Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಝಾಕಿರ್ ನಾಯ್ಕ್ ವಿರುದ್ಧ ಪ್ರಕರಣ...

ಝಾಕಿರ್ ನಾಯ್ಕ್ ವಿರುದ್ಧ ಪ್ರಕರಣ ದಾಖಲಿಸುವುದು ಸುಲಭವಲ್ಲ: ಕಾನೂನು ತಜ್ಞರು

"ಅವರದ್ದು ದ್ವೇಷ ಭಾಷಣ ಎಂದು ಸಾಬೀತುಪಡಿಸುವುದು ಕಷ್ಟ "

ವಾರ್ತಾಭಾರತಿವಾರ್ತಾಭಾರತಿ12 July 2016 9:52 AM IST
share
ಝಾಕಿರ್ ನಾಯ್ಕ್ ವಿರುದ್ಧ ಪ್ರಕರಣ ದಾಖಲಿಸುವುದು ಸುಲಭವಲ್ಲ: ಕಾನೂನು ತಜ್ಞರು

ಹೊಸದಿಲ್ಲಿ, ಜು.12: ಖ್ಯಾತ ಪ್ರವಚನಕಾರ ಝಾಕಿರ್ ನಾಯ್ಕ್ ಅವರ ಭಾಷಣವನ್ನು ಕೋಮು ಪ್ರಚೋದಕ ಅಥವಾ ಜನಾಂಗಗಳ ನಡುವೆ ದ್ವೇಷ ಹರಡುವ ಉದ್ದೇಶದ್ದು ಎಂದು ಖಂಡಿಸುವುದು ಅಥವಾ ಆಕ್ರೋಶ ವ್ಯಕ್ತಪಡಿಸುವುದು ಸುಲಭ. ಆದರೆ ಕಾನೂನು ಜಾರಿ ಅಧಿಕಾರಿಗಳಿಗೆ ಈಗ ಅದನ್ನು ನ್ಯಾಯಾಲಯದಲ್ಲಿ ಸಾಬೀತುಮಾಡುವುದು ಕಷ್ಟ. ಕಳೆದ ಹಲವು ವರ್ಷಗಳಲ್ಲಿ ಸುಪ್ರೀಂಕೋರ್ಟ್, ಸಾರ್ವಜನಿಕ ಗ್ರಹಿಕೆ ಹಾಗೂ ವಾಸ್ತವವನ್ನು ಪ್ರತ್ಯೇಕವಾಗಿ ಪರಿಗಣಿಸುತ್ತಾ ಬಂದಿದೆ. ಸಾಮಾಜಿಕ ಸಾಮರಸ್ಯ ಕೆಡಿಸಲು ಒಬ್ಬ ವ್ಯಕ್ತಿ ಪ್ರಯತ್ನಿಸಿದ್ದಾನೆ ಎಂದು ಭಾರತೀಯ ದಂಡಸಂಹಿತೆಯ ಸೆಕ್ಷನ್ 153ಎ ಹಾಗೂ 295 ಎ ಅನ್ವಯ ಸಾಬೀತುಪಡಿಸಲು ವಾಸ್ತವಾಂಶಗಳು ಬೇಕಾಗುತ್ತವೆ.

ಢಾಕಾ ಹತ್ಯಾಕಾಂಡಕ್ಕೆ ಝಾಕೀರ್ ನಾಯ್ಕ್ ಅವರ ದ್ವೇಷಭಾಷಣಗಳು ಕುಮ್ಮಕ್ಕು ನೀಡಿದವು ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ ಪ್ರಬಲವಾಗಿ ಕೇಳಿಬಂದಿತ್ತು. ಆದರೆ ಭಾರತದ ಮಾಜಿ ಅಟರ್ನಿ ಜನರಲ್ ಸೋಲಿ ಸೊರಾಬ್ಜಿಯವರ ಪ್ರಕಾರ, "ಅಗತ್ಯವಿರುವುದು ನ್ಯಾಯಯುತ ವಿಚಾರಣೆ ಹಾಗೂ ಕಾನೂನನ್ನು ಸಮರ್ಪಕವಾಗಿ ಅನ್ವಯಿಸುವುದು"

ಒಂದು ಧರ್ಮವನ್ನು ಆಚರಿಸುವುದು ಹಾಗೂ ಪ್ರಚಾರ ಮಾಡುವುದು ಪ್ರತಿಯೊಬ್ಬನ ಮೂಲಭೂತ ಹಕ್ಕು. ಆದರೆ ಇದಕ್ಕೆ ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ಹಾಗೂ ಆರೋಗ್ಯದ ನಿರ್ಬಂಧಗಳಿವೆ, "ಒಂದು ಧರ್ಮವನ್ನು ಇನ್ನೊಂದಕ್ಕಿಂತ ಶ್ರೇಷ್ಠ ಎಂದು ಹೇಳುವ ಮೂಲಕ ಅದನ್ನು ಪ್ರಚುರಪಡಿಸುವುದು ಅಪರಾಧವಲ್ಲ. ಆದರೆ ಅದು ಮತ್ತೊಂದು ಗುಂಪಿನ ಧಾರ್ಮಿಕ ಭಾವನೆಗಳನ್ನು ಕೆರಳಿಸಿದರೆ, ಅದಕ್ಕೆ ಮೂಲಭೂತ ಹಕ್ಕು ಎಂಬ ರಕ್ಷಣೆ ಅನ್ವಯವಾಗುವುದಿಲ್ಲ" ಎನ್ನುವುದು ಮಹಾರಾಷ್ಟ್ರದ ಮಾಜಿ ಅಡ್ವಕೇಟ್ ಜನರಲ್ ಎಸ್.ಜಿ.ಅನಯ್ ಅವರ ಅಭಿಮತ. ಸರಕಾರ ಇದೀಗ ಝಾಕಿರ್ ನಾಯ್ಕ್ ಅವರ ಭಾಷಣಗಳ ಬಗೆಗೆ ತನಿಖೆ ನಡೆಸುವಂತೆ ಆದೇಶಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X