Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೌಹಾರ್ದ ಸಮಾಜ ನಿರ್ಮಾಣದಲ್ಲಿ...

ಸೌಹಾರ್ದ ಸಮಾಜ ನಿರ್ಮಾಣದಲ್ಲಿ ಜನಪ್ರತಿನಿಧಿಗಳ ಪಾತ್ರವೂ ಅಗತ್ಯ: ಫಾ.ಜೆ.ಬಿ.ಸಲ್ಡಾನ

ವಾರ್ತಾಭಾರತಿವಾರ್ತಾಭಾರತಿ10 July 2016 9:38 PM IST
share
ಸೌಹಾರ್ದ ಸಮಾಜ ನಿರ್ಮಾಣದಲ್ಲಿ ಜನಪ್ರತಿನಿಧಿಗಳ ಪಾತ್ರವೂ ಅಗತ್ಯ: ಫಾ.ಜೆ.ಬಿ.ಸಲ್ಡಾನ

ಕೊಣಾಜೆ,ಜು.10: ಸರ್ವ ಸಮುದಾಯದ ಜನರ ಜೊತೆ ಜನಪ್ರತಿನಿಧಿಗಳು ಒಂದೆಡೆ ಬೆರೆತು ಅಂತರಾಳದ ಮಾತುಗಳ ಮೂಲಕ ಪರಸ್ಪರ ಬೆರೆತಾಗ ಸೌಹಾರ್ದ ಸಮಾಜ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ಕೆಥೋಲಿಕ್ ಸಭಾ ಕಾರ್ಯಕ್ರಮ ಹಮ್ಮಿಕೊಂಡು ಜನರೇ ಆರಿಸಿ ಕಳುಹಿಸಿದ ಪ್ರತಿನಿಧಿಗಳನ್ನು ಅಭಿನಂದಿಸುವ ಮೂಲಕ ಜವಾಬ್ದಾರಿ ತಿಳಿಹೇಳುವ ಕೆಲಸ ಮಾಡಿದೆ ಎಂದು ಎಂದು ಮಂಗಳೂರು ದಕ್ಷಿಣ ವಲಯ ಹಾಗೂ ಕೆಥೋಲಿಕ್ ಸಭಾ ಆಧ್ಯಾತ್ಮಿಕ ನಿರ್ದೇಶಕ ಫಾ.ಜೆ.ಬಿ.ಸಲ್ಡಾನ ಅಭಿಪ್ರಾಯಪಟ್ಟರು.

ಪಜೀರು ಮರ್ಸಿಯಮ್ಮನವರ ಇಗರ್ಜಿ ಹಾಗೂ ಕೆಥೋಲಿಕ್ ಸಭಾ ಫಜೀರು ಘಟಕ ಇದರ ಜಂಟಿ ಆಶ್ರಯದಲ್ಲಿ ಭಾನುವಾರ ಗ್ರಾಮಚಾವಡಿಯಲ್ಲಿರುವ ಪಜೀರ್ ಸಭಾಂಗಣದಲ್ಲಿ ನಡೆದ ಜನಪ್ರತಿನಿಧಿಗಳಿಗೆ ಅಭಿನಂದನೆ ಹಾಗೂ ಅಲ್ಪಸಂಖ್ಯಾತರಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

   ಇಂದು ಕೆಲವು ಸಂಘ-ಸಂಸ್ಥೆಗಳಿಂದ ನಡೆಯುವ ಸಾಕಷ್ಟು ಕಾರ್ಯಕ್ರಮಗಳು ನಿರುಪಯುಕ್ತವಾಗಿದೆ, ಈ ಮಧ್ಯೆ ಕೆಥೋಲಿಕ್ ಸಭಾ ವತಿಯಿಂದ ನಡೆಯುತ್ತಿರುವ ಕಾರ್ಯಕ್ರಮ ಸಮಾಜಮುಖಿಯಾಗಿರುವುದು ಶ್ಲಾಘನೀಯ ಎಂದರು.
  ಕಾರ್ಯಕ್ರದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾಲೂಕು ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಮೋನು, ಜಿಲ್ಲಾ ಪಂಚಾಯಿತಿ ಸದಸ್ಯರಾದ ಧನಲಕ್ಷ್ಮಿ ಗಟ್ಟಿ, ರಶೀದಾ ಬಾನು, ಮಮತಾ ಗಟ್ಟಿ, ತಾಲೂಕು ಪಂಚಾಯಿತಿ ಸದಸ್ಯರಾದ ನವೀನ್ ಪಾದಲ್ಪಾಡಿ, ಶಶಿಪ್ರಭಾ ಶೆಟ್ಟಿ, ಪ್ರದ್ಮಾವತಿ ಪೂಜಾರಿ, ಅಬ್ದುಲ್ ಜಬ್ಬಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಹಮ್ಮದ್ ಫಿರೋಜ್, ಅನಿತಾ ಡಿಸೋಜ, ಸೀತಾರಾಮ ಶೆಟ್ಟಿ, ಶೌಕತ್ ಅಲಿ, ನಿವೃತ್ತ ಅಂಚಿನಲ್ಲಿರುವ ಶಿಕ್ಷಕಿ ಬೆನೆಡಿಕ್ಟ್ ಮೊಂತೆರೋ ಮೊದಲಾದವರನ್ನು ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿದ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ, ಸದಸ್ಯರು, ತಾಲೂಕು ಪಂಚಾಯಿತಿ ಅಧ್ಯಕ್ಷ, ಸದಸ್ಯರು ಕ್ರೈಸ್ತ ಸಮುದಾಯ ದೇಶಕ್ಕೆ ನೀಡಿರುವ ಕೊಡುಗೆಯನ್ನು ಸ್ಮರಿಸಿ, ಸರ್ವ ಪಕ್ಷದವರನ್ನೂ ಒಂದೇ ವೇದಿಕೆಯಡಿ ಸೇರಿಸಿ ಸನ್ಮಾನಿಸುವ ಮೂಲಕ ತಮ್ಮ ಮೇಲಿರುವ ಜವಾಬ್ದಾರಿ ನೆನಪಿಸಿದ್ದಾರೆ. ತಮ್ಮಲ್ಲಿಟ್ಟ ವಿಶ್ವಾಸಕ್ಕೆ ಚ್ಯುತಿ ಬರದಂತೆ ಕಾರ್ಯ ನಿರ್ವಹಿಸುವ ಭರವಸೆ ನೀಡಿದರು.

   ಕೆಥೋಲಿಕ್ ಸಭಾ ಪಜೀರು ಘಟಕದ ಆಧ್ಯಾತ್ಮಿಕ ನಿರ್ದೇಶಕ ಫಾ.ವಲೇರಿಯನ್ ಪಿಂಟೋ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಕೆಥೋಲಿಕ್ ಸಭಾ ಮಂಗಳೂರು ಕೇಂದ್ರ ಸಮಿತಿ ಅಧ್ಯಕ್ಷೆ ಫ್ಲೇವಿ ಡಿಸೋಜಾ ರಾಣಿಪುರ, ನಿಯೋಜಿತ ಅಧ್ಯಕ್ಷ ವಲೇರಿಯನ್ ಡಿಸೋಜ, ಮಂಗಳೂರು ದಕ್ಷಿಣ ವಲಯದ ಅಧ್ಯಕ್ಷ ವಿನ್ಸೆಂಟ್ ಡಿಸೋಜ, ಪಜೀರು ಘಟಕಾಧ್ಯಕ್ಷ ಹಿಲರಿ ಡಿಸೋಜ, ಕಾರ್ಯದರ್ಶಿ ಲವೀನ ದಾಂತಿ, ಪಜೀರು ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ವಿಕ್ಟರ್ ಮೊಂತೇರೊ ಹಾಗೂ ಕಾರ್ಯದರ್ಶಿ ಫೆಲಿಕ್ಸ್ ಮೊಂತೇರೊ ಮುಖ್ಯ ಅತಿಥಿಗಳಾಗಿದ್ದರು.

ಪಜೀರು ಘಟಕ ಕ್ಯಾತೋಲಿಕ್ ಸಭಾ ಅಧ್ಯಕ್ಷ ಹಿಲರಿ ಡಿಸೋಜ ಸ್ವಾಗತಿಸಿದರು. ಅಲ್ಪಸಂಖ್ಯಾತರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಜಿಲ್ಲಾ ಡಿ.ಗ್ರೂಪ್ ನೌಕರರ ಸಂಘದ ಅಧ್ಯಕ್ಷ ಫ್ರಾಂಕಿ ಫ್ರಾನ್ಸಿಸ್ ಕುಟಿನ್ಹಾ ಪಾನೀರ್ ಹಾಗೂ ಮಂಗಳೂರು ಅಲ್ಪಸಂಖ್ಯಾತ ಮಾಹಿತಿ ಕೇಂದ್ರದ ಅಬ್ದುಲ್ ಖಾದರ್ ಮಾಹಿತಿ ನೀಡಿದರು. ಕೆಥೋಲಿಕ್ ಸಭಾ ರಾಜಕೀಯ ಸಂಚಾಲಕ ಪ್ರೀತಮ್ ನೊರೊನ್ಹಾ ಸನ್ಮಾನಿತರ ಪರಿಚಯ ಓದಿದರು. ಪ್ರಧಾನ ಕಾರ್ಯದರ್ಶಿ ಲವಿನಾ ದಾಂತಿ ವಂದಿಸಿದರು. ಶಿಕ್ಷಕ ಜಾನ್ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X