Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಪಾಯಕಾರಿ ಮರಗಳ ತೆರವಿಗೆ ಸೂಚನೆ

ಅಪಾಯಕಾರಿ ಮರಗಳ ತೆರವಿಗೆ ಸೂಚನೆ

ಕೆಡಿಪಿ ಸಭೆ

ವಾರ್ತಾಭಾರತಿವಾರ್ತಾಭಾರತಿ8 July 2016 10:30 PM IST
share

 ಹೊನ್ನಾವರ, ಜು.8: ಹೆದ್ದಾರಿಯ ಅಂಚಿನಲ್ಲಿರುವ ಹಲವಾರು ಮರಗಳು ರಸ್ತೆಮೇಲೆ ಬೀಳುವ ಸ್ಥಿತಿಯಲ್ಲಿದ್ದು ಅಪಾಯಕಾರಿಯಾಗಿವೆ. ಇಂತಹ ಮರಗಳನ್ನು ಗುರುತಿಸಿ ತೆರವುಗೊಳಿಸುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖಾಧಿಕಾರಿಯವರಿಗೆ ಹಾಗೂ ಈ ಪ್ರಕ್ರಿಯೆಯಲ್ಲಿ ಸಹಕರಿಸುವಂತೆ ಅರಣ್ಯ ಇಲಾಖಾಧಿಕಾರಿಯವರಿಗೆ ತಾಪಂ ಅಧ್ಯಕ್ಷ ಅಣ್ಣಯ್ಯ ನಾಯ್ಕ ಸೂಚಿಸಿದರು

ಇಲ್ಲಿಯ ತಾಪಂ ಸಭಾಭವನದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು ಮಳೆ, ಗಾಳಿಯ ಅಬ್ಬರಕ್ಕೆ ಮರಗಳು ಉರುಳಿಬಿದ್ದು ವಾಹನ ಸಂಚಾರಕ್ಕೆ ತೊಂದರೆ ಆಗುವುದನ್ನು ತಪ್ಪಿಸಬೇಕು ಎಂದು ಸೂಚಿಸಿದರು.

ನಾವು ಈಗಾಗಲೇ ಹೆದ್ದಾರಿಗಳಲ್ಲಿ ಅಪಾಯಕಾರಿಯಾಗಿರುವ ಮರಗಳ ತೆರವಿಗೆ ಪರವಾನಿಗೆ ಕೊಟ್ಟಿದ್ದೇವೆ. ಮರ ಕಡಿಯುವುದು ನಮ್ಮ ಕೆಲಸ ಅಲ್ಲ. ಮರಗಳನ್ನು ಗುರುತು ಮಾಡಿ ಪರವಾನಿಗೆ ಕೊಟ್ಟಿದ್ದೇವೆ ಎಂದು ಗೇರುಸೊಪ್ಪಾವಲಯದ ಆರ್‌ಎಫ್‌ಒ ಪಿ. ಎಸ್.ಗೊಂಡ ಉತ್ತರಿಸಿದರು. ರಾಷ್ಟ್ರೀಯ ಹೆದ್ದಾರಿ ಇಲಾಖಾಧಿಕಾರಿ ಪ್ರತಿಕ್ರಿಯಿಸಿ ನಾವು ಲಿಖಿತವಾಗಿ ಪರವಾನಿಗೆ ಕೇಳಿದ್ದೇವೆ. ಹಾಗಾಗಿ ಲಿಖಿತವಾಗಿ ಪರವಾನಿಗೆ ನೀಡಿ ಎಂದರು. ಈ ಇಬ್ಬರು ಅಧಿಕಾರಿಗಳ ಮಾತಿನ ಚಕಮಕಿ ನಡುವೆ ತಾಪಂ ಕಾರ್ಯ ನಿರ್ವಹಣಾಕಾರಿ ಡಾ.ಮಹೇಶ್ ಕುರಿಯವರು ಮಧ್ಯ ಪ್ರವೇಶಿಸಿ ಮಾತನಾಡಿ, ಸಾರ್ವಜನಿಕರಿಗೆ, ವಾಹನ ಸವಾರರಿಗೆ ತೊಂದರೆ ಆಗದಂತೆ ಎರಡೂ ಇಲಾಖಾಧಿಕಾರಿಗಳು ಸಹಕಾರದಿಂದ ಅಪಾಯಕಾರಿ ಮರಗಳನ್ನು ತೆರವುಗೊಳಿಸಿ ಎಂದು ತಿಳಿಸಿದರು.

ತೋಟಗಾರಿಕೆ:  ರೈತರಿಗೆ ತರಬೇತಿ ಯೋಜನೆ ಬಂದಿದೆ. ಶೇ. 50ರ ಸಹಾಯಧನದಡಿ ನೀಡುವ ಮೈಲುತುತ್ತು ಪಡೆಯಲು ಅರ್ಜಿಗಳು ಬಂದಿದ್ದು ತಾಪಂ ಸದಸ್ಯರ ಶಿಫಾರಸು ಪತ್ರ, ಮೈಲುತುತ್ತು ಖರೀದಿ ರಶೀದಿ, ಪಹಣಿ ಪತ್ರಿಕೆ ದಾಖಲೆಗಳನ್ನು ಒದಗಿಸಬೇಕು ಎಂದು ತೋಟಗಾರಿಕಾ ಅಧಿಕಾರಿ ಸಭೆಗೆ ತಿಳಿಸಿದರು.

ಆರೋಗ್ಯ ಇಲಾಖೆ : ಆಸ್ಪತ್ರೆಯಲ್ಲಿ ಪುರುಷ ಸಿಬ್ಬಂದಿ ಹಾಗೂ ಕಂಪ್ಯೂಟರ್ ಆಪರೇಟರ್ ಕೊರತೆಯಿದೆ. 51 ಜನ ಫಲಾನುಭವಿಗಳಿಗೆ ಮಡಿಲು ಕಿಟ್ ವಿತರಿಸಲಾಗಿದೆ. ಅಪಘಾತಗೊಂಡವರಿಗೆ ತಕ್ಷಣ ಚಿಕಿತ್ಸೆ ಲಭಿಸುವಂತೆ ತರಲಾದ ಹರೀಶ್ ಸಾಂತ್ವನ ಯೋಜನೆ ತಾಲೂಕು ಆಸ್ಪತ್ರೆಯಲ್ಲಿ ನೋಂದಣಿ ಆಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಉಷಾ ಹಾಸ್ಯಗಾರ ಸಭೆಗೆ ತಿಳಿಸಿದರು,

ಕೃಷಿ: ತಾಲೂಕಿನಲ್ಲಿ ಈವರೆಗೆ 673 ಕ್ವಿಂಟಲ್ ಬಿತ್ತನೆ ಬೀಜ ವಿತರಿಸಲಾಗಿದೆ. ಸಕಾಲದಲ್ಲಿ ರೈತರಿಗೆ ಮಾರ್ಗದರ್ಶನ ನೀಡಲು 3ರೈತ ಸಂಪರ್ಕ ಕೇಂದ್ರಗಳಲ್ಲಿ ಕೇವಲ 3 ಜನ ಮಾತ್ರ ಸಿಬ್ಬಂದಿಯಿದ್ದಾರೆ. ಹೊನ್ನಾವರ ಕಚೇರಿಯಲ್ಲೂ ತಾಂತ್ರಿಕ ಸಿಬ್ಬಂದಿಯಿಲ್ಲ. ಸಿಬ್ಬಂದಿಯ ಕೊರತೆ ಸಾಕಷ್ಟಿದೆ ಎಂದು ಕೃಷಿ ಅಧಿಕಾರಿ ಚಾಮರಾಜಪ್ಪಸಭೆಗೆ ತಿಳಿಸಿದರು.

 ಮಹಿಳಾ ಮತ್ತು ಮಕ್ಕಳ ಕಲ್ಯಾಣ:

ತಾಲೂಕಿನಲ್ಲಿ 33 ಅಪೌಷ್ಟಿಕ ಮಕ್ಕಳಿರುವ ಬಗ್ಗೆ ಸಿಡಿಪಿಒ ಸಭೆಗೆ ವಿವರಿಸಿದರು. ಸೂಕ್ತ ಆಹಾರ ಪೂರೈಕೆ ಬಗ್ಗೆ ಅಧ್ಯಕ್ಷರು ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X