Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗದ್ದೆಗಿಳಿದು ಭತ್ತ ನಾಟಿ ಯಂತ್ರದಲ್ಲಿ...

ಗದ್ದೆಗಿಳಿದು ಭತ್ತ ನಾಟಿ ಯಂತ್ರದಲ್ಲಿ ನಾಟಿ ಮಾಡಿದ ಸಚಿವ!

ವಾರ್ತಾಭಾರತಿವಾರ್ತಾಭಾರತಿ10 July 2016 8:39 PM IST
share
ಗದ್ದೆಗಿಳಿದು ಭತ್ತ ನಾಟಿ ಯಂತ್ರದಲ್ಲಿ ನಾಟಿ ಮಾಡಿದ ಸಚಿವ!

ಬ್ರಹ್ಮಾವರ, ಜು.10: ಸಚಿವರೆಂದರೆ ಗರಿ ಗರಿ ಪ್ಯಾಂಟ್, ಶರ್ಟ್ ತೊಟ್ಟು ಅದರ ಇಸ್ತ್ರಿ ಕೆಡದಂತೆ ನೋಡಿಕೊಂಡು, ಮಾತು..ಮಾತು...ಮಾತಿನ ಗೈರತ್ತಿನ ಮೂಲಕ ಜನರ ಮಿದುಳನ್ನು ಕೊರೆಯುವವರು ಎಂಬ ಜನಸಾಮಾನ್ಯರ ಸಾಮಾನ್ಯ ಗ್ರಹಿಕೆಯನ್ನು ಇಂದು ಇಲ್ಲಿ ಸುಳ್ಳು ಮಾಡಿದವರು ಅಮೆರಿಕದಲ್ಲಿ ಉನ್ನತ ಶಿಕ್ಷಣ ಪಡೆದು ಬಂದು ಯುವ ರಾಜಕಾರಣಿಯಾದ ಹಿರಿಯ ಜೆಡಿಎಸ್ ನಾಯಕ ಮಾಜಿ ಸಚಿವ ದಿ.ಸಿ.ಬೈರೇಗೌಡರ ಪುತ್ರ, ರಾಜ್ಯ ಕೃಷಿ ಸಚಿವ ಕೃಷ್ಣ ಬೈರೇಗೌಡರು.

ಚಾಂತಾರು ಅಗ್ರಹಾರ ಗುಚ್ಛಗ್ರಾಮದಲ್ಲಿ ಇಂದು ಆಯೋಜಿಸಲಾದ ಯಾಂತ್ರೀಕೃತ ಭತ್ತ ನಾಟಿಯ ಬೃಹತ್ ಆಂದೋಲನವನ್ನು ಸ್ವತಹ ಗದ್ದೆಗೆ ಇಳಿದು ಭತ್ತ ನಾಟಿ ಮಾಡುವ ಯಂತ್ರ (4 ಸಾಲು)ವನ್ನು ಬಳಸಿ ಒಂದು ಸಾಲು ಪುಟ್ಟ ನೇಜಿಯನ್ನು ನೆಡುವ ಮೂಲಕ ಉದ್ಘಾಟಿಸಿದರು.

ಮೂಲತ: ಕೋಲಾರದವರಾಗಿ ಸ್ವತಹ ಕೃಷಿಕನಲ್ಲದಿದ್ದರೂ, ಕಳೆದ ಮೂರು ವರ್ಷಗಳಿಂದ ಕೃಷಿ ಸಚಿವನಾಗಿ ನುರಿತ ಕೃಷಿಕನಂತೆ ಕೃಷಿಯ ಕುರಿತು ರೈತರಿಗೆ ಸರಳವಾಗಿ ವಿವರಿಸುವಷ್ಟು ತಿಳಿದುಕೊಂಡಿರುವ ಕೃಷ್ಣ ಬೈರೇಗೌಡ, ಇಂದು ಕೃಷಿ ಸಂಶೋಧನಾ ಕೇಂದ್ರಕ್ಕೆ ತೆರಳಿದಾಗಲೂ ತಮಗೆ ತಿಳಿಯದ ಅನೇಕ ಕೃಷಿ ತಂತ್ರಜ್ಞಾನದ ಮಾಹಿತಿಗಳನ್ನು ವಿದ್ಯಾರ್ಥಿಯಂತೆ ಕೇಳಿ ತಿಳಿದುಕೊಂಡರು.

ನಂತರ ಅಗ್ರಹಾರಕ್ಕೆ ಬಂದು ಇಲ್ಲಿ 200ಎಕರೆ ಪ್ರದೇಶದಲ್ಲಿ ನಾಟಿ ನಡೆಯಬೇಕಿದ್ದ ಗದ್ದೆ ಸುತ್ತಮುತ್ತ ಓಡಾಡಿದ ಸಚಿವರು, ಉದ್ಘಾಟನೆ ಮಾಡುವ ಸಮಯ ಬಂದಾಗ, ಪ್ಯಾಂಟ್‌ನ್ನು ಮೊಣಕಾಲಿನವರೆಗೆ ಮಡಚಿ, ಬರಿಗಾಲಿನಲ್ಲಿ ಕೆಸರು ತುಂಬಿದ ಗದ್ದೆಗೆ ಇಳಿದು ಯಂತ್ರ ಚಲಾಯಿಸುವ ಸಹಾಯಕನಿಂದ ಮಾಹಿತಿ ಪಡೆದು ತಾವೇ ಸ್ವತಹ ಯಂತ್ರ ಚಲಾಯಿಸಿ ನೇಜಿ ನೆಟ್ಟರು.

ಅಗ್ರಹಾರದ ಗುಚ್ಛ ಗ್ರಾಮದಲ್ಲಿ ಹಿಂದೆಲ್ಲಾ 30 ಎಕರೆ ಪ್ರದೇಶದಲ್ಲಿ ಕೃಷಿ ನಡೆಯುತಿದ್ದು, ಕಳೆದ ವರ್ಷ ಕೃಷಿ ಸಂಶೋದನಾ ಕೇಂದ್ರದ ಮೂಲಕ 100 ಎಕರೆ ಪ್ರದೇಶದಲ್ಲಿ ಕೃಷಿ ಪ್ರಯೋಗ ನಡೆಸಲಾಗಿತ್ತು. ಈ ಬಾರಿ ಸುಮಾರು 120 ರೈತರ 200 ಎಕರೆ ಪ್ರದೇಶದಲ್ಲಿ ಈ ಬಾರಿ ಒಂದೇ ದಿನದಲ್ಲಿ ನಾಟಿ ಮಾಡುವ ಗುರಿ ಇದೆ ಎಂದು ಕೇಂದ್ರದ ಅಧಿಕಾರಿಯೊಬ್ಬರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X