ಕೊಣಾಜೆ, ಜು.4: ಮನೆಯೊಂದರ ಬಳಿ ಮಣ್ಣು ಕುಸಿತ ಉಂಟಾಗಿ ಮನೆಯಡಿ 15 ಅಡಿ ಆಳದ ಬೃಹತ್ ಗುಹೆಯೊಂದು ಪತ್ತೆಯಾದ ಘಟನೆ ಕೊಣಾಜೆ ಗ್ರಾಮದ ಪುಳಿಂಚಾಡಿಯ ಕಲ್ಕಾರ್ ಎಂಬಲ್ಲಿ ನಡೆದಿದೆ. ಮನೆಯು ಕುಸಿಯುವ ಹಂತದಲ್ಲಿದ್ದು ಮನೆಮಂದಿ ಭಯಭೀತರಾಗಿದ್ದಾರೆ.

ಸೋಮವಾರ ಬೆಳಗ್ಗೆ ಸುಮಾರು 7:30ರ ಹೊತ್ತಿಗೆ ಕೊಣಾಜೆ ಕಲ್ಕಾರ್‌ನ ಸದಾಶಿವ ದೇವಾಡಿಗರ ಮನೆಯ ಅಡಿಯಲ್ಲಿ ಈ ಘಟನೆ ಸಂಭವಿಸಿದೆ. ದೇವಾಡಿಗ ಅವರ ಪತ್ನಿ ಪ್ರಭಾವತಿ ಮನೆಯಲ್ಲಿದ್ದ ಸಂದರ್ಭ ಈ ಘಟನೆ ಸಂಭವಿಸಿದ್ದು. ಬಳಿಕ ನೋಡಿದಾಗ ಮಣ್ಣು ಕುಸಿದಿದ್ದು ಮಾತ್ರವಲ್ಲದೆ ಮನೆಯ ಅಡಿ ಭಾಗದಲ್ಲಿ 15 ಅಡಿ ಆಳದಲ್ಲಿ ಬೃಹತ್ ಸುರಂಗವೂ ಪತ್ತೆಯಾಗಿತ್ತು.

ಶೆಡ್ ತೆರವುಗೊಳಿಸಿದ ಸ್ಥಳೀಯರು:

ಸ್ಥಳಕ್ಕೆ ಆಗಮಿಸಿದ ಅಕ್ಕಪಕ್ಕದ ಮನೆಮಂದಿ, ಸ್ಥಳೀಯರು ಶ್ರಮದಾನದ ಮೂಲಕ ಮನೆಗೆ ತಾಗಿಕೊಂಡು ಹಿಂಭಾಗದಲ್ಲಿ ಕುಸಿಯುವ ಹಂತದಲ್ಲಿದ್ದ ಶೆಡ್ ತೆರವುಗೊಳಿಸಿದರು. ಬಳಿಕ ಜೆಸಿಬಿ ಮೂಲಕ ಹೊಂಡವನ್ನು ಮುಚ್ಚಲು ಪ್ರಯತ್ನಿಸಿದರೂ ಸುರಂಗದಿಂದಾಗಿ ಇದು ಸಾಧ್ಯವಾಗಲಿಲ್ಲ. 

ಅತಂತ್ರವಾದ ಕುಟುಂಬ

ಪುಳಿಂಚಾಡಿಯ ಸದಾಶಿವ ದೇವಾಡಿಗ ಮಂಗಳೂರು ವಿವಿಯಲ್ಲಿ ಸೆಕ್ಯುರಿಟಿ ಗಾರ್ಡ್ ಕೆಲಸ ನಿರ್ವಹಿಸುತ್ತಿದ್ದು, ಪತ್ನಿ ಪ್ರಭಾವತಿ ದೇರಳಕಟ್ಟೆಯ ಖಾಸಗಿ ಕಾಲೇಜೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದರು. ಕಳೆದ ಮೂರು ವರ್ಷದ ಹಿಂದೆಯಷ್ಟೇ ಇಲ್ಲಿ ಮನೆ ನಿರ್ಮಿಸಿದ್ದರು. ಒಂದೂವರೆ ತಿಂಗಳ ಹಿಂದೆ ಮುಡಿಪು ಬಳಿ ಬೈಕ್ ಸ್ಕಿಡ್ ಆದ ಪರಿಣಾಮ ಗಂಭೀರ ಗಾಯಗೊಂಡು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಸೋಮವಾರ ಆಸ್ಪತ್ರೆಯಿಂದ ಮನೆಗೆ ಬರುವವರಿದ್ದರು. ಆದರೆ ಇದೀಗ ಮನೆಯಡಿಯಲ್ಲಿ ಕಂದಕ ಸೃಷ್ಟಿಯಾಗಿ ಮನೆಯೇ ಬೀಳುವ ಸ್ಥಿತಿಯಲ್ಲಿರುವುದು ಬಡ ಕುಟುಂಬವನ್ನು ಆತಂಕಕ್ಕೀಡು ಮಾಡಿದೆ.

ಸ್ಥಳಕ್ಕೆ ಕೊಣಾಜೆ ಎಸೈ ಕೆ. ಸುಧಾಕರ್, ಗ್ರಾಮ ಪಂಚಾಯತ್ ಅಧ್ಯಕ್ಷ ಶೌಕತ್ ಅಲಿ, ಬಿಜೆಪಿ ರಾಜ್ಯಕಾರ್ಯಕಾರಿಣಿ ಸದಸ್ಯ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೇಶವ, ಗ್ರಾಮ ಲೆಕ್ಕಿಗ ಪ್ರಸಾದ್, ಪಂಚಾಯತ್ ಸದಸ್ಯರು ಭೇಟಿ ಕೊಟ್ಟಿದ್ದು ಮನೆಮಂದಿಯನ್ನು ಸಮಾಧಾನಿಸುವುದರ ಜೊತೆಗೆ ಶ್ರಮದಾನದಲ್ಲಿಯೂ ತೊಡಗಿಸಿಕೊಂಡು ಸಹಕರಿಸಿದ್ದಾರೆ. 

ಅಕ್ಕಪಕ್ಕದ ಮನೆಯವರಿಗೂ ಆತಂಕ

ಸದಾಶಿವ ದೇವಾಡಿಗರ ಮನೆಯ ಅಡಿಯಲ್ಲಿ ಗುಹೆಯ ರೀತಿಯಲ್ಲಿ ಕಂದಕ ಪತ್ತೆಯಾಗುತ್ತಿದ್ದಂತೆ ಅಕ್ಕ ಪಕ್ಕದ ಮನೆಯವರಿಗೂ ಆತಂಕ ಸೃಷ್ಟಿಯಾಗಿದೆ. ಪತ್ತೆಯಾಗಿರುವ ಸುರಂಗದ ವ್ಯಾಪ್ತಿ ಇನ್ನೂ ವಿಸ್ತರಿಸಿರಬಹುದು ಎಂಬ ಆತಂಕವನ್ನು ಅಕ್ಕಪಕ್ಕದ ಮನೆಯವರೂ ವ್ಯಕ್ತಪಡಿಸುತ್ತಿದ್ದಾರೆ.

ಮನೆಯಡಿಯಲ್ಲಿ ಕುಸಿತದಿಂದ ಉಂಟಾದ ಹೊಂಡವನ್ನು ಜೆಸಿಬಿ ಯಂತ್ರ ತರಿಸಿ ಮಣ್ಣು ಹಾಕಿ ಮುಚ್ಚಲು ಪ್ರಯತ್ನಿಸಿದೆವು. ಆದರೆ ಬೃಹತ್ ಸುರಂಗ ಇರುವುದರಿಂದ ಮಣ್ಣು ಹಾಕಿ ಅದನ್ನು ಮುಚ್ಚುವುದು ಸಾಧ್ಯವಾಗಿಲ್ಲ.

ಶೌಕತ್ ಅಲಿ, ಕೊಣಾಜೆ ಗ್ರಾ.ಪಂ.ಅಧ್ಯಕ್ಷರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X