Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯ: ಪೊಲೀಸ್ ಠಾಣೆ ಮೆಟ್ಟಿಲೇರಿದ ಬಸ್...

ಸುಳ್ಯ: ಪೊಲೀಸ್ ಠಾಣೆ ಮೆಟ್ಟಿಲೇರಿದ ಬಸ್ ಟೈಮಿಂಗ್ ವಿವಾದ!

ವಾರ್ತಾಭಾರತಿವಾರ್ತಾಭಾರತಿ8 July 2016 7:55 PM IST
share
ಸುಳ್ಯ: ಪೊಲೀಸ್ ಠಾಣೆ ಮೆಟ್ಟಿಲೇರಿದ ಬಸ್ ಟೈಮಿಂಗ್ ವಿವಾದ!

ಸುಳ್ಯ, ಜು.8: ಸುಳ್ಯ-ಕೋಲ್ಚಾರು-ಕನ್ನಡಿತೋಡು ರಸ್ತೆಯಲ್ಲಿ ಬಸ್ ಟೈಮಿಂಗ್ ಕುರಿತು ಕೆಎಸ್ಸಾರ್ಟಿಸಿ ಹಾಗೂ ಗುರೂಜಿ ಟ್ರಾವೆಲ್ಸ್ ಹೆಸರಿನ ಬಸ್ ಸಿಬ್ಬಂದಿಯ ಮಧ್ಯೆ ನಿತ್ಯ ಸಂಘರ್ಷಗಳು ನಡೆಯುತ್ತಿದ್ದು, ವಿವಾದ ಬಗೆಹರಿಸುವ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಮಾತುಕತೆ ನಡೆಯಿತು.

ಕೋಲ್ಚಾರು ಬಂದಡ್ಕ ಅಂತಾರಾಜ್ಯ ರಸ್ತೆ ಅಭಿವೃದ್ಧಿಗೊಂಡು ಸಂಚಾರ ಯೋಗ್ಯವಾದ ಬಳಿಕ ಕೆಎಸ್ಸಾರ್ಟಿಸಿಯವರು ಕೋಲ್ಚಾರಿಗೆ ಹೋಗುತ್ತಿದ್ದ ಬಸ್‌ನ್ನು ಕೇರಳ ಗಡಿಭಾಗವಾದ ಕನ್ನಡಿತೋಡಿನವರೆಗೆ ವಿಸ್ತರಿಸಿದ್ದರು.

ಬಡ್ಡಡ್ಕಕ್ಕೆ ಬಸ್ ಓಡಿಸುತ್ತಿದ್ದ ಗುರೂಜಿ ಟ್ರಾವೆಲ್ಸ್‌ನವರೂ ಇದೇ ರಸ್ತೆಯಲ್ಲಿ ಹೊಸ ಪರವಾನಿಗೆ ಪಡೆದು ಬಸ್ ಓಡಿಸಲು ಆರಂಭಿಸಿದರು. ಬಸ್ ಟೈಮಿಂಗ್ ವಿಚಾರವಾಗಿ ಅವರುಗಳ ಮಧ್ಯೆ ಆಗಾಗ ಸಂಘರ್ಷಗಳು ನಡೆಯುತ್ತಿದ್ದವು. ಇದರಿಂದ ಈ ಭಾಗದ ಪ್ರಯಾಣಿಕರಿಗೆ ತೊಂದರೆಯಾಗುತ್ತಿತ್ತು. ಖಾಸಗಿ ಬಸ್‌ನವರು ಅವರಿಗೆ ನಿಗದಿ ಮಾಡಿದ ವೇಳೆಗೆ ಬಸ್ ಓಡಿಸದೆ ಇರುವ ಕುರಿತು ಸಾರಿಗೆ ಇಲಾಖೆಗೆ ದೂರುಗಳು ಹೋಗಿದ್ದವು.

ಈ ಪ್ರದೇಶದ ವಿದ್ಯಾರ್ಥಿಗಳಿಗೆ ಬಸ್‌ಪಾಸ್ ನೀಡಲು ಕೆಎಸ್ಸಾರ್ಟಿಸಿ ನಿರಾಕರಿಸಿದ್ದು, ಆಕ್ರೋಶಗೊಂಡ ವಿದ್ಯಾರ್ಥಿಗಳು ಶುಕ್ರವಾರ ಪೊಲೀಸ್ ಠಾಣೆಗೆ ತೆರಳಿ ಆಕ್ರೋಶ ವ್ಯಕ್ತಪಡಿಸಿದ್ದರು. ಬಳಿಕ ಊರಿನ ಮುಖಂಡರು ಸಾರಿಗೆ ಇಲಾಖೆ ಅಧಿಕಾರಿಗಳು, ಬಸ್ ಮಾಲಕರು, ಕೆಎಸ್ಸಾರ್ಟಿಸಿ ಅಧಿಕಾರಿಗಳ ಮಧ್ಯೆ ಎಸೈ ಸಮ್ಮುಖ ಮಾತುಕತೆ ನಡೆಯಿತು. ವಿದ್ಯಾರ್ಥಿಗಳಿಗೆ ಬಸ್‌ಪಾಸ್ ನೀಡುವುದಾಗಿ ಕೆಎಸ್ಸಾರ್ಟಿಸಿ ಅಧಿಕಾರಿಗಳು ಒಪ್ಪಿಕೊಂಡರು.

ಸಂಜೆ ಮೂರೂ ಮುಕ್ಕಾಲು ಗಂಟೆಗೆ ಅವಿನಾಶ್ ಎಂಬ ಹೆಸರಿನ ಬಸ್ ಸಂಚರಿಸುತ್ತಿದ್ದು, ಗುರೂಜಿ ಬಸ್ ಆರಂಭವಾದ ಬಳಿಕ ಅದು ತನ್ನ ಸಂಚಾರವನ್ನು ಸ್ಥಗಿತಗೊಳಿಸಿತ್ತು. ಹಾಗಾಗಿ ಆ ಸಮಯಕ್ಕೆ ಗುರೂಜಿ ಬಸ್‌ನವರು ಸಂಚಾರ ನಡೆಸಬೇಕು ಎಂಬ ಊರವರ ಬೇಡಿಕೆಗೆ ಗುರೂಜಿ ಟ್ರಾವೆಲ್ಸ್‌ನ ಮಾಲಕ ಮೋಹನ್ ಒಪ್ಪಿಗೆ ನೀಡಲಿಲ್ಲ. ಸಂಜೆ ಹಾಗೂ ಬೆಳಿಗ್ಗೆ ಕನ್ನಡಿತೋಡುವರೆಗೆ ಬಸ್ ಓಡಿಸುವುದಾಗಿ ಅವರು ಹೇಳಿದರು.

ಸಾರಿಗೆ ಇಲಾಖೆ ಪರವಾನಿಗೆಯಲ್ಲಿರುವಂತೆ ಅದೇ ಸಮಯಕ್ಕೆ ಕೆಎಸ್ಸಾರ್ಟಿಸಿ ಹಾಗೂ ಖಾಸಗಿ ಬಸ್ ಸಂಚರಿಸಬೇಕು. ಸಮಯ ತಪ್ಪಿಸಿ ಸಂಚರಿಸಿದರೆ ಊರಿನವರು ದೂರು ನೀಡಿದರೆ ಕ್ರಮ ಕೈಗೊಳ್ಳುವುದಾಗಿ ಎಸೈ ಚಂದ್ರಶೇಖರ ಹೇಳಿದರು. ಖಾಸಗಿ ವಾಹನದಲ್ಲಿ ಪರವಾನಿಗೆ ಇಲ್ಲದೆ ಜನರನ್ನು ಸಾಗಿಸಿದರೆ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು.

ಹಿರಿಯ ಮೋಟಾರ್ ವಾಹನ ನಿರೀಕ್ಷಕ ಹರೀಶ್, ಕೆಎಸ್ಸಾರ್ಟಿಸಿ ಪುತ್ತೂರು ಡಿಪೋ ಜ್ಯೂನಿಯರ್ ಅಸಿಸ್ಟೆಂಟ್ ನಾರಾಯಣ ಮಣಿಯಾಣಿ, ಸೂಪರಿಟೆಂಡೆಂಟ್ ನಾಗಾರಾಜ್, ಆಲೆಟ್ಟಿ ಗ್ರಾಮ ಪಂಚಾಯತ್ ಸದಸ್ಯರಾದ ಸುದರ್ಶನ ಪಾತಿಕಲ್ಲು, ಗೀತಾ ಕೋಲ್ಚಾರು, ಸ್ಥಳೀಯ ಮುಖಂಡ ಸತ್ಯಕುಮಾರ್ ಆಡಿಂಜ, ಧರ್ಮಪಾಲ ಕೊಯಿಂಗಾಜೆ, ಸೀತಾರಾಮ ಕೊಲ್ಲರಮೂಲೆ, ಚಂದ್ರಶೇಖರ ಕೋಲ್ಚಾರ್, ತೇಜಕುಮಾರ್ ಪೈಂಬೆಚ್ಚಾಲ್, ರಾಧಾಕೃಷ್ಣ ಪರಿವಾರಕಾನ ಮೊದಲಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X