Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗುಡ್ಡದ ತಪ್ಪಲಿನ ಮನೆಗಳು ಅನೈತಿಕ...

ಗುಡ್ಡದ ತಪ್ಪಲಿನ ಮನೆಗಳು ಅನೈತಿಕ ಚಟುವಟಿಕೆಯ ತಾಣ: ಕ್ರಮಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ10 July 2016 9:18 PM IST
share
ಗುಡ್ಡದ ತಪ್ಪಲಿನ ಮನೆಗಳು ಅನೈತಿಕ ಚಟುವಟಿಕೆಯ ತಾಣ: ಕ್ರಮಕೆ ಆಗ್ರಹ

ಕಾರವಾರ, ಜು.10: ನಗರದ ಹೈ ಚರ್ಚ್ ವಾಡಾದ ಬಳಿಯಿರುವ ಗುಡ್ಡದ ತಪ್ಪಲು ಪ್ರದೇಶ ಪುಂಡರ ಪಾಲಿಗೆ ಮೋಜಿನ ತಾಣವಾಗಿದೆ. ಅಕ್ಕಪಕ್ಕದ ಮನೆಯ ಬಳಿಯೇ ರಾತ್ರಿ ವೇಳೆ ಅನೈತಿಕ ಚಟುವಟಿಕೆಯ ತಾಣವಾಗಿ ಮಾರ್ಪಟ್ಟಿದ್ದು ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ನಗರದ ಮೂಲೆಯಲ್ಲಿರುವ ಹೈ ಚರ್ಚ್ ರಸ್ತೆ ಒಂದು ರೀತಿಯ ನಿರ್ಜನ ಪ್ರದೇಶ. ಈ ರಸ್ತೆಯ ಕೊನೆಗೆ ಗುಡ್ಡಳ್ಳಿಯ ಗುಡ್ಡದ ತಪ್ಪಲಿದೆ. ಸಂಜೆಯಾದ ಕೂಡಲೇ ಗುಡ್ಡದ ತಪ್ಪಲಿನ ಬಳಿ ಲಗ್ಗೆಯಿಡುವ ಕುಡುಕರ ತಂಡ ಅನೈತಿಕ ಚಟುವಟಿಕೆಗಳನ್ನು ನಡೆಸಲು ಈ ತಾಣವನ್ನು ಬಳಸಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಈ ಭಾಗದ ನಿವಾಸಿಗಳಿಗೆ ರಾತ್ರಿಯಾಯಿತೆಂದರೆ ಭಯದ ವಾತಾವರಣ ಮೂಡುತ್ತಿದೆ. ನಗರದಲ್ಲಿ ಮಾದಕ ವ್ಯಸನಿಗಳ ಸಂಖ್ಯೆ ಹೆಚ್ಚುತ್ತಿರುವ ಆತಂಕಕಾರಿ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿದ್ದು, ಇಂತಹ ವ್ಯಸನಿಗಳು ಹೈ ಚರ್ಚ್ ವಾಡಾದಂತಹ ಜನವಸತಿ ಪ್ರದೇಶಕ್ಕೆ ಅನತಿ ದೂರದಲ್ಲಿರುವ ನಿರ್ಜನ ಗುಡ್ಡದ ತಪ್ಪಲನ್ನು ಅವಲಂಬಿಸಿದ್ದಾರೆಂದು ಹೇಳಲಾಗುತ್ತಿದೆ. ರಾತ್ರಿ ವೇಳೆ ಇಲ್ಲಿ ಜನ ಸಂಚಾರವಿಲ್ಲದಿರುವುದರಿಂದ ಪುಂಡರಿಗೆ ಈ ಪ್ರದೇಶ  ಅನುಕೂಲವಾಗುತ್ತಿದೆ. ಮದ್ಯದ ಜೊತೆಗೆ, ಡ್ರಗ್ಸ್ ಸೇವನೆ ಹಾಗೂ ಇನ್ನಿತರ ಅನೈತಿಕ ಚಟುವಟಿಕೆಗಳನ್ನೂ ನಡೆಸುತ್ತಿರುವ ಗುಮಾನಿಯಿದ್ದು ಇದರಿಂದಾಗಿ ಸುತ್ತಮುತ್ತಲಿನ ನಿವಾಸಿಗಳು ಆತಂಕದಿಂದ ದಿನದೂಡುವಂತಾಗಿದೆ. ಅದರಲ್ಲೂ ಹೆಣ್ಣುಮಕ್ಕಳು, ಮಹಿಳೆಯರು ಮುಜುಗರದಿಂದಲೇ ಈ ಪ್ರದೇಶದಲ್ಲಿ ಬದುಕು ಸಾಗಿಸುವಂತಾಗಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಂಡು ಜನವಸತಿ ಸ್ಥಳಗಳ ಬಳಿಯೇ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಿದೆ ಎಂಬುದು ಇಲ್ಲಿನ ನಿವಾಸಿಗಳ ಆಗ್ರಹವಾಗಿದೆ.

ಹೈಟೆನ್ಶನ್ ಟ್ರಾನ್ಸ್‌ಫಾರ್ಮರ್‌ನಿಂದ ಜನರಲ್ಲಿ ಆತಂಕ: ಹೈ ಚರ್ಚ್ ರಸ್ತೆಯ ತುದಿಗೆ ಹತ್ತಾರು ಮನೆಗಳಿವೆ. ಆದರೆ ಇಲ್ಲಿನ ಜನವಸತಿ ಪ್ರದೇಶದ ಬಳಿಯೇ ವಿದ್ಯುತ್ ಟ್ರಾನ್ಸ್ ಫಾರ್ಮರ್ ಇದ್ದು ಗುಡ್ಡದ ಬುಡದಿಂದ ಹಾದು ಹೋದ 33 ಕೆ.ವಿ. ಹೈಟೆನ್ಷನ್ ವಿದ್ಯುತ್ ತಂತಿ ಮನೆಗಳ ಮೇಲ್ಛಾವಣಿಗೆ ಸಮೀಪವೇ ತಾಗಿಕೊಂಡಂತೆ ಸಾಗಿದೆ. ಇದರಿಂದ ವಿದ್ಯುತ್ ಪ್ರವಹಿಸುವಿಕೆ ವೇಳೆ ಉಂಟಾಗುವ ನಿರಂತರ ಶಬ್ದ ಹಾಗೂ ಪದೇ ಪದೇ ತಂತಿಗಳ ಘರ್ಷಣೆಯಿಂದ ಉತ್ಪತ್ತಿಯಾಗುವ ಬೆಂಕಿ ಜನರ ನಿದ್ದೆಗೆಡಿಸಿದೆ. ಅಲ್ಲದೆ ಇಲ್ಲಿನ ನಿವಾಸಿಗಳ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಉಂಟುಮಾಡಬಹುದಾದ ಸಾಧ್ಯತೆ ಇದೆ ಎನ್ನುತ್ತಾರೆ ಕೆಲ ಸ್ಥಳೀಯರು. ಈ ಕುರಿತು ಸಂಬಂಧಪಟ್ಟವರಿಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಸ್ಥಳೀಯರಾದ ಫಿಲೋಮಿನಾ ಗುಡ್ಹಿನೋ, ಲೂಯಿಸ್ ಗುಡ್ಹಿನೋ, ಜಯಶ್ರೀ ಮಾಂಜ್ರೇಕರ್ ಅವರು. ಸ್ಮಶಾನದ ನಿರ್ವಹಣೆಗೆ ಸಿಬ್ಬಂದಿಯಿಲ್ಲ:

ಹೈಚರ್ಚ್ ರಸ್ತೆಯ ಬಳಿಯಿರುವ ಸ್ಮಶಾನ ಕೂಡ ಚರ್ಚೆಯ ಕೇಂದ್ರ ಬಿಂದುವಾಗಿ ಪರಿಣಮಿಸಿದೆ. ಇದೇ ಸ್ಮಶಾನದಲ್ಲಿ ಇತ್ತೀಚೆಗೆ ಶವವೊಂದನ್ನು ಅರೆಬರೆಯಾಗಿ ಸುಡಲಾಗಿದ್ದು ಈ ಬಗ್ಗೆ ಸಾರ್ವಜನಿಕರ ತೀವ್ರ ಆಕ್ಷೇಪ ಎದುರಾಗಿತ್ತು. ಸ್ಮಶಾನದ ನಿರ್ವಹಣೆಗೆ ಯಾವುದೇ ಸಿಬ್ಬಂದಿ ಇಲ್ಲದಿರುವುದು ಇಂತಹ ಘಟನೆಗಳಿಗೆ ಆಸ್ಪದ ನೀಡಿದಂತಾಗುತ್ತಿದೆ ಎಂಬುದು ಸ್ಥಳೀಯರ ಆರೋಪವಾಗಿದೆ. ಅಲ್ಲದೆ ಸ್ಮಶಾನದ ಹೊರಭಾಗದಲ್ಲಿರುವ ಕಟ್ಟಡವೂ ಕೂಡ ಕುಡುಕರ ಪಾಲಿಗೆ ಮೋಜಿನ ತಾಣವಾಗಿದ್ದು ಮದ್ಯದ ಬಾಟಲಿಗಳನ್ನು ಕೆಲವರು ಸ್ಮಶಾನಕ್ಕೆ ಸಾಗುವ ರಸ್ತೆಯಲ್ಲಿಯೇ ಒಡೆದು ಎಸೆಯುತ್ತಿದ್ದಾರೆ. ಇದರಿಂದ ಶವ ಸಂಸ್ಕಾರ ನಡೆಸಲು ಸಾಗುವವರಿಗೆ ಸಾಕಷ್ಟು ತೊಂದರೆಯಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X