Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೆಪ್ಟೆಂಬರ್‌ನಲ್ಲಿ ದಿಲ್ಲಿ...

ಸೆಪ್ಟೆಂಬರ್‌ನಲ್ಲಿ ದಿಲ್ಲಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಮಲ್ಯಗೆ ನಿರ್ದೇಶ

ವಾರ್ತಾಭಾರತಿವಾರ್ತಾಭಾರತಿ9 July 2016 7:00 PM IST
share
ಸೆಪ್ಟೆಂಬರ್‌ನಲ್ಲಿ ದಿಲ್ಲಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಮಲ್ಯಗೆ ನಿರ್ದೇಶ

ಹೊಸದಿಲ್ಲಿ,ಜು.9: ಹಲವಾರು ಬ್ಯಾಂಕುಗಳಿಂದ ಸಾವಿರಾರು ಕೋಟಿ ರೂ.ಸಾಲ ಪಡೆದುಕೊಂಡು ಪಂಗನಾಮ ಹಾಕಿ ಬ್ರಿಟನ್‌ಗೆ ಪರಾರಿಯಾಗಿರುವ ಮದ್ಯದ ದೊರೆ ವಿಜಯ ಮಲ್ಯಗೆ ಈ ಹಿಂದೆ ಪ್ರಕರಣವೊಂದರಲ್ಲಿ ಖುದ್ದು ಹಾಜರಾತಿಯಿಂದ ನೀಡಿದ್ದ ವಿನಾಯಿತಿಯನ್ನು ಶನಿವಾರ ಹಿಂದೆಗೆದುಕೊಂಡ ಇಲ್ಲಿಯ ನ್ಯಾಯಾಲಯವು ಸೆಪ್ಟೆಂಬರ್ 9ರಂದು ತನ್ನೆದುರು ಹಾಜರಾಗುವಂತೆ ನಿರ್ದೇಶ ನೀಡಿದೆ.

  ವಿಚಾರಣೆಯಲ್ಲಿ ಮಲ್ಯ ಹಾಜರಿ ಅಗತ್ಯವಾಗಿದೆ ಎಂದು ಕೋರಿ ಜಾರಿ ನಿರ್ದೇಶನಾಲಯ(ಇಡಿ) ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸಿದ ಮುಖ್ಯ ಮಹಾನಗರ ನ್ಯಾಯಾಧೀಶ ಸುಮಿತ್ ದಾಸ್ ಅವರು ವಿದೇಶಿ ವಿನಿಮಯ ನಿಯಮಗಳ ಉಲ್ಲಂಘನೆ ಪ್ರಕರಣದ ವಿಚಾರಣೆಯಲ್ಲಿ ಖುದ್ದು ಹಾಜರಾತಿಯಿಂದ ಮಲ್ಯಗೆ ನೀಡಿದ್ದ ವಿನಾಯಿತಿಯನ್ನು ರದ್ದುಗೊಳಿಸಿದರು. ಇಡಿ ಹೊರಡಿಸಿದ್ದ ಸಮನ್ಸ್‌ಗಳನ್ನು ತಪ್ಪಿಸಿಕೊಂಡಿದ್ದ ಪ್ರಕರಣದಲ್ಲಿ 2000,ಡಿಸೆಂಬರ್‌ನಲ್ಲಿ ಮಲ್ಯಗೆ ಈ ವಿನಾಯಿತಿಯನ್ನು ನೀಡಲಾಗಿತ್ತು.

1996,1997 ಮತ್ತು 1998ರಲ್ಲಿ ಲಂಡನ್ ಮತ್ತು ಕೆಲವು ಐರೋಪ್ಯ ದೇಶಗಳಲ್ಲಿ ಫಾರ್ಮ್ಯುಲಾ ವನ್ ವಿಶ್ವ ಚಾಂಪಿಯನ್‌ಶಿಪ್‌ಗಳಲ್ಲಿ ಕಿಂಗ್‌ಫಿಷರ್ ಲಾಂಛನವನ್ನು ಪ್ರದರ್ಶಿಸಲು ಫೆರಾ ನಿಯಮಗಳನ್ನು ಉಲ್ಲಂಘಿಸಿ ಬ್ರಿಟಿಷ್ ಸಂಸ್ಥೆಯೊಂದಕ್ಕೆ 200,000 ಡಾಲರ್ ಪಾವತಿ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಮಲ್ಯಗೆ ಸಮನ್ಸ್‌ಗಳನ್ನು ಹೊರಡಿಸಿತ್ತು.

ಸಮನ್ಸ್‌ಗಳಿಗೆ ಸ್ಪಂದಿಸಿ ಇಡಿ ಎದುರು ಹಾಜರಾಗಲು ವಿಫಲಗೊಂಡಿದ್ದ ಮಲ್ಯ ವಿರುದ್ಧ ಇಲ್ಲಿಯ ನ್ಯಾಯಾಲಯದಲ್ಲಿ 2000,ಮಾ.8ರಂದು ದೂರು ದಾಖಲಾಗಿತ್ತು ಮತ್ತು ಫೆರಾದಡಿ ಅವರ ವಿರುದ್ಧ ಆರೋಪಗಳನ್ನು ರೂಪಿಸಲಾಗಿತ್ತು.

ಕಳೆದ ಮಾರ್ಚ್‌ನಿಂದಲೂ ಲಂಡನ್ನಿನಲ್ಲಿರುವ ಮಲ್ಯರನ್ನು ಅಕ್ರಮ ಹಣ ವಹಿವಾಟು ಪ್ರಕರಣದಲ್ಲಿ ಘೋಷಿತ ಅಪರಾಧಿಯೆಂದು ವಿಶೇಷ ನ್ಯಾಯಾಲಯವು ಸಾರಿದೆ. ಸುದೀರ್ಘ ಕಾಲದಿಂದ ಸ್ಥಗಿತಗೊಂಡಿರುವ ಅವರ ಕಿಂಗ್‌ಫಿಷರ್ ಏರ್‌ಲೈನ್ಸ್‌ನಿಂದ ಬರಬೇಕಾಗಿರುವ 9,000 ಕೋ.ರೂ.ಗಳ ಸಾಲಬಾಕಿಯನ್ನು ವಸೂಲು ಮಾಡಲು ಬ್ಯಾಂಕುಗಳು ಒದ್ದಾಡುತ್ತಿವೆ.

ರವಿವಾರ ಸಿಲ್ವರ್‌ಸ್ಟೋನ್‌ನಲ್ಲಿ ನಡೆಯಲಿರುವ ಬ್ರಿಟಿಷ್ ಗ್ರಾಂಡ್ ಪ್ರಿಕ್ಸ್‌ಗಾಗಿ ತನ್ನ ಫೋರ್ಸ್ ಇಂಡಿಯಾ ತಂಡದ ಪೂರ್ವಭಾವಿ ಅಭ್ಯಾಸ ಶುಕ್ರವಾರ ಲಂಡನ್ನಿನಲ್ಲಿ ನಡೆದ ಸಂದರ್ಭ ಮಲ್ಯ ಬಹಿರಂಗವಾಗಿ ಕಾಣಿಸಿಕೊಂಡಿದ್ದರು. ಉಲ್ಲಸಿತರಾಗಿದ್ದ ಅವರು ಸ್ಪರ್ಧಾಳು ಚಾಲಕರೊಂದಿಗೆ ಸಂಭಾಷಣೆ ನಡೆಸಿದ್ದಲ್ಲದೆ, ಪತ್ರಿಕಾ ಗೋಷ್ಠಿಯಲ್ಲಿಯೂ ಮಾತನಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X