ನಾಪತ್ತೆಯಾಗಿದ್ದ ವ್ಯಕ್ತಿ ನಿಗೂಢವಾಗಿ ಮೃತ್ಯು
ಹಿರಿಯಡ್ಕ, ಜು.5: ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಇಂದು ಬೆಳಗ್ಗೆ 11ಗಂಟೆ ಸುಮಾರಿಗೆ ಕುಕ್ಕೆಹಳ್ಳಿ ಗ್ರಾಮದ ಬಜೆ ಹಾಡಿಯಲ್ಲಿ ಪತ್ತೆಯಾಗಿದೆ.
ಮೃತರನ್ನು ಹಾವಂಜೆ ಬಾಣಬೆಟ್ಟು ನಿವಾಸಿ ರಂಗಯ್ಯ ಶೆಟ್ಟಿ ಎಂಬವರ ಮಗ ನಾರಾಯಣ ಶೆಟ್ಟಿ(55) ಎಂದು ಗುರುತಿಸಲಾಗಿದೆ.
ಇವರು ಜು.4 ರಂದು ಬೆಳಗ್ಗೆ ಪತ್ನಿ ಮನೆ ಬೆಳ್ಳಂಪಳ್ಳಿಗೆ ಹೋಗುವುದಾಗಿ ಹೇಳಿ ಹೋದವರು ನಾಪತ್ತೆಯಾಗಿದ್ದರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸ್ಥಳೀಯರಿಂದ ದೊರೆತ ಮಾಹಿತಿಯಂತೆ ಅವರ ಮೃತದೇಹ ಬಜೆ ಹಾಡಿಯಲ್ಲಿ ಪತ್ತೆಯಾಗಿದೆ.
ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Next Story