Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಂದೂಕುಧಾರಿ ಅಮೆರಿಕದ ಸೇನೆಯಲ್ಲಿ ಕೆಲಸ...

ಬಂದೂಕುಧಾರಿ ಅಮೆರಿಕದ ಸೇನೆಯಲ್ಲಿ ಕೆಲಸ ಮಾಡುತ್ತಿದ್ದ

ಡಲ್ಲಾಸ್ : ಪೊಲೀಸರು ನಡೆಸುವ ಕರಿಯರ ಹತ್ಯೆಗಳಿಂದ ಆಕ್ರೋಶಗೊಂಡಿದ್ದ: ಪೊಲೀಸ್

ವಾರ್ತಾಭಾರತಿವಾರ್ತಾಭಾರತಿ9 July 2016 10:12 PM IST
share
ಬಂದೂಕುಧಾರಿ ಅಮೆರಿಕದ ಸೇನೆಯಲ್ಲಿ ಕೆಲಸ ಮಾಡುತ್ತಿದ್ದ

ಮೆಸ್‌ಕ್ವಿಟ್ (ಟೆಕ್ಸಾಸ್), ಜು. 9: ಅಮೆರಿಕದ ಡಲ್ಲಾಸ್‌ನಲ್ಲಿ ಐವರು ಪೊಲೀಸರನ್ನು ಹತ್ಯೆಗೈದಿರುವ ಬಂದೂಕುಧಾರಿ ಮಿಕಾ ಝೇವಿಯರ್ ಜಾನ್ಸನ್ ಅಫ್ಘಾನಿಸ್ತಾನದಲ್ಲಿ ಅಮೆರಿಕದ ಸೇನೆಯಲ್ಲಿ ಕೆಲಸ ಮಾಡುತ್ತಿದ್ದನು ಹಾಗೂ ಮಹಿಳಾ ಸೈನಿಕರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಆತನನ್ನು ಸ್ವದೇಶಕ್ಕೆ ವಾಪಸ್ ಕಳುಹಿಸಲಾಗಿತ್ತು.
ಪೊಲೀಸ್ ಅಧಿಕಾರಿಗಳು ಕರಿಯರನ್ನು ವಿನಾ ಕಾರಣ ಕೊಲ್ಲುತ್ತಿರುವುದನ್ನು ಪ್ರತಿಭಟಿಸಿ ಡಲ್ಲಾಸ್‌ನಲ್ಲಿ ಶುಕ್ರವಾರ ನಡೆಯುತ್ತಿದ್ದ ಪ್ರತಿಭಟನೆಯ ವೇಳೆ ಆತ ಮರೆಯಲ್ಲಿ ನಿಂತು ಗುಂಡು ಹಾರಿಸಿ ಐವರು ಪೊಲೀಸರನ್ನು ಕೊಂದಿದ್ದಾನೆ ಹಾಗೂ ಏಳು ಮಂದಿಯನ್ನು ಗಾಯಗೊಳಿಸಿದ್ದಾನೆ ಎಂಬುದಾಗಿ ಪೊಲೀಸರು ಹೇಳಿದ್ದಾರೆ.
ಆತನನ್ನು ಬಳಿಕ ರಿಮೋಟ್ ಕಂಟ್ರೋಲ್ಡ್ ಬಾಂಬ್ ಮೂಲಕ ಪೊಲೀಸರು ಕೊಂದಿದ್ದರು.
25 ವರ್ಷದ ಈ ಕರಿಯ ವ್ಯಕ್ತಿ ಮೆಸ್‌ಕ್ಟಿಟ್‌ನ ಉಪನಗರವೊಂದರಲ್ಲಿ ತನ್ನ ಕುಟುಂಬ ಸದಸ್ಯರೊಂದಿಗೆ ವಾಸಿಸುತ್ತಿದ್ದನು.
ಆತ ತನ್ನ ಫೇಸ್‌ಬುಕ್‌ನಲ್ಲಿ ಆಫ್ರಿಕನ್ ಅಮೆರಿಕನ್ ಡಿಫೆನ್ಸ್ ಲೀಗ್ ಮತ್ತು ನ್ಯೂ ಬ್ಲಾಕ್ ಪ್ಯಾಂತರ್ಸ್ ಪಾರ್ಟಿ ಮುಂತಾದ ಕರಿಯ ತೀವ್ರವಾದಿ ಗುಂಪುಗಳನ್ನು ಅನುಸರಿಸುತ್ತಿದ್ದ.
2009ರಿಂದ ಆರು ವರ್ಷಗಳವರೆಗೆ ಜಾನ್ಸನ್ ಆರ್ಮಿ ರಿಸರ್ವ್‌ನಲ್ಲಿ ‘ಪ್ರೈವೇಟ್ ಫಸ್ಟ್ ಕ್ಲಾಸ್’ ಆಗಿ ಕೆಲಸ ಮಾಡುತ್ತಿದ್ದನು. ಬಡಗಿ ಮತ್ತು ಮೇಸ್ತ್ರಿ ಕೆಲಸಗಳಲ್ಲಿ ಪ್ರಾವೀಣ್ಯತೆ ಪಡೆದಿದ್ದನು ಎಂದು ಸೇನೆ ಹೇಳಿದೆ.
ಆತ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂಬುದಾಗಿ ಮಹಿಳಾ ಸೈನಿಕರೊಬ್ಬರು 2014 ಮೇ ತಿಂಗಳಲ್ಲಿ ಆರೋಪಿಸಿದ ಹಿನ್ನೆಲೆಯಲ್ಲಿ ಆತನನ್ನು ವಾಪಸ್ ಕಳುಹಿಸಲಾಗಿತ್ತು.
ಅಧಿಕಾರಿಗಳು ಶುಕ್ರವಾರ ಜಾನ್ಸನ್‌ನ ಮನೆಯಲ್ಲಿ ಶೋಧ ನಡೆಸಿದಾಗ, ಅಲ್ಲಿ ಬಾಂಬ್ ತಯಾರಿಸುವ ಪರಿಕರಗಳು, ಕ್ಷಿಪಣಿ ಹಾರಿಸುವ ನಿಲುವಂಗಿಗಳು, ರೈಫಲ್‌ಗಳು, ಮದ್ದುಗುಂಡುಗಳು ಮತ್ತು ಸಮರ ತಂತ್ರಗಾರಿಕೆಯನ್ನು ಕಲಿಸುವ ಪತ್ರಿಕೆಗಳು ಪತ್ತೆಯಾಗಿವೆ.
‘‘ತನಗೆ ಬಿಳಿಯರ ಬಗ್ಗೆ ಭ್ರಮನಿರಸನವಾಗಿದೆ ಹಾಗೂ ತಾನು ಬಿಳಿಯರನ್ನು, ಅದರಲ್ಲೂ ವಿಶೇಷವಾಗಿ ಬಿಳಿಯ ಪೊಲೀಸ್ ಅಧಿಕಾರಿಗಳನ್ನು ಕೊಲ್ಲಬಯಸುತ್ತೇನೆ ಎಂದು ಆತ ಸಾಯುವ ಮೊದಲು ನಡೆದ ಮಾತುಕತೆಯಲ್ಲಿ ಹೇಳಿದ್ದಾನೆ’’ ಎಂದು ಡಲ್ಲಾಸ್ ಪೊಲೀಸ್ ಮುಖ್ಯಸ್ಥ ಡೇವಿಡ್ ಒ ಬ್ರೌನ್ ಹೇಳಿದರು.

ರೋಬಟ್ ಬಾಂಬರ್ ಬಳಸಿ ಬಂದೂಕುಧಾರಿಯ ಹತ್ಯೆ
ಡಲ್ಲಾಸ್‌ನಲ್ಲಿ ಐವರು ಪೊಲೀಸರನ್ನು ಕೊಂದ ಮಿಕಾ ಝೇವಿಯರ್ ಜಾನ್ಸನ್‌ನನ್ನು ಕೊಲ್ಲಲು ಪೊಲೀಸರು ರೋಬಟ್ ಬಾಂಬರ್‌ನ್ನು ಬಳಸಿರುವುದು ಈಗ ಚರ್ಚೆಯ ವಿಷಯವಾಗಿದೆ. ಅಪರಾಧ ಹೋರಾಟ ಅಸ್ತ್ರವಾಗಿ ತಂತ್ರಜ್ಞಾನವನ್ನು ಬಳಸಿರುವ ಬಗ್ಗೆ ನೈತಿಕ ಚರ್ಚೆಗಳು ನಡೆದಿವೆ.
ಅಭೂತಪೂರ್ವ ಕ್ರಮವೆಂಬಂತೆ, ಬಂದೂಕುಧಾರಿ ಶಂಕಿತನನ್ನು ಕೊಲ್ಲಲು ಪೊಲೀಸರು ಬಾಂಬ್ ನಿಷ್ಕ್ರಿಯಗೊಳಿಸುವ ರೋಬಟನ್ನು ಬಳಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X