Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭೂ ಕಾಯ್ದೆ ಪರಿಷ್ಕರಿಸಲು ಭೂಮಿ-ವಸತಿ...

ಭೂ ಕಾಯ್ದೆ ಪರಿಷ್ಕರಿಸಲು ಭೂಮಿ-ವಸತಿ ಹಕ್ಕು ವಂಚಿತರ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ8 July 2016 10:38 PM IST
share

ಮಡಿಕೇರಿ, ಜು.8: ರಾಜ್ಯದಲ್ಲಿರುವ ಅರ್ಹ ಫಲಾನುಭವಿಗಳಿಗೆ ಭೂಮಿ ಹಂಚಲು ಭೂ ಸುಧಾರಣಾ ನೀತಿಯನ್ನು ಮತ್ತು ಭೂ ಮಿತಿ ಕಾಯ್ದೆಯನ್ನು ಪರಿಷ್ಕರಿಸಿ ಜಾರಿಗೆ ತರಬೇಕೆಂದು ಭೂಮಿ ಮತ್ತು ವಸತಿ ಹಕ್ಕು ಂಚಿತರ ಹೋರಾಟ ಸಮಿತಿ ಒತ್ತಾಯಿಸಿದೆ.

  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಪ್ರಮುಖ ಸಿರಿಮನೆ ನಾಗರಾಜು,ಬಡವರಿಗೆ ಭೂಮಿ ಹಂಚಿಕೆ ಮಾಡಲು ಸರಕಾರ ಸಮಿತಿಯೊಂದನ್ನು ರಚಿಸಬೇಕು, ಸಮಿತಿಯಲ್ಲಿ ಅಧಿಕಾರಿಗಳು ಮಾತ್ರವಲ್ಲದೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳನ್ನು ಸೇರಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು. ನಂತರ ಕಾಲಮಿತಿಯನ್ನು ಹಾಕಿಕೊಂಡು ಭೂಮಿಯನ್ನು ಹಂಚಲು ಕ್ರಮಕೈಗೊಳ್ಳಬೇಕು. ಈಗಾಗಲೇ ಲಭ್ಯವಿರುವ ಜಾಗದ ಬಳಕೆ ಯಾವೆಲ್ಲ ರೀತಿಯಲ್ಲಿ ನಡೆದಿದೆ ಎನ್ನುವ ಬಗ್ಗೆ ಭೂ ತಪಾಸಣೆ ಮಾಡಬೇಕು. ಕೈಗಾರಿಕೆಗೆೆಂದು ಮಂಜೂರು ಮಾಡಿಕೊಂಡಿರುವ ಭೂಮಿ ಪಾಳುಬಿದ್ದಿದ್ದು, ಇದರ ವಾರಿಸುದಾರರು ಬ್ಯಾಂಕ್‌ಗಳಿಂದ ಸಾಲವನ್ನಷ್ಟೆ ಪಡೆದಿದ್ದಾರೆ. ಆದ್ದರಿಂದ ಮಂಜೂರು ಆಗಿರುವ ಭೂಮಿಯ ಆಡಿಟಿಂಗ್ ಅಗತ್ಯವಾಗಿದೆ ಎಂ

ು ಸಿರಿಮಲೆ ನಾಗರಾಜು ಅಭಿಪ್ರಾಯಪಟ್ಟರು. ಬಡವರಿಗೆ ಜಾಗವನ್ನು ಮಂಜೂರು ಮಾಡುವುದಲ್ಲದೆ, ಅದರ ಅಭಿವೃದ್ಧಿಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು. ರಾಜ್ಯದಲ್ಲಿ 11 ಲಕ್ಷ ಎಕರೆಯಷ್ಟು ಭೂಮಿ ಒತ್ತುವರಿಯಾಗಿದ್ದು, ಇದರಲ್ಲಿ ಶೇ. 80ರಷ್ಟು ಭಾಗ ಪ್ರಭಾವಿಗಳ ಪಾಲಾಗಿ

ದೆ. ಇದನ್ನು ತೆರವುಗೊಳಿಸಲು ಸರಕಾರ ಕ್ರಮ ಕೈಗೊಳ್ಳಬೇಕು. ಭೂಮಿಯ ಹಕ್ಕಿಗಾಗಿ ಒತ್ತಾಯಿಸಿ ಜು.20ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿ ಎದುರು ಸಮಿತಿಯ ಮೂಲಕ ಧರಣಿ ನಡೆಸಲಾಗುವುದೆಂದರು.ಈ ಸಂದರ್ಭ ಜಿಲ್ಲಾಧಿಕಾರಿಗಳು ಮಾತ್ರವಲ್ಲದೆ ಶಾಸಕರಿಗೂ ಮನವಿ ಪತ್ರ ಸಲ್ಲಿಸಲಾಗುವುದು. ಇದಾದ ಒಂದು ತಿಂಗಳೊಳಗೆ ಸರಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಆ.20ರಂದು ನಡೆಯುವ ದೇವರಾಜು ಅರಸು ಜನ್ಮ ಶತಮಾನೋತ್ಸವ ಸಂದರ್ಭ ಬೆಂಗಳೂರು ಚಲೋ ಹೋರಾಟವನ್ನು ಕೈಗೆತ್ತಿಕೊಳ್ಳುವುದಾಗಿ ಸಿರಿಮಲೆ ನಾಗರಾಜು ಎಚ್ಚರಿಕೆ ನೀಡಿದರು. ಪ್ರಮುಖರಾದ ಡಿ.ಎಸ್. ನಿರ್ವಾಣಪ್ಪ ಮಾತನಾಡಿ, ಜಿಲ್ಲೆಯಲ್ಲಿ ಆದಿವಾಸಿ ಅರಣ್ಯ ಹಕ್ಕು ಕಾಯ್ದೆ ವಿಫಲವಾಗಿದ್ದು, ನಿಯಮದ ಪ್ರಕಾರ ಫಲಾನುಭವಿಗಳಿಗೆ ತಲಾ 10 ಎಕರೆ ಭೂಮಿ ಹಂಚಬೇಕಾಗಿದ್ದರೂ ಕೆಲವರಿಗೆ 10 ಸೆಂಟ್ಸ್ ಜಾಗ ಮಾತ್ರ ನೀಡಲಾಗಿದೆ ಎಂದು ಆರೋಪಿಸಿದರು. ಬಡವರಿಗೆ ಭೂಮಿ ಸಿಗುವವರೆಗೆ ಜಿಲ್ಲೆಯಲ್ಲಿ ಹೋರಾಟ ನಿರಂತರವಾಗಿ ನಡೆಯಲಿದೆ ಎಂದರು.

ವಕೀಲ ಕೆ.ಆರ್. ವಿದ್ಯಾಧರ್ ಮಾತನಾಡಿ, ಭೂ ಮಿತಿ ಕಾಯ್ದೆ ಪರಿಷ್ಕರಣೆ ಮಾಡುವ ಮೂಲಕ ಭೂಮಿ ಹಂಚಿಕೆಗೆ ಸರಕಾರ ಮುಂದಾಗಬೇಕೆಂದು ಒತ್ತಾಯಿಸಿದರು. ನಿವೇಶನವನ್ನು ನೀಡಬೇಕು. ಭೂ ನ್ಯಾಯ ಮಂಡಳಿಗಳನ್ನು ಪುನರ್ ರಚಿಸಬೇಕು, ಕಂಪೆನಿ, ಎಸ್ಟೇಟ್‌ಗಳು, ಮಠ ಮಾನ್ಯಗಳು ಸೇರಿದಂತೆ ಬಲಾಢ್ಯರಿಂದ ನಡೆದಿರುವ ಒತ್ತುವರಿಯನ್ನು ಕಟ್ಟುನಿಟ್ಟಾಗಿ ತೆರವುಗೊಳಿಸಿ ವಶಪಡಿಸಿಕೊಳ್ಳಬೇಕು. ಪ್ರಭಾವಿಗಳ ಅಕ್ರಮ ಮಂಜೂರಾತಿಯ ಜಾಗವನ್ನು ವಶಕ್ಕೆ ಪಡೆದು ಬಡವರಿಗೆ ಹಂಚಬೇಕು, ಕೃಷಿ ಭೂಮಿಯನ್ನು ಕಾರ್ಪೊರೇಟ್ ಶಕ್ತಿಗಳಿಂದ ಮುಕ್ತಗೊಳಿಸಬೇಕೆಂದು ಸಮಿತಿ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಕುಂದೇಗಾಲ ಶ್ರೀನಿವಾಸ್, ಎಚ್.ಸಿ.ಸಣ್ಣಪ್ಪ, ಕೆ.ಬಿ.ಆನಂದ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X