Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಉಡುಪಿ ಬಿಷಪ್ ರ ಈದ್ ಸಂದೇಶ

ಉಡುಪಿ ಬಿಷಪ್ ರ ಈದ್ ಸಂದೇಶ

ವಾರ್ತಾಭಾರತಿವಾರ್ತಾಭಾರತಿ5 July 2016 8:34 PM IST
share
ಉಡುಪಿ ಬಿಷಪ್ ರ ಈದ್ ಸಂದೇಶ

ಪವಿತ್ರ ರಮಝಾನ್‌ನಲ್ಲಿ ಅನ್ನಾಹಾರ, ದೇಹೇಚ್ಛೆಗಳನ್ನು ತ್ಯಾಗ ಮಾಡಿ ನಿರ್ಮಲ ದೇಹ, ಮನಸ್ಸು ಹಾಗೂ ಹೃದಯದಿಂದ ಭಗವಂತನಿಗೆ ಕೃತಜ್ಞತೆಗಳನ್ನು ಸಲ್ಲಿಸುವ ಪವಿತ್ರ ಈದುಲ್ ಫಿತ್ರ್ ಆಚರಿಸುವ ಎಲ್ಲ ಮುಸ್ಲಿಮ್ ಸೋದರ-ಸೋದರಿಯರಿಗೆ ಉಡುಪಿ ಕ್ರೈಸ್ತ ಕೆಥೊಲಿಕ್ ಧರ್ಮಕ್ಷೇತ್ರದ ಎಲ್ಲ ಕೆಥೊಲಿಕ್ ಕ್ರೈಸ್ತರ ಪರವಾಗಿ ಹಬ್ಬದ ಹಾರ್ದಿಕ ಶುಭಾಶಯಗಳು.

ರಮಝಾನ್ ಉಪವಾಸ ಆಚರಣೆಯ ಜತೆಜತೆಗೆ ತಮ್ಮ ಆದಾಯದ ಸ್ವಲ್ಪಭಾಗವನ್ನು ಬಡವರಿಗೆ ದಾನ ನೀಡುವುದು, ಎಷ್ಟೇ ಬಡವರಾಗಿದ್ದರೂ ರಮಝಾನ್ ತಿಂಗಳಲ್ಲಿ ಮನೆಯೆದುರು ಬರುವ ಯಾರೇ ಬಡವರನ್ನೂ ಬರಿಗೈಯಲ್ಲಿ ಕಳುಹಿಸದೆ ಅವರಿಗೆ ಕೈಲಾದ ಸಹಾಯವನ್ನು ಮಾಡುವುದು ನಿಜವಾಗಿಯೂ ಈ ಹಬ್ಬದ ಮಾನವೀಯ ಮುಖವನ್ನು ತೋರಿಸುತ್ತದೆ.

ಮನಸ್ಸಿನ ಶುದ್ಧೀಕರಣಕ್ಕಾಗಿ ಈ ಮಾಸದಲ್ಲಿ ನಿತ್ಯವೂ ಐದು ಬಾರಿ ಪ್ರಾರ್ಥನೆ ಸಲ್ಲಿಸಿ, ದುಶ್ಚಟಗಳ ಸಹವಾಸದಿಂದ ದೂರವಿದ್ದು ಕಾಮ, ಕ್ರೋಧ, ಲೋಭ, ಮೋಹ, ಮದ, ಮಾತ್ಸರ್ಯಗಳೆಂಬ ಅರಿಷಡ್ವರ್ಗಗಳನ್ನು ನಿಯಂತ್ರಿಸಿ ದೇಹ ಮತ್ತು ಆತ್ಮ ಶುದ್ಧೀಕರಣ ಮಾಡಿಕೊಳ್ಳುವುದರಿಂದ ಸ್ವ-ನಿಯಂತ್ರಣ ಹಾಗೂ ಶಿಸ್ತಿನ ಜೀವನಕ್ಕೆ ನಾಂದಿ ಹಾಡಿದಂತಾಗುವುದು ಮಾತ್ರವಲ್ಲ, ಆಧ್ಯಾತ್ಮಿಕವಾಗಿ ಭಗವಂತನ ಅನುಗ್ರಹವನ್ನು ಪಡೆಯಲು ಸಾಧ್ಯವಾಗುತ್ತದೆ.

 ಸಹಬಾಳ್ವೆ, ಶಾಂತಿ, ಸೌಹಾರ್ದ, ಇತರರ ಒಳಿತು, ಸಾಮಾಜಿಕ ಕಳಕಳಿಯನ್ನು ಜಾಗೃತಗೊಳಿಸುವ ರಮಝಾನ್ ಆಚರಣೆಯಲ್ಲಿ ಮುಸ್ಲಿಮ್ ಸಮುದಾಯ ಭಾಗಿಯಾಗಿದ್ದು, ಇತರ ಸಮಾಜದ ಜನರಿಗೂ ಅವರ ಆಚರಣೆ ಮಾದರಿಯಾಗಿದೆ. ಈ ಹಬ್ಬವು ಎಲ್ಲಾ ಮುಸ್ಲಿಮ್ ಬಾಂಧವರಲ್ಲಿ ನವ ಜೀವನಸ್ಫೂರ್ತಿಯನ್ನು ತುಂಬಲಿ. ಎಲ್ಲಾ ಮಾನವರು ಒಂದೇ ಕುಟುಂಬವಾಗಿ, ಸಂವಾದ, ಸಹಕಾರ, ಐಕ್ಯತೆ, ಶಾಂತಿ ಹಾಗೂ ನ್ಯಾಯವನ್ನು ಪ್ರತಿಪಾದಿಸಲು ದೇವರು ನಮ್ಮನ್ನೆಲ್ಲಾ ಒಂದುಗೂಡಿಸಲಿ. ಶಾಂತಿ ಸಮಾಧಾನ ನಮ್ಮೆಲ್ಲರಲ್ಲಿ ನೆಲೆಸಲಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X