Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಪರಾಧ ಹೆಚ್ಚುತ್ತಿರುವ ಚೆನ್ನೈನಲ್ಲಿ...

ಅಪರಾಧ ಹೆಚ್ಚುತ್ತಿರುವ ಚೆನ್ನೈನಲ್ಲಿ ಪೊಲೀಸರು ಭಾರೀ ಬ್ಯುಝಿ

ಹಿರಿಯ ಅಧಿಕಾರಿಗಳ ಮನೆ ಪಾತ್ರೆ ತೊಳೆಯುತ್ತಿರುವ 700 ಪೊಲೀಸರು!

ವಾರ್ತಾಭಾರತಿವಾರ್ತಾಭಾರತಿ9 July 2016 8:48 AM IST
share
ಅಪರಾಧ ಹೆಚ್ಚುತ್ತಿರುವ ಚೆನ್ನೈನಲ್ಲಿ ಪೊಲೀಸರು ಭಾರೀ ಬ್ಯುಝಿ

ಚೆನ್ನೈ, ಜು.9: ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಚೆನ್ನೈ ನಗರದ ಪೊಲೀಸರ ಪೈಕಿ ಶೇಕಡ 3ರಷ್ಟು ಅಂದರೆ 700 ಮಂದಿ ಪೊಲೀಸರ ಕರ್ತವ್ಯ ಏನು ಗೊತ್ತೇ? ಹಿರಿಯ ಅಧಿಕಾರಿಗಳ ಮನೆಯ ಪಾತ್ರೆ ತೊಳೆಯುವುದು ಹಾಗೂ ನಿವೃತ್ತ ಐಎಎಸ್, ಐಪಿಎಸ್ ಅಧಿಕಾರಿಗಳ ಗೃಹಕೃತ್ಯ ನಿರ್ವಹಿಸುವುದು. ಕೆಲ ಪ್ರಕರಣಗಳಲ್ಲಂತೂ ಹಿರಿಯ ಅಧಿಕಾರಿಗಳ ಸಂಬಂಧಿಕರ ಮನೆಯಲ್ಲೂ ಪಾತ್ರೆ ತೊಳೆಯುವ ಕೆಲಸವನ್ನು ಪೊಲೀಸರು ನಿರ್ವಹಿಸುತ್ತಿದ್ದಾರೆ.!

ಇನ್ನೂ ಅಚ್ಚರಿಯ ವಿಷಯ ಏನು ಗೊತ್ತೇ? ಇದನ್ನು ಬಹಿರಂಗಪಡಿಸಿದವರು ರಾಜ್ಯದ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್. ಸರಕಾರದ ಮುಖ್ಯ ಕಾರ್ಯದರ್ಶಿ ಇತ್ತೀಚೆಗೆ ನಡೆಸಿದ ಕಾನೂನು- ಸುವ್ಯವಸ್ಥೆ ಪರಾಮರ್ಶೆ ಸಬೆಯಲ್ಲಿ ಈ ವಿಷಯವನ್ನು ಕುಮಾರ್ ಬಹಿರಂಗಪಡಿಸಿದರು.

ನಗರದಲ್ಲಿ ಅಪರಾಧ ಕೃತ್ಯಗಳು ಹೆಚ್ಚುವ ಮೂಲಕ ನಗರಕ್ಕೆ ಕೆಟ್ಟ ಹೆಸರು ಬರುತ್ತಿರುವ ಬಗ್ಗೆ ಪೊಲೀಸ್ ಆಯುಕ್ತ ಟಿ.ಕೆ.ರಾಜೇಂದ್ರನ್ ಅವರು ಮಾಹಿತಿ ನೀಡಿ, ಇದಕ್ಕೆ ಸಿಬ್ಬಂದಿ ಕೊರತೆ ಕಾರಣ ಎಂದು ವಿವರಿಸಿದಾಗ, ಮಹಾನಿರ್ದೇಶಕರು, ಪೊಲೀಸ್ ಬಲ ಎಲ್ಲಿ ದುರ್ಬಳಕೆಯಾಗುತ್ತಿದೆ ಎನ್ನುವ ವಿವರ ಬಿಚ್ಚಿಟ್ಟರು.

ನಗರದಲ್ಲಿ ಹಗಲಿನಲ್ಲೇ ಕೊಲೆ, ಸುಲಿಗೆ, ಅಪಹರಣ, ಸರಗಳ್ಳತನದಂಥ ಕೃತ್ಯಗಳು ಹೆಚ್ಚುತ್ತಿವೆ. ಚೆನ್ನೈ ನಗರಕ್ಕೆ 600 ಮಂದಿ ಹೆಚ್ಚುವರಿ ಸಿಬ್ಬಂದಿ ಬೇಕು ಎಂದು ಆಯುಕ್ತರು ಆಗ್ರಹಿಸಿದಾಗ, ಮಹಾನಿರ್ದೇಶಕರು, 700 ಮಂದಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿರುವ ಬಗ್ಗೆ ವಿವರ ನೀಡಿದರು. ಆರ್ಡರ್ಲಿ ಕೆಲಸಕ್ಕೆ ಇವರನ್ನು ನಿಯೋಜಿಸಿಕೊಳ್ಳದಿದ್ದರೆ, ಸಿಬ್ಬಂದಿ ಕೊರತೆಯಾಗದು ಎಂದು ಮಹಾನಿರ್ದೇಶಕರು ಸಲಹೆ ಮಾಡಿದರು.

ಪೊಲೀಸರನ್ನು ಬಟ್ಟೆ ಒಗೆಯಲು, ಕಸ ಗುಡಿಸುವುದು ಹಾಗೂ ನೆಲ ಒರೆಸುವುದು, ಶೌಚಾಲಯ ಸ್ವಚ್ಛತೆಗೆ, ಪಾತ್ರೆ ತೊಳೆಯಲು, ಉದ್ಯಾನವನ ನಿರ್ವಹಿಸಲು ಹಾಗೂ ನಾಯಿಗಳನ್ನು ಸ್ನಾನ ಮಾಡಿಸಲು ಕೂಡಾ ಬಳಸಿಕೊಳ್ಳಲಾಗುತ್ತಿದೆ. ಆರ್ಡರ್ಲಿ ವ್ಯವಸ್ಥೆಯು ಸಾಮ್ರಾಜ್ಯಶಾಹಿ ವ್ಯವಸ್ಥೆಯ ಬಳುವಳಿಯಾಗಿದೆ. ಅದರಲ್ಲೂ ಮುಖ್ಯವಾಗಿ ಐಪಿಎಸ್ ಅಧಿಕಾರಿಗಳು ತಮ್ಮ ಅಧಿಕಾರವನ್ನು ಪ್ರದರ್ಶಿಸುವ ಸಲುವಾಗಿ ಇದನ್ನು ಬಳಸಿಕೊಳ್ಳುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X