Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಫ್ಟಿಂಗ್ ಮೂಲಕ ಸಂಚಾರಿ ನಿಯಮಗಳ ಜಾಗೃತಿ...

ರಾಫ್ಟಿಂಗ್ ಮೂಲಕ ಸಂಚಾರಿ ನಿಯಮಗಳ ಜಾಗೃತಿ ಮೂಡಿಸಿದ ಶಿವಮೊಗ್ಗ ಎಸ್ಪಿ!

ವಾರ್ತಾಭಾರತಿವಾರ್ತಾಭಾರತಿ5 July 2016 4:59 PM IST
share
ರಾಫ್ಟಿಂಗ್ ಮೂಲಕ ಸಂಚಾರಿ ನಿಯಮಗಳ ಜಾಗೃತಿ ಮೂಡಿಸಿದ ಶಿವಮೊಗ್ಗ ಎಸ್ಪಿ!

ಶಿವಮೊಗ್ಗ, ಜು.5: ತಮ್ಮ ನೇರನಿರ್ಭೀಡ ಕಾರ್ಯವೈಖರಿಯ ಮೂಲಕ ’ಟ್ರಬಲ್ ಶೂಟರ್’ ಐಪಿಎಸ್ ಅಧಿಕಾರಿ ಎಂಬ ಬಿರುದಿಗೆ ಪಾತ್ರರಾಗಿರುವ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚೆನ್ನಣ್ಣನವರ್ ಮಂಗಳವಾರ ಮತ್ತೊಂದು ಸಾಹಸ ಮಾಡಿದ್ದಾರೆ. ಮೈದುಂಬಿ ಹರಿಯುತ್ತಿರುವ, ಪ್ರವಾಹದ ಭೀತಿ ಸೃಷ್ಟಿಸಿರುವ ತುಂಗಾ ನದಿಯಲ್ಲಿ ’ರಿವರ್ ರಾಫ್ಟಿಂಗ್’ ನಡೆಸುವ ಮೂಲಕ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ವಿಭಿನ್ನ ಸಾಹಸ ಕಾರ್ಯ ಮಾಡಿದ್ದಾರೆ.

ಹೊರವಲಯ ಮತ್ತೂರು ಗ್ರಾಮದಿಂದ ಆರಂಭವಾದ ’ರಾಫ್ಟಿಂಗ್’ ಸಾಹಸವು ನಗರದ ಕೋಟೆ ರಸ್ತೆ ಸಮೀಪದ ಕೋರ್ಪಳಯ್ಯನ ಛತ್ರದ ಬಳಿ ಅಂತ್ಯಗೊಂಡಿತು. ಈ ವೇಳೆ ಸಾರ್ವಜನಿಕರು ಎಸ್ಪಿ ಸೇರಿದಂತೆ ’ರಾಫ್ಟಿಂಗ್’ ಸಾಹಸದಲ್ಲಿ ಭಾಗಿಯಾಗಿದ್ದವರನ್ನು ಆತ್ಮೀಯವಾಗಿ ಅಭಿನಂದಿಸಿದರು. ಸಂಚಾರಿ ನಿಯಮಗಳ ಬಗ್ಗೆ ವಿಭಿನ್ನವಾಗಿ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಸಾಹಸ ಅಕಾಡೆಮಿ ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಈ ’ರಾಫ್ಟಿಂಗ್’ ಸಾಹಸ ಆಯೋಜಿಸಲಾಗಿತ್ತು. ಸುಮಾರು 10 ಜನರಿದ್ದ ತಂಡವು 7 ಕಿ.ಮೀ.ವರೆಗೆ ನದಿಯಲ್ಲಿ ರಾಫ್ಟಿಂಗ್ ನಡೆಸಿ, ನಾಗರೀಕರ ಗಮನ ಸೆಳೆಯುವ ಕೆಲಸ ಮಾಡಿತು.

ಸಂಚಾರಿ ನಿಯಮಗಳ ಬಗ್ಗೆ ವಿಭಿನ್ನವಾಗಿ ಜನಜಾಗೃತಿ ಮೂಡಿಸುವ ಉದ್ದೇಶದಿಂದ ತುಂಬಿ ಹರಿಯುತ್ತಿರುವ ತುಂಗಾ ನದಿಯಲ್ಲಿ ರಾಫ್ಟಿಂಗ್ ಸಾಹಸ ನಡೆಸಲಾಯಿತು. ನಿಜಕ್ಕೂ ಇದೊಂದು ವಿಭಿನ್ನ ಅನುಭವ ನೀಡಿತು ಎಂದು ಎಸ್ಪಿ ರವಿ ಡಿ. ಚೆನ್ನಣ್ಣನವರ್ ತಿಳಿಸಿದ್ದಾರೆ. ’ಈ ಹಿಂದೆ ನರ್ಮದಾ ಹಾಗೂ ಗಂಗಾ ನದಿಗಳಲ್ಲಿಯೂ ರಾಫ್ಟಿಂಗ್ ನಡೆಸಿದ್ದೆ. ಇದರಿಂದ ತುಂಗಾ ನದಿಯಲ್ಲಿ ‘ರಾಫ್ಟಿಂಗ್ ನಡೆಸುವುದು ಸುಲಭವಾಯಿತು. ಹೊಸ ಅನುಭವ ನೀಡಿತು. ಈ ಸಾಹಸಕ್ಕೆ ಕೈಜೋಡಿಸಿದ ಪ್ರತಿಯೋರ್ವರಿಗೆ ಧನ್ಯವಾದ ಅರ್ಪಿಸುವುದಾಗಿ ಎಸ್ಪಿ ಹೇಳಿದರು. ’ಸಂಚಾರಿ ನಿಯಮಗಳ ಉಲ್ಲಂಘನೆಯಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸಾವುನೋವುಗಳು ಸಂಭವಿಸುತ್ತಿವೆ. ಪ್ರತಿಯೋರ್ವ ನಾಗರಿಕರು ಸಂಚಾರಿ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಮಾಡಬೇಕು. ವಾಹನ ಸಂಚಾರದ ವೇಳೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯವಹಿಸಬಾರದು’ ಎಂದು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

ರಾಪ್ಟಿಂಗ್ ಸಾಹಸದಲ್ಲಿ ಭಾಗಿಯಾಗಿದ್ದ ಜಿಲ್ಲಾ ವಾರ್ತಾಧಿಕಾರಿ ಹೀಮಂತರಾಜು ಮಾತನಾಡಿ, ’ತುಂಬಿ ಹರಿಯುತ್ತಿರುವ ತುಂಗಾ ನದಿಯಲ್ಲಿ ರಾಫ್ಟಿಂಗ್ ನಡೆಸಿದ್ದು ನಿಜಕ್ಕೂ ತಮ್ಮ ಜೀವನದಲ್ಲಿ ಮರೆಯಲಾಗದ ರೋಚಕ ಅನುಭವಗಳಲ್ಲೊಂದಾಗಿದೆ. ಈ ರೀತಿಯ ಸಾಹಸ ಕಾರ್ಯಗಳು ನಮ್ಮಲ್ಲಿ ಹೊಸ ರೀತಿಯ ಆತ್ಮವಿಶ್ವಾಸ ಮೂಡಿಸುತ್ತವೆ. ಯುವಕರಿಗೆ ಸ್ಪೂರ್ತಿಯಾಗಿದೆ’ ಎಂದು ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಏನಿದು ’ರಿವರ್ ರಾಫ್ಟಿಂಗ್’ ಸಾಹಸ...?

ಜಲ ಕ್ರೀಡೆಗಳಲ್ಲಿ ’ರೀವರ್ ರಾಫ್ಟಿಂಗ್’ ಅತ್ಯಂತ ರೋಚಕಭರಿತವಾದುದಾಗಿದೆ. ರಬ್ಬರ್ ಟ್ಯೂಬ್ ಗಳಿಂದ ತಯಾರಿಸಿದ ಬೋಟ್ ಮಾದರಿಯ ವಸ್ತುವಿಗೆ ರಾಫ್ಟಿಂಗ್ ಎಂದು ಕರೆಯಲಾಗುತ್ತದೆ. ಹಳ್ಳಿಗರು ಬಳಸುವ ತೆಪ್ಪದಲ್ಲಿ ಮಾದರಿಯಲ್ಲಿ ಇದು ಇರುತ್ತದೆ. ಮಳೆಗಾಲದ ವೇಳೆ ಮೈದುಂಬಿ ಹರಿಯುವ ನದಿ, ಹೊಳೆಗಳಲ್ಲಿ ಜಲ ಸಾಹಸಿಗರು ರಾಫ್ಟಿಂಗ್ ನಡೆಸುತ್ತಾರೆ. ಇದೊಂದು ರೋಚಕ ಸಾಹಸವಾಗಿದೆ. ಕೊಂಚ ಹೆಚ್ಚುಕಡಿಮೆಯಾದರೂ ಅಪಾಯ ಕಟ್ಟಿಟ್ಟ ಬುತ್ತಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X