Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸ್ನೇಹಿತರಿಗಾಗಿ ಪ್ರಾಣ ತ್ಯಾಗ ಮಾಡಿದ...

ಸ್ನೇಹಿತರಿಗಾಗಿ ಪ್ರಾಣ ತ್ಯಾಗ ಮಾಡಿದ ಯುವಕ

ಢಾಕಾ ಭಯೋತ್ಪಾದಕ ದಾಳಿಯ ನಡುವೆ ಅನಾವರಣಗೊಂಡ ಮಾನವೀಯ ಸಂದೇಶ

ವಾರ್ತಾಭಾರತಿವಾರ್ತಾಭಾರತಿ4 July 2016 11:08 PM IST
share
ಸ್ನೇಹಿತರಿಗಾಗಿ ಪ್ರಾಣ ತ್ಯಾಗ ಮಾಡಿದ ಯುವಕ

 ಢಾಕಾ, ಜು. 4: ಢಾಕಾದ ಹೋಲಿ ಆರ್ಟಿಸಾನ್ ಬೇಕರಿಯ ಮೇಲೆ ಜುಲೈ 1ರಂದು ಭಯೋತ್ಪಾದಕರು ನಡೆಸಿದ ದಾಳಿಯ ವೇಳೆ, ತನಗೆ ಬದುಕುವ ಅವಕಾಶವಿದ್ದರೂ, ತನ್ನಿಬ್ಬರು ಸ್ನೇಹಿತರ ಜೊತೆಗೆ ಪ್ರಾಣ ಬಿಟ್ಟ ಬಾಂಗ್ಲಾದೇಶದ 20 ವರ್ಷದ ಯುವಕ ಫರಾಝ್ ಅಯಾಝ್ ಹುಸೈನ್‌ರನ್ನು ಪತ್ರಿಕೆಯೊಂದು ತನ್ನ ಸಂಪಾದಕೀಯದಲ್ಲಿ ಕೊಂಡಾಡಿದೆ.

ತನ್ನ ಶೌರ್ಯ ಮತ್ತು ತ್ಯಾಗದ ಮೂಲಕ ಮುಂದಿನ ಹಲವು ತಲೆಮಾರುಗಳ ಬಾಂಗ್ಲಾದೇಶೀಯರಿಗೆ ಹೇಗೆ ಬದುಕಬೇಕು ಎಂಬ ಬಗ್ಗೆ ಈ ಯುವಕ ಪ್ರೇರಣೆ ನೀಡಿದ್ದಾರೆ ಎಂಬುದಾಗಿ ‘ಢಾಕಾ ಟ್ರಿಬ್ಯೂನ್’ನ ಸಂಪಾದಕೀಯ ಹೇಳಿದೆ.

ಉದಾತ್ತತೆ ಮತ್ತು ಶ್ರೇಷ್ಠತೆ ಈ ಜಗತ್ತಿನಲ್ಲಿ ಇನ್ನೂ ನೆಲೆಸಿದೆ ಹಾಗೂ ನಮ್ಮನ್ನು ಬೆರಳೆಣಿಕೆಯ ತಪ್ಪುದಾರಿಗೆಳೆಯಲ್ಪಟ್ಟ ಹಾಗೂ ಹಂತಕ ಯುವಕರ ಕೃತ್ಯಗಳಿಂದ ನಿರೂಪಿಸಬಾರದು ಎಂಬುದನ್ನು ಈ ಯುವಕ ನಮಗೆ ತೋರಿಸಿಕೊಟ್ಟಿದ್ದಾರೆ ಎಂದು ಪತ್ರಿಕೆ ಬಣ್ಣಿಸಿದೆ.

ಮಾನವತೆಯ ಅತ್ಯಂತ ಕೆಟ್ಟ ಮುಖವನ್ನು ಪ್ರತನಿಧಿಸುವ ಹಂತಕರಿಗೆ ಈ ದೇಶ ಜನ್ಮ ಕೊಟ್ಟಿದೆಯೇ ಎಂಬ ಬಗ್ಗೆ ದೇಶವು ವಿಸ್ಮಯಪಡುತ್ತಿರುವಾಗ, ಫರಾಝ್‌ರಂಥ ಯುವಕರಿಗೂ ಬಾಂಗ್ಲಾದೇಶ ಜನ್ಮ ನೀಡಿದೆ ಎಂಬ ಸಂಗತಿಯಿಂದ ನಾವು ಸಮಾಧಾನ ತಂದುಕೊಳ್ಳಬಹುದು ಎಂದಿದೆ.

 ನಿನ್ನ ಜೀವವನ್ನು ಉಳಿಸಿಕೊಳ್ಳಬಹುದು, ನೀನು ಇಲ್ಲಿಂದ ಹೋಗಬಹುದು ಎಂಬುದಾಗಿ ಭಯೋತ್ಪಾದಕರು ಫರಾಝ್‌ಗೆ ಸೂಚಿಸಿದರು. ಆದರೆ, ಅವರ ಇಬ್ಬರು ಸ್ನೇಹಿತರಾದ ಅಬಿಂತಾ ಕಬೀರ್ ಮತ್ತು ತಾರಿಶಿ ಜೈನ್‌ರನ್ನು ಹೋಗಲು ಭಯೋತ್ಪಾದಕರು ಬಿಡಲಿಲ್ಲ. ಆಗ, ತನ್ನ ಜೀವವನ್ನು ಉಳಿಸುವ ಯೋಚನೆಯನ್ನು ಕೈಬಿಟ್ಟು ತನ್ನ ಸ್ನೇಹಿತರೊಂದಿಗೇ ಇದ್ದು, ಅವರಿಗೆ ಏನು ಸಂಭವಿಸುತ್ತದೋ ಅದನ್ನೇ ಅನುಭವಿಸಲು ಫರಾಝ್ ನಿರ್ಧರಿಸಿದರು.

ಮರು ದಿನ ಆ ಮೂವರು ಸ್ನೇಹಿತರ ಮೃತದೇಹಗಳು ಪತ್ತೆಯಾದವು. ಫರಾಝ್ ಓರ್ವ ಹೀರೋ ಆಗಿ ಈ ಲೋಕದಿಂದ ನಿರ್ಗಮಸಿದರು ಎಂದು ಸಂಪಾದಕೀಯ ಬಣ್ಣಿಸಿದೆ.

ಐಎಸ್‌ಐ ಪಿತೂರಿ: ಬಾಂಗ್ಲಾ ಆರೋಪ

ಪಾಕಿಸ್ತಾನದ ಗುಪ್ತಚರ ಸಂಘಟನೆ ಐಎಸ್‌ಐ ದಾಳಿ ಸಂಘಟಿಸಿದೆ ಎಂದು ಪ್ರಧಾನಿ ಶೇಖ್ ಹಸೀನಾರ ರಾಜಕೀಯ ಸಲಹಾಕಾರ ಹುಸೈನ್ ತೌಫೀಕ್ ಇಮಾಮ್ ಆರೋಪಿಸಿದ್ದಾರೆ.

‘‘ಪಾಕಿಸ್ತಾನದ ಐಎಸ್‌ಐ ಮತ್ತು ಜಮಾತ್ ನಡುವಿನ ನಂಟು ಎಲ್ಲರಿಗೂ ಗೊತ್ತಿರುವಂಥಾದ್ದೆ. ಈಗಿನ ಸರಕಾರವನ್ನು ಅಸ್ಥಿರಗೊಳಿಸಲು ಅವರು ಬಯಸುತ್ತಿದ್ದಾರೆ’’ ಎಂದು ಇಮಾಮ್ ಟಿವಿ ಚಾನೆಲೊಂದಕ್ಕೆ ತಿಳಿಸಿದರು.

‘‘ಜಮಾತ್ ಮತ್ತು ಸ್ಥಳೀಯ ಭಯೋತ್ಪಾದಕ ಗುಂಪುಗಳು ಮಾಡುವಂತೆ ಎಲ್ಲ ಬಲಿಪಶುಗಳನ್ನು ಕಡಿದು ಕೊಲ್ಲಲಾಗಿದೆ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X