Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಆತ್ಮಗೌರವವನ್ನು ಎಚ್ಚರಿಸುವ ಬರಹಗಳು....

ಆತ್ಮಗೌರವವನ್ನು ಎಚ್ಚರಿಸುವ ಬರಹಗಳು....

ಕಾರುಣ್ಯಾಕಾರುಣ್ಯಾ9 July 2016 10:54 PM IST
share
ಆತ್ಮಗೌರವವನ್ನು ಎಚ್ಚರಿಸುವ ಬರಹಗಳು....

12ನೆ ಶತಮಾನದ ಕ್ರಾಂತಿಕಾರನೊಬ್ಬನ ಚಿಂತನೆ ಹೇಗೆ 20ನೆ ಶತಮಾನದಲ್ಲಿ ಮತ್ತೆ ಮರು ಹುಟ್ಟು ಪಡೆದು ದೇಶದಲ್ಲಿ ತಳಸ್ತರದ ಜನರಲ್ಲಿ ಆತ್ಮಗೌರವವನ್ನು ಎಚ್ಚರಿಸುತ್ತದೆ ಎನ್ನುವುದನ್ನು ರಂಜಾನ್ ದರ್ಗಾ ಅವರ ‘ಬಸವಣ್ಣ ಮತ್ತು ಅಂಬೇಡ್ಕರ್’ ಕೃತಿ ವಿವರಿಸುತ್ತದೆ. ಬಸವಣ್ಣ ಮತ್ತು ಅಂಬೇಡ್ಕರ್ ಚಿಂತನೆಯ ಮೂಲದ್ರವ್ಯದಲ್ಲಿರುವ ಸಾಮ್ಯತೆಯ ಕುರಿತಂತೆ ಗಮನ ಸೆಳೆಯುವುದಷ್ಟೇ ಅಲ್ಲದೆ, ವಚನ ಚಳವಳಿಯ ಕುರಿತಂತೆ ವಿಸ್ತೃತ ವಿವರಣೆ ಗಳನ್ನು ಈ ಕೃತಿ ನೀಡುತ್ತದೆ. ಪ್ರಾಚೀನ ಕಾಲದಿಂದ ಒಳಗೊಂಡು ವರ್ತಮಾನದ ಜ್ವಲಂತ ಸಮಸ್ಯೆಗಳನ್ನು ದರ್ಗಾ ಅವರು ಅಂಬೇಡ್ಕರ್ ಮತ್ತು ಬಸವಣ್ಣ ಅವರ ಚಿಂತನೆಗಳ ಬೆಳಕಿನಲ್ಲಿ ಚರ್ಚಿಸುತ್ತಾರೆ. ಈ ನಿಟ್ಟಿನಲ್ಲಿ ಸುಮಾರು 20 ಲೇಖನಗಳನ್ನು ಕೃತಿ ಒಳಗೊಂಡಿದೆ.

ವರ್ತಮಾನಕ್ಕೆ ಬಸವಣ್ಣ ಹೇಗೆ ಪ್ರಸ್ತುತವಾಗುತ್ತಾರೆ, ಬಸವಣ್ಣ ಮತ್ತು ಅಂಬೇಡ್ಕರ್ ಚಿಂತನೆಯಲ್ಲಿರುವ ಸಾಮ್ಯತೆಗಳು, ಹೇಗೆ ಬಸವಧರ್ಮಕ್ಕೆ ವಿರುದ್ಧವಾದ ಮೂಢನಂಬಿಕೆಗಳು ಇದೀಗ ನಮ್ಮ ಸಮಾಜವನ್ನು ಕಾಡುತ್ತಿದೆ, ಜಾತೀಯತೆಯನ್ನು ಬಸವ ಮತ್ತು ಅಂಬೇಡ್ಕರ್ ಮೂಲಕ ಹೇಗೆ ಎದುರಿಸಬಹುದು ಎನ್ನುವುದನ್ನು ಚರ್ಚಿಸುವ ಬೇರೆ ಬೇರೆ ಲೇಖನಗಳಿವೆ. ಬಸವಣ್ಣ ಏಕೆ ಬೇಕು ಎನ್ನುವ ಲೇಖನದಲ್ಲಿ ಕಾಯಕ ಧರ್ಮದ ಸಂಕ್ಷಿಪ್ತ ಪರಿಚಯವೊಂದನ್ನು ನೀಡುತ್ತಾರೆ. ಬಸವಣ್ಣನವರು ಆಂತರಿಕ ಶಕ್ತಿ ಮತ್ತು ಶುಚಿತ್ವಕ್ಕಾಗಿ ಇಷ್ಟಲಿಂಗದ ಅರಿವು ಕೊಟ್ಟರೆ, ಲೋಕದಲ್ಲಿ ಸರ್ವ ರೀತಿಯ ಸಮಾನತೆ ಸಾಧಿಸುವುದಕ್ಕಾಗಿ ಸಮಾಜವೆಂಬ ಜಂಗಮ ಲಿಂಗದ ಪ್ರಜ್ಞೆಕೊಟ್ಟರು ಎಂದು ದರ್ಗಾ ಕೃತಿಯಲ್ಲಿ ಅಭಿಪ್ರಾಯ ಪಡುತ್ತಾರೆ. ಭಾರತದ ಇತಿಹಾಸದಲ್ಲಿ ವೈದಿಕರ ಸಮಾಜೋ ಧಾರ್ಮಿಕ ವ್ಯವಸ್ಥೆಯನ್ನು ನೇರವಾಗಿ ಎದುರಿಸಿದ ಇಬ್ಬರು ಬಸವಣ್ಣ ಮತ್ತು ಅಂಬೇಡ್ಕರ್ ಎನ್ನುವುದನ್ನು ಕೃತಿಯಲ್ಲಿ ದರ್ಗಾ ಅವರು ಹೇಳುತ್ತಾರೆ. ಮತ್ತು ಅದನ್ನು ಬೇರೆ ಬೇರೆ ಲೇಖನಗಳಲ್ಲಿ ಅವರು ನಿರೂಪಿಸುತ್ತಾ ಹೋಗುತ್ತಾರೆ. ಕೃತಿಯಲ್ಲಿ ಸಮಕಾಲೀನ ವಿಷಯಗಳನ್ನು ಚರ್ಚಿಸುವ ಲೇಖನಗಳೂ ಇವೆ. ವಚನ ಚಳವಳಿ ಮತ್ತು ಅಂಬೇಡ್ಕರ್ ಚಳವಳಿ ಇವೆರಡರ ಬಗೆಗಿನ ವಿವರಗಳ ಜೊತೆಗೆ, ಆಧುನಿಕ ಸಮಸ್ಯೆಗಳನ್ನು ಈ ಚಿಂತನೆಗಳ ಮೂಲಕ ಹೇಗೆ ನಾವು ಎದುರಿಸಬಹುದು ಎನ್ನುವ ಕಡೆಗೂ ನಮ್ಮ ಗಮನವನ್ನು ಲೇಖಕರು ಸೆಳೆಯುತ್ತಾರೆ.
ಲಡಾಯಿ ಪ್ರಕಾಶನ ಹೊರತಂದಿರುವ ಈ ಕೃತಿಯ ಮುಖಬೆಲೆ 130 ರೂ. ಆಸಕ್ತರು 94802 86844 ದೂರವಾಣಿಯನ್ನು ಸಂಪರ್ಕಿಸಬಹುದು.

share
ಕಾರುಣ್ಯಾ
ಕಾರುಣ್ಯಾ
Next Story
X