Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವೀಸಾ ಅವಧಿ ಮುಗಿದ 1,500 ಆಫ್ರಿಕನ್...

ವೀಸಾ ಅವಧಿ ಮುಗಿದ 1,500 ಆಫ್ರಿಕನ್ ವಿದ್ಯಾರ್ಥಿಗಳಿಗೆ ಗಡೀಪಾರು ಭೀತಿ

ವಾರ್ತಾಭಾರತಿವಾರ್ತಾಭಾರತಿ6 July 2016 1:12 PM IST
share
ವೀಸಾ ಅವಧಿ ಮುಗಿದ 1,500 ಆಫ್ರಿಕನ್ ವಿದ್ಯಾರ್ಥಿಗಳಿಗೆ ಗಡೀಪಾರು ಭೀತಿ

ಬೆಂಗಳೂರು, ಜು.6: ವೀಸಾ ಅವಧಿ ಮುಗಿದ ಬಳಿಕವೂ ದೇಶದಲ್ಲಿ ವಾಸಿಸುತ್ತಿರುವ 1500 ಆಫ್ರಿಕನ್ ಪ್ರಜೆಗಳ ಪಟ್ಟಿಯನ್ನು ಬೆಂಗಳೂರು ಪೊಲೀಸರು ಸಿದ್ಧಪಡಿಸಿದ್ದು ಇವರನ್ನೆಲ್ಲಾ ಜುಲೈ ಅಂತ್ಯದೊಳಗೆ ದೇಶದಿಂದ ಹೊರ ಕಳುಹಿಸಲಾಗುವುದು ಎಂದು ತಿಳಿದು ಬಂದಿದೆ.

ಇತ್ತೀಚೆಗೆ ಡ್ರಗ್ಸ್ ಜಾಲದಲ್ಲಿ ಕೆಲ ಆಫ್ರಿಕನ್ ಪ್ರಜೆಗಳು ಸಿಕ್ಕಿ ಬಿದ್ದ ನಂತರ ಪೊಲೀಸರು ವೀಸಾ ಅವಧಿ ಮುಗಿದ ನಂತರವೂ ಇಲ್ಲಿಯೇ ಇರುವ ಆಫ್ರಿಕನ್ನರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದರು. ಬೆಂಗಳೂರು ಪೊಲೀಸರು ಸಿದ್ಧಪಡಿಸಿದ ಪಟ್ಟಿಯನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಸಲ್ಲಿಸಲಾಗಿದೆ. ಪೊಲೀಸ್ ದಾಖಲೆಗಳ ಪ್ರಕಾರ ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ನಡೆಸುತ್ತಿರುವ 6,000 ಆಫ್ರಿಕನ್ ವಿದ್ಯಾರ್ಥಿಗಳಲ್ಲಿ 1,500 ಕ್ಕೂ ಹೆಚ್ಚು ಮಂದಿಯ ವೀಸಾ ಅವಧಿ ಮುಗಿದಿದೆ.

‘‘ಕಳೆದ ವಾರ 50 ವಿದ್ಯಾರ್ಥಿಗಳನ್ನು ದೇಶದಿಂದ ಹೊರ ಕಳುಹಿಸಲಾಗಿದೆ’’ ಎಂದು ಬೆಂಗಳೂರು ಪೂರ್ವ ಎಸಿಪಿ (ಕಾನೂನು ಹಾಗೂ ಸುವ್ಯವಸ್ಥೆ) ಪಿ . ಹರಿಶೇಖರನ್ ಹೇಳಿದ್ದಾರೆ. ಆದರೆ, ಪೊಲೀಸರ ಕ್ರಮ ಆಫ್ರಿಕನ್ ವಿದ್ಯಾರ್ಥಿಗಳ ವಕೀಲರನ್ನು ಕೆರಳಿಸಿದೆ. ‘‘ಇವರೆಲ್ಲಾ ವಿದ್ಯಾರ್ಥಿಗಳು, ಕ್ರಿಮಿನಲ್‌ಗಳಲ್ಲ,’’ ಎಂದು ಅವರು ಹೇಳಿದ್ದಾರೆ. ಕೆಲ ಸಾಮಾಜಿಕ ಕಾರ್ಯಕರ್ತರು ಹೇಳುವಂತೆ ಈ ವಿದ್ಯಾರ್ಥಿಗಳ ವೀಸಾವನ್ನು ಹಲವಾರು ಕಾರಣಗಳನ್ನು ನೀಡಿ ವಿದೇಶೀಯರ ಪ್ರಾದೇಶಿಕ ನೋಂದಣಿ ಕಚೇರಿಯನ್ನು ವಿಸ್ತರಿಸದೇ ಇರುವ ಕಾರಣ ಸಮಸ್ಯೆ ಎದುರಾಗಿದ್ದು, ಹಲವು ಪ್ರಕರಣಗಳಲ್ಲಿ ಶುಲ್ಕ ಪಾವತಿಸದೇ ಇರುವುದರಿಂದ ಅವರಿಗೆ ವೀಸಾ ವಿಸ್ತರಣೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ.

‘‘ಹೆಚ್ಚಿನ ಆಫ್ರಿಕನ್ ವಿದ್ಯಾರ್ಥಿಗಳು ಮೂರನೇ ಅಥವಾ ನಾಲ್ಕನೆ ವರ್ಷದ ವಿದ್ಯಾರ್ಥಿಗಳಾಗಿರುವುದರಿಂದ ಅವರನ್ನು ಹೊರ ಕಳುಹಿಸಿದಲ್ಲಿ ಅವರ ಭವಿಷ್ಯ ಡೋಲಾಯಮಾನವಾಗುವುದು,’’ ಎಂದು ಆಲ್ಟರ್ನೇಟಿವ್ ಲಾಯರ್ಸ್ ಫೋರಂನ ದರ್ಶನ ಮಿತ್ರ ಹೇಳಿದ್ದಾರೆ.

ಆದರೆ ಈ ವಾದಗಳೆಲ್ಲವನ್ನೂ ನಿರಾಕರಿಸಿರುವ ಬೆಂಗಳೂರು ಪೊಲೀಸರು ಹೇಳುವಂತೆ ಆಫ್ರಿಕನ್ ವಿದ್ಯಾರ್ಥಿಗಳ ಸಮಸ್ಯೆಗೆ ಅವರೇ ಕಾರಣರಾಗಿದ್ದಾರೆ. ‘‘ಅವರಿಗೆ ನಿಜವಾಗಿಯೂ ವೀಸಾ ವಿಸ್ತರಣೆ ದೊರೆಯುತ್ತಿಲ್ಲವೆಂದಾದಲ್ಲಿ ಅವರು ನಮ್ಮನ್ನು ಸಂಪರ್ಕಿಸಲಿ, ನಾವು ಅವರಿಗೆ ಸಹಾಯ ಮಾಡುತ್ತೇವೆ. ಆದರೆ ಅವರ ಕ್ರಿಮಿನಲ್ ಹಿನ್ನೆಲೆಯನ್ನು ನಾವು ಕೆದಕಬಹುದೆಂಬ ಕಾರಣಕ್ಕೆ ಅವರು ಬರಲು ಹಿಂಜರಿಯುತ್ತಿದ್ದಾರೆ’’ ಎಂದು ಎಸಿಪಿ ಹರಿಶೇಖರನ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X