Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮೆರಿಕದ ಪೊಲೀಸರು ಸುಧಾರಣೆಗೊಳ್ಳಬೇಕು...

ಅಮೆರಿಕದ ಪೊಲೀಸರು ಸುಧಾರಣೆಗೊಳ್ಳಬೇಕು ಒಬಾಮ: ಕರಿಯರ ಮೇಲೆ ನಿರಂತರ ದಾಳಿ ಹಿನ್ನೆಲೆ

ವಾರ್ತಾಭಾರತಿವಾರ್ತಾಭಾರತಿ8 July 2016 9:56 PM IST
share
ಅಮೆರಿಕದ ಪೊಲೀಸರು ಸುಧಾರಣೆಗೊಳ್ಳಬೇಕು ಒಬಾಮ: ಕರಿಯರ ಮೇಲೆ ನಿರಂತರ ದಾಳಿ ಹಿನ್ನೆಲೆ

ವಾರ್ಸಾ (ಪೋಲ್ಯಾಂಡ್), ಜು. 8: ಅಮೆರಿಕದಲ್ಲಿ ಪೊಲೀಸ್ ಅಧಿಕಾರಿಗಳಿಂದ ಇನ್ನೋರ್ವ ಕರಿಯ ವ್ಯಕ್ತಿ ಹತ್ಯೆಗೀಡಾಗಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ, ಅಮೆರಿಕದ ಪೊಲೀಸ್ ಇಲಾಖೆಗಳು ಸುಧಾರಣೆಯತ್ತ ವೇಗವಾಗಿ ಸಾಗಬೇಕು ಎಂದು ಗುರುವಾರ ಹೇಳಿದ್ದಾರೆ.
ಮಿನಸೋಟದಲ್ಲಿ ಪೊಲೀಸರಿಂದ ಹತ್ಯೆಗೀಡಾದ ಕರಿಯ ವಾಹನ ಚಾಲಕನ ಕುಟುಂಬಕ್ಕೆ ಸಾಂತ್ವನ ಹೇಳಿದ ಒಬಾಮ, ಇಂಥ ದುರಂತಗಳಿಗೆ ದೇಶ ತುಂಬಾ ಸಲ ಸಾಕ್ಷಿಯಾಗಿದೆ ಎಂದರು.
ಬಿಳಿಯೇತರ ಅಮೆರಿಕನ್ನರನ್ನು ಪೊಲೀಸರು ಎಳೆದಾಡುವ, ಶೋಧಿಸುವ ಹಾಗೂ ಅವರಿಗೆ ಗುಂಡು ಹಾರಿಸುವ ಪ್ರಕರಣಗಳು ಪದೇ ಪದೇ ನಡೆಯುತ್ತಿದೆ ಎಂದು ಹೇಳಿದ ಅವರು, ಇದನ್ನು ಅಪರೂಪದ ಘಟನೆಯೆಂಬಂತೆ ಭಾವಿಸಬೇಡಿ ಎಂಬುದಾಗಿ ಬಿಳಿಯ ಅಮೆರಿಕನ್ನರಿಗೆ ಮನವಿ ಮಾಡಿದರು.
‘‘ಇದೊಂದು ಕೇವಲ ಕರಿಯರ ವಿಷಯವಲ್ಲ. ಇದು ಕೇವಲ ಹಿಸ್ಪಾನಿಕ್‌ಗಳಿಗೆ ಸಂಬಂಧಿಸಿದ ವಿಷಯವಲ್ಲ. ಇದೊಂದು ಅಮೆರಿಕಕ್ಕೆ ಸಂಬಂಧಪಟ್ಟ ವಿಷಯ. ಇದರ ಬಗ್ಗೆ ನಾವೆಲ್ಲ ಗಮನ ಹರಿಸಬೇಕು’’ ಎಂದು ನ್ಯಾಟೊ ಶೃಂಗ ಸಮ್ಮೇಳನಕ್ಕಾಗಿ ವಾರ್ಸಾಗೆ ಆಗಮಿಸಿದ ಒಬಾಮ ಅವಸರವಸರವಾಗಿ ಬಿಡುಗಡೆ ಮಾಡಿದ ಹೇಳಿಕೆಯೊಂದರಲ್ಲಿ ಹೇಳಿದರು.
‘‘ನ್ಯಾಯೋಚಿತ ಮನಸ್ಸಿನ ಎಲ್ಲರೂ ಈ ಬಗ್ಗೆ ಗಮನ ಹರಿಸಬೇಕು. ಇದಕ್ಕಿಂತ ಹೆಚ್ಚಿನದನ್ನು ಮಾಡಲು ನಮಗೆ ಸಾಧ್ಯವಿದೆ ಹಾಗೂ ಇದಕ್ಕಿಂತ ನಾವು ಉತ್ತಮರಾಗಿದ್ದೇವೆ ಎಂಬುದನ್ನು ಹೇಳುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ’’ ಎಂದರು.
ಅಮೆರಿಕದ ಮಿನಸೋಟ ರಾಜ್ಯದ ಸೇಂಟ್ ಪೌಲ್‌ನಲ್ಲಿ ಗುರುವಾರ ಫಿಲಾಂಡೊ ಕ್ಯಾಸ್ಟೈಲ್ ತನ್ನ ಚಾಲನಾ ಪರವಾನಿಗೆಯನ್ನು ತೆಗೆಯುತ್ತಿದ್ದಾಗ ಪೊಲೀಸ್ ಅಧಿಕಾರಿ ಗುಂಡು ಹಾರಿಸಿದ್ದಾರೆ ಎಂದು ಆತನ ಸ್ನೇಹಿತೆ ಲ್ಯಾವಿಶ್ ರಿನಾಲ್ಡ್ಸ್ ಆರೋಪಿಸಿದ್ದಾರೆ.
ಇದಕ್ಕಿಂತ ಒಂದು ದಿನ ಮೊದಲು ಮಂಗಳವಾರ ಬ್ಯಾಟನ್ ರೋಗ್‌ನಲ್ಲಿ ಆ್ಯಲ್ಟನ್ ಸ್ಟರ್ಲಿಂಗ್ ಎಂಬ ಕರಿಯ ವ್ಯಕ್ತಿಯನ್ನು ಪೊಲೀಸರು ಗುಂಡಿಟ್ಟು ಕೊಂದಿದ್ದರು.
ಸ್ಟರ್ಲಿಂಗ್ ಹತ್ಯೆಯನ್ನು ವಿರೋಧಿಸಿ ನೂರಾರು ಮಂದಿ ಎರಡು ರಾತ್ರಿ ಪ್ರತಿಭಟನೆ ನಡೆಸಿದ್ದಾರೆ.
ಸೇಂಟ್ ಪೌಲ್‌ನ ಉಪನಗರ ಫಾಲ್ಕನ್ ಹೈಟ್ಸ್‌ನಲ್ಲಿ ಪೊಲೀಸರು ಕ್ಯಾಸ್ಟೈಲ್‌ರ ಕಾರ್‌ನ ತಪಾಸಣೆ ನಡೆಸುತ್ತಿದ್ದಾಗ ಘಟನೆ ಸಂಭವಿಸಿತ್ತು.
‘‘ನೀವು ಅವರಿಗೆ ನಾಲ್ಕು ಗುಂಡುಗಳನ್ನು ಹೊಡೆದಿರಿ, ಸರ್. ಅವರು ತನ್ನ ಚಾಲನಾ ಪರವಾನಿಗೆ ಮತ್ತು ನೋಂದಣಿ ದಾಖಲೆಗಳನ್ನು ತೆಗೆಯುತ್ತಿದ್ದರು, ಅಷ್ಟೆ ಸರ್’’ ಎಂದು ಲೈವ್ ಸ್ಟ್ರೀಮ್ ವೀಡಿಯೊ ಒಂದರಲ್ಲಿ ಮೃತ ವ್ಯಕ್ತಿಯ ಸ್ನೇಹಿತೆ ರಿನಾಲ್ಡ್ಸ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X