Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಲ್ಪೆ: ವೃದ್ಧ ದಂಪತಿಯನ್ನು ಕಟ್ಟಿ ಹಾಕಿ...

ಮಲ್ಪೆ: ವೃದ್ಧ ದಂಪತಿಯನ್ನು ಕಟ್ಟಿ ಹಾಕಿ ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಕಳವು

ವಾರ್ತಾಭಾರತಿವಾರ್ತಾಭಾರತಿ4 July 2016 9:30 PM IST
share
ಮಲ್ಪೆ: ವೃದ್ಧ ದಂಪತಿಯನ್ನು ಕಟ್ಟಿ ಹಾಕಿ ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಕಳವು

ಮಲ್ಪೆ, ಜು.4: ಬಡಾನಿಡಿಯೂರು ಗ್ರಾಮದ ಪಾವಂಜೆ ಗುಡ್ಡೆ ಎಂಬಲ್ಲಿ ಜು.4ರಂದು ನಸುಕಿನ ವೇಳೆ ಮನೆಯೊಂದಕ್ಕೆ ನುಗ್ಗಿದ ಮುಸುಕುಧಾರಿ ದರೋಡೆಕೋರರಿಬ್ಬರು ವೃದ್ಧ ದಂಪತಿಯನ್ನು ಕಟ್ಟಿ ಹಾಕಿ ಚಿನ್ನಾಭರಣ ಹಾಗೂ ಕಾರು ದರೋಡೆಗೈದಿರುವ ಬಗ್ಗೆ ವರದಿಯಾಗಿದೆ.

ಕೆಮ್ಮಣ್ಣುವಿನಲ್ಲಿ ಕ್ಲಿನಿಕ್ ನಡೆಸುತ್ತಿರುವ ಡಾ.ಬಿ.ದೇವಿದಾಸ್ ಭಟ್(73) ಹಾಗೂ ಅವರ ಪತ್ನಿ ಸರೋಜಿನಿ(65) ಜು.3ರಂದು ರಾತ್ರಿ ಊಟ ಮಾಡಿ ಮನೆಯಲ್ಲಿ ಮಲಗಿದ್ದು, ಜು.4ರಂದು ಬೆಳಗಿನ ಜಾವ 3:30ರ ಸುಮಾರಿಗೆ ಮನೆಯ ಮಹಡಿ ಮೇಲೆ ಶಬ್ದ ಕೇಳಿದ ಹಿನ್ನೆಲೆಯಲ್ಲಿ ಡಾ.ದೇವಿಪ್ರಸಾದ್ ಭಟ್ ಎದ್ದು ನೋಡಿ ಮತ್ತೆ ಮಲಗಿದ್ದರು. ನಂತರ ಇವರು 4ಗಂಟೆ ಸುಮಾರಿಗೆ ಎದ್ದು ಟಾಯ್ಲೆಟ್‌ಗೆ ಹೋಗುವಾಗ ಅಲ್ಲೇ ಹತ್ತಿರ ಉಪ್ಪರಿಗೆ ಮೆಟ್ಟಿಲಲ್ಲಿ ಕಪ್ಪು ಜಾಕೆಟ್ ತೊಟ್ಟು, ಮುಖಕ್ಕೆ ವಸ್ತ್ರ, ಕೈಚೀಲ ಧರಿಸಿದ್ದ ಸುಮಾರು 25ವರ್ಷ ವಯಸ್ಸಿನ ಇಬ್ಬರು ಯುವಕರು ಚೂರಿ ತೋರಿಸಿ ಹಣ ಕೊಡುವಂತೆ ಭಟ್‌ರನ್ನು ಬೆದರಿಸಿದರು.

ನಂತರ ಕಳ್ಳರು ಡಾ.ದೇವಿಪ್ರಸಾದ್ ಭಟ್‌ರನ್ನು ಬೆಡ್‌ರೂಂಗೆ ಕರೆದು ಕೊಂಡು ಬಂದು ಬಾಯಿಗೆ ಮತ್ತು ಕೈಕಾಲಿಗೆ ಗಮ್ ಟೇಪ್ ಮತ್ತು ಅವರ ಪತ್ನಿಯನ್ನು ಬಟ್ಟೆಯಲ್ಲಿ ಕಟ್ಟಿ ಹಾಕಿದರು. ಗೊದ್ರೇಜ್ ಕೀ ಕೇಳಿ ಅವರಿಂದ ಪಡೆದು ಅದರಲ್ಲಿದ್ದ ಚಿನ್ನದ 2 ಗ್ರಾಂ ತೂಕದ 10 ಚಿನ್ನದ ನಾಣ್ಯ ಹಾಗೂ ನಗದು, ಪತ್ನಿಯ 30ಗ್ರಾಂ ತೂಕದ 2 ಬಂಗಾರದ ಬಳೆ ತೆಗೆದುಕೊಂಡರು. ಬಳಿಕ ಅಲ್ಲಿಂದ ಹೋಗುವಾಗ ಬೆದರಿಸಿ ಅವರ ಕಾರಿನ ಕೀ ಪಡೆದು ಮನೆಯ ಎದುರು ನಿಲ್ಲಿಸಿದ ಹುಂಡೈ ಐ10 ಕಾರಿನೊಂದಿಗೆ ಇಬ್ಬರು ದರೋಡೆ ಕೋರರು ಪರಾರಿಯಾದರು. ಕಳವಾದ ಚಿನ್ನಾಭರಣದ ಮೌಲ್ಯ 1.25ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ದರೋಡೆಕೋರರು ಮನೆಯ ಮಹಡಿ ಮೇಲಿನ ಬಾಗಿಲನ್ನು ತೂತು ಮಾಡಿ ಆ ಮೂಲಕ ಕೈಹಾಕಿ ಒಳಗಿನ ಚಿಲಕ ತೆಗೆದು ಒಳನುಗ್ಗಿದ್ದಾರೆ. ಡಾ. ದೇವಿಪ್ರಸಾದ್ ಭಟ್ ಅವರಿಗೆ ಮೂವರು ಮಕ್ಕಳಿದ್ದು ಅವರು ಮದುವೆ ಯಾಗಿ ಇದೀಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಈ ಮನೆಯಲ್ಲಿ ಇವರಿಬ್ಬರೆ ನೆಲೆಸಿದ್ದಾರೆ.

2015ರ ಎಪ್ರಿಲ್ ತಿಂಗಳಲ್ಲಿಯೂ ಇಂತಹದ್ದೆ ಘಟನೆ ಇದೇ ಮನೆಯಲ್ಲಿ ನಡೆದಿತ್ತು. ಮನೆಯ ಎದುರು ಬಾಗಿಲಿನಿಂದ ನುಗ್ಗಿದ ಓರ್ವ ಮುಸುಕು ಧಾರಿ ವ್ಯಕ್ತಿ ಇದೇ ದಂಪತಿಯನ್ನು ಬೆದರಿಸಿ ಕಳವಿಗೆ ಯತ್ನಿಸಿದ್ದನು. ಮನೆ ಯಲ್ಲಿ ಯಾವುದೇ ವಸ್ತು ದೊರಕದ ಕಾರಣ ಬರಿಗೈಯಲ್ಲಿ ಹಿಂತಿರುಗಿದ್ದನು. ಸ್ಥಳಕ್ಕೆ ಆಗಮಿಸಿದ ಮಲ್ಪೆ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದರು. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಣ್ಣಾಮಲೈ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್, ಡಿವೈಎಸ್ಪಿ ಕುಮಾರಸ್ವಾಮಿ, ಮಲ್ಪೆ ಎಸ್ಸೈ ರವಿಕುಮಾರ್ ಮನೆಗೆ ತೆರಳಿ ಮಾಹಿತಿ ಕಲೆಹಾಕಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಕಕ್ಕುಂಜೆ ಬಳಿ ಕಾರು ಪತ್ತೆ

ದರೋಡೆಕೋರರು ಚಿನ್ನಾಭರಣದೊಂದಿಗೆ ಕಾರಿನಲ್ಲಿ ಪರಾರಿಯಾಗಿ ನಂತರ ಅದನ್ನು ಪೆರಂಪಳ್ಳಿ ಸಮೀಪದ ಕಕ್ಕುಂಜೆ ಎಂಬಲ್ಲಿ ಬಿಟ್ಟು ಹೋಗಿ ದ್ದರು. ಈ ಬಗ್ಗೆ ಸ್ಥಳೀಯರಿಂದ ಇಂದು ಸಂಜೆ ವೇಳೆ ಕಾರು ಪತ್ತೆಯಾಗಿತ್ತು. ಕಾರಿನ ಕೀ ಕೂಡ ಅದರಲ್ಲೇ ಬಿಟ್ಟುಹೋಗಿದ್ದಾರೆ. ಆದರೆ ಕಳವುಗೈದ ಚಿನ್ನಾ ಭರಣ ಪತ್ತೆಯಾಗಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X