Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ಲಯನ್ಸ್ ಕ್ಲಬ್ ಅಧ್ಯಕ್ಷ,...

ಭಟ್ಕಳ: ಲಯನ್ಸ್ ಕ್ಲಬ್ ಅಧ್ಯಕ್ಷ, ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ10 July 2016 10:13 PM IST
share
ಭಟ್ಕಳ: ಲಯನ್ಸ್ ಕ್ಲಬ್ ಅಧ್ಯಕ್ಷ, ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಭಟ್ಕಳ,ಜು.10: ಮುರ್ಡೇಶ್ವರ ಲಯನ್ಸ್ ಕ್ಲಬ್ ಅಧ್ಯಕ್ಷ, ಪದಾಧಿಕಾರಿಗಳ ಪದಗ್ರಹಣ ಸಮಾರಂಭ, ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ಸಭಾಂಗಣದಲ್ಲಿ ಯಶಸ್ವೀಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಪ್ರತಿಜ್ಞಾ ದೀಕ್ಷೆಯನ್ನು ಬೋಧಿಸಿದ ಎಂ.ಜೆ.ಎಫ್ ಲಯನ್ ಡಾ.ಎಂ.ಕೆ.ಭಟ್, ಸೊರಬ ಅವರು ಮಾತನಾಡುತ್ತಾ ಇಲ್ಲಿ ಎಲ್ಲಾ ಲಯನ್ಸ್ ಸದಸ್ಯರೂ ಕೂಡಾ ಸಮಾನರು. ನಮ್ಮಲ್ಲಿ ಯಾವುದೇ ಬೇಧಭಾವ, ಬಡವ, ಶ್ರೀಮಂತ ಎನ್ನುವ ಕಲ್ಪನೆಯೇ ಬರುವುದಿಲ್ಲ. ಪ್ರತಿ ವರ್ಷದ ಅಧಿಕಾರದ ಹಸ್ತಾಂತರಕ್ಕಾಗಿ ಮಾತ್ರ ಪದಾಧಿಕಾರಿಗಳ ಆಯ್ಕೆ ಅವರಿಗೆ ಯಾವುದೇ ಅಧಿಕಾರವಿಲ್ಲ, ಆದರೆ ಜವಾಬ್ದಾರಿ ಇರುತ್ತದೆ ಎಂದರು.

ಮಾನವರಲ್ಲಿ ಸಹಜವಾಗಿ ಅಸಮಾತನೆ ಇರುತ್ತದೆ. ಸಮಾಜದಲ್ಲಿ ಕಟ್ಟಕಡೆಯ ವ್ಯಕ್ತಿಯನ್ನೂ ಸಹ ಮುಖ್ಯ ವಾಹಿನಿಗೆ ತರುವುದು, ಬಡವ, ಅಸಹಾಯಕರಿಗೆ ಸಹಾಯ ಮಾಡಿ ಅವರೂ ಕೂಡಾ ಸಮಾಜದಲ್ಲಿ ಉತ್ತಮ ಜೀವನ ಮಾಡಬೇಕು ಎನ್ನುವುದೇ ನಮ್ಮ ಸೇವೆಯ ಗುರಿಯಾಗಿದ್ದು ನಮ್ಮ ಸಂಸ್ಥೆಯು ಸೇವಾ ಸಂಸ್ಥೆಯಾಗಿರುವುದರಿಂದ ಪ್ರತಿಯೋರ್ವರೂ ಸೇವಾ ಮನೋಭಾವನೆಯಿಂದಲೇ ಇಲ್ಲಿ ಸದಸ್ಯರಾಗುತ್ತಾರೆ ಎಂದರು. ಇನ್ನೋರ್ವ ಮುಖ್ಯ ಅತಿಥಿ ಲಿಯೋ ಜಿಲ್ಲಾಧ್ಯಕ್ಷರಾದ ಲಯನ್ ಸ್ಯಾಮಿಯುಲ್ ಡಯಾಸ್ ಗೋವಾ ಅವರು ಲಿಯೋ ಕ್ಲಬ್ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋದಿಸುತ್ತಾ ಲಿಯೋ ಕ್ಲಬ್ ಸದಸ್ಯರು ಮುಂದಿನ ನಾಯಕರುಗಳು. ನಮ್ಮ ದೇಶದಲ್ಲಿ ಯುವ ಶಕ್ತಿಯೇ ಹೆಚ್ಚಿದ್ದು ಅದೊಂದು ದೇಶದ ಆಸ್ತಿಯಾಗಿದೆ.

ಮುಖ್ಯವಾಗಿ ಲಿಯೋ ಕ್ಲಬ್‌ನಲ್ಲಿ ನಾಯಕನಾಗುವ ಅರ್ಹತೆಯನ್ನು ನಾವು ಕಲಿಸುತ್ತೇವೆ ಎಂದರು. ನೂತನ ಅಧ್ಯಕ್ಷರಾಗಿ ಜವಾಬ್ದಾರಿಯನ್ನು ವಹಿಸಿಕೊಂಡ ಲಯನ್ ಡಾ. ವಾದಿರಾಜ ಭಟ್ಟ ಮಾತನಾಡಿ ಲಯನ್ಸ್ ಕ್ಲಬ್‌ನ ಮುಂದಿನ ಕಾರ್ಯಕ್ರಮಗಳ ಕುರಿತು ವಿವರಿಸುತ್ತಾ ಈ ಭಾಗದಲ್ಲಿ ತುರ್ತು ಚಿಕಿತ್ಸೆಗೆ ಹಲವರು ತೀವ್ರ ಕಷ್ಟ ಪಡುತ್ತಿರುವುದನ್ನು ಕಂಡಿದ್ದು ತುರ್ತು ಚಿಕಿತ್ಸಾ ಫಂಡ್ ಮಾಡಿ ಅದರ ಮೂಲಕ ಸಹಾಯ ಮಾಡುವುದಾಗಿ ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಶ್ರೀ ಅಳ್ವೇಕೋಡಿ ದುರ್ಗಾಪರಮೇಶ್ವರ ದೇವಸ್ಥಾನದ ಧರ್ಮದರ್ಶಿ ನಾರಾಯಣ ದೈಮನೆ ಮಾತನಾಡಿದರು. ಶ್ಯಾಮರಾವ್ ದತ್ತಿನಿಧಿ ಪ್ರಶಸ್ತಿ ಪಡೆದ ಪತ್ರಕರ್ತ ರಾಧಾಕೃಷ್ಣ ಭಟ್ಟ, ಅವರನ್ನು ಶಾಲು ಹೊದಿಸಿ, ಹಣ್ಣು, ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಎಸ್.ಎಸ್.ಎಲ್.ಸಿ., ಪಿ.ಯು.ಸಿ. ಮತ್ತು ಸಿ.ಇ.ಟಿ.ಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ನೂತನ ಸದಸ್ಯರಾಗಿ ಹಿರಿಯರಾದ ಎ.ಎನ್. ಶೆಟ್ಟಿ, ಶಿಕ್ಷಣ ತಜ್ಞ ನಾಗೇಶ ಮಡಿವಾಳ ಅವರನ್ನು ಸ್ವಾಗತಿಸಲಾಯಿತು. ಶಿವಾನಂದ ದೈಮನೆ ಪ್ರಾರ್ಥಿಸಿದರು. ಲಿಯೋ ಕ್ಲಬ್ ಅಧ್ಯಕ್ಷ ರಾಹುಲ್ ರಾವ್ ಸ್ವಾಗತಿಸಿದರು. ಜಿತೇಂದ್ರ ಹೆಗಡೆ, ಸುರೇಶ ನಾಯ್ಕ ವರದಿ ವಾಚಿಸಿದರು. ಹರಿಪ್ರಸಾದ ಕಿಣಿ, ಡಾ. ಸುನಿಲ್ ಜತ್ತನ್, ತಿಲಕ್ ರಾವ್ ಪರಿಚಯಿಸಿದರು. ಎಂ.ವಿ. ಹೆಗಡೆ ಹಾಗೂ ಕೃಷ್ಣ ಹೆಗಡೆ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X