Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ: ‘ಗ್ರಾಮವಾಸ್ತವ್ಯ’...

ಬಂಟ್ವಾಳ: ‘ಗ್ರಾಮವಾಸ್ತವ್ಯ’ ಹೂಡಲಿದ್ದಾರೆ ಪೊಲೀಸರು

ಧಾರ್ಮಿಕ ಕ್ಷೇತ್ರಗಳಲ್ಲಿ ಕಳ್ಳತನ ತಡೆಗೆ ಕ್ರಮ

ವಾರ್ತಾಭಾರತಿವಾರ್ತಾಭಾರತಿ8 July 2016 9:14 PM IST
share
ಬಂಟ್ವಾಳ: ‘ಗ್ರಾಮವಾಸ್ತವ್ಯ’ ಹೂಡಲಿದ್ದಾರೆ ಪೊಲೀಸರು

ಬಂಟ್ವಾಳ, ಜು. 8: ಬಂಟ್ವಾಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯ 11 ಗ್ರಾಮಗಳಿಗೆ ಸಂಬಂಧಿಸಿದಂತೆ ವಿವಿಧ ದೇವಸ್ಥಾನ -ದೈವಸ್ಥಾನ ಮತ್ತಿತರ ಧಾರ್ಮಿಕ ಕ್ಷೇತ್ರಗಳಲ್ಲಿ ಕಳ್ಳತನ ತಡೆಯುವ ನಿಟ್ಟಿನಲ್ಲಿ ಒಟ್ಟು ನಾಲ್ವರು ಪ್ರತ್ಯೇಕ ಪೊಲೀಸರನ್ನು ಗಸ್ತು ಪಡೆಗೆ ನಿಯೋಜಿಸಲಾಗಿದೆ. ಇವರು ಪ್ರತಿ ಗ್ರಾಮದಲ್ಲಿ ಸುತ್ತುವರಿದು ಅಲ್ಲೇ ’ಗ್ರಾಮ ವಾಸ್ತವ್ಯ’ ನಡೆಸಲಿದ್ದಾರೆ ಎಂದು ನಗರ ಠಾಣಾಧಿಕಾರಿ ನಂದ ಕುಮಾರ್ ಹೇಳಿದ್ದಾರೆ.

ತಾಲೂಕಿನ ಬಿ.ಸಿ.ರೋಡ್ ನಗರ ಪೊಲೀಸ್ ಠಾಣೆಯಲ್ಲಿ ನಡೆದ ವಿಶೇಷ ಸಭೆಯಲ್ಲಿ ವಿವಿಧ ದೇವಸ್ಥಾನ ಮತ್ತು ದೈವಸ್ಥಾನ ಆಡಳಿತ ಮಂಡಳಿ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿ ಅವರು ಮಾತನಾಡಿದರು.

ಇಲ್ಲಿನ ನಾಲ್ವರು ಸಿಬ್ಬಂದಿಯಾದ ರಾಜೇಶ, ಉದಯ ಟ್, ಅದ್ರಾಮ, ಸುಜು ಇವರು ‘ಗ್ರಾಮ ವಾಸ್ತವ್ಯ’ ನಡೆಸುವರು ಎಂದು ತಿಳಿಸಿದರು.

ಧಾರ್ಮಿಕ ಕ್ಷೇತ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸಿ, ಬೆಲೆ ಬಾಳುವ ಆಭರಣಗಳಿಗೆ ಪ್ರತ್ಯೇಕ ಲಾಕರ್ ವ್ಯವಸ್ಥೆ ಮತ್ತು ಪ್ರತಿ 10 ದಿನಕ್ಕೊಮ್ಮೆ ಕಾಣಿಕೆ ಡಬ್ಬಿ ಹಣ ತೆಗೆಯಬೇಕು. ಕಾವಲುಗಾರರ ನೇಮಕ ಮತ್ತು ಸರದಿಯಂತೆ ನಾಗರಿಕರು ಕಾವಲು ಕಾಯಲು ಪ್ರೇರೇಪಿಸುವುದರ ಜೊತೆಗೆ ಕ್ಷೇತ್ರದ ಕಿಟಕಿ, ಬಾಗಿಲು ಮತ್ತು ಛಾವಣಿ ಭದ್ರಗೊಳಿಸಬೇಕು ಎಂದು ಸಲಹೆ ನೀಡಿದರು.

ಪ್ರತಿ ಧಾರ್ಮಿಕ ಕ್ಷೇತ್ರಗಳ ಎದುರು ಆಡಳಿತ ಮಂಡಳಿ ಮುಖ್ಯಸ್ಥರ ಹೆಸರು ಮತ್ತು ಮೊಬೈಲ್ ಸಂಖ್ಯೆ ಜೊತೆಗೆ ಪೊಲೀಸ್ ಠಾಣೆ ಹೆಸರು ಮತ್ತು ದೂರವಾಣಿ ಸಂಖ್ಯೆ ಅಳವಡಿಸಬೇಕು ಎಂದರು.

ಕ್ರೈಂ ಎಸೈ ಗಂಗಾಧರಪ್ಪ, ಎಎಸೈ ಸಂಜೀವ ಕೆ., ಸೇಸಮ್ಮ, ಓಮನ ಎನ್.ಕೆ., ಪ್ರಮುಖರಾದ ಭುವನೇಶ ಶೆಟ್ಟಿ, ಜಯಶಂಕರ ಬಾಸ್ರಿತ್ತಾಯ, ಅಶೋಕ್ ಕುಮಾರ್ ಬರಿಮಾರು, ಜನಾರ್ದನ ಚೆಂಡ್ತಿಮಾರು, ಕ.ಕೃಷ್ಣಪ್ಪ, ವೆಂಕಪ್ಪ ಪೂಜಾರಿ, ಆರ್.ಚೆನ್ನಪ್ಪ ಕೋಟ್ಯಾನ್, ಶಶಿಧರ ಬ್ರಹ್ಮರಕೂಟ್ಲು, ಸದಾಶಿವ ಬಂಗೇರ, ವಿಶ್ವನಾಥ ಶೆಟ್ಟಿ, ಪುರುಷೋತ್ತಮ ಬಂಗೇರ ನಾಟಿ, ಎನ್.ರಮೇಶ ಶೆಣೈ, ಕೃಷ್ಣಪ್ಪ ಬಾಳ್ತಿಲ, ಕೆ.ನರಸಿಂಹ ಕಾಮತ್, ಶ್ರೀಧರ ಶೆಟ್ಟಿ ಮತ್ತಿತರರು ಚರ್ಚೆಯಲ್ಲಿ ಪಾಲ್ಗೊಂಡರು.

ಇದೇ ವೇಳೆ ಪ್ರತೀ ಗ್ರಾಮೀಣ ಅಂಗಡಿ ಮತ್ತು ಮನೆಗಳಲ್ಲಿ ಅಕ್ರಮ ಮದ್ಯ ಮಾರಾಟ ನಿಲ್ಲಿಸುವಂತೆ ಇವರು ಪೊಲೀಸರನ್ನು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X