Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಝಾಕಿರ್ ನಾಯ್ಕ್ ಕುರಿತ ತಮ್ಮ ಹಳೆಯ...

ಝಾಕಿರ್ ನಾಯ್ಕ್ ಕುರಿತ ತಮ್ಮ ಹಳೆಯ ಫತ್ವಾಗಳನ್ನು ಬೇಕಾದಂತೆ ಬಳಸಿಕೊಳ್ಳುತ್ತಿರುವ ಮಾಧ್ಯಮಗಳು

ದೇವ್ ಬಂದ್ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ12 July 2016 4:03 PM IST
share
ಝಾಕಿರ್ ನಾಯ್ಕ್ ಕುರಿತ ತಮ್ಮ ಹಳೆಯ ಫತ್ವಾಗಳನ್ನು ಬೇಕಾದಂತೆ ಬಳಸಿಕೊಳ್ಳುತ್ತಿರುವ ಮಾಧ್ಯಮಗಳು

ತಮ್ಮ ಝಾಕಿರ್ ನಾಯ್ಕ್ ಮೇಲಿನ ಫತ್ವಾ ಮತ್ತು ಇಸ್ಲಾಮಿಕ್ ಬೋಧಕನ ಭಾಷಣಗಳು ಢಾಕಾದ ಭಯೋತ್ಪಾದಕ ದಾಳಿಗೆ ಪ್ರೇರಣೆಯಾಗಿದೆ ಎನ್ನುವ ವಿಷಯದ ನಡುವೆ ಸಂಬಂಧವಿದೆ ಎಂದು ಮಾಧ್ಯಮಗಳು ಹೇಳುತ್ತಿರುವುದನ್ನು ಇಸ್ಲಾಮಿಕ್ ಸೆಮಿನರಿ ದರ್ ಉಲ್ ಉಲೂಮ್ ದೇವ್ ಬಂದ್ ಭಾನುವಾರ ವಿರೋಧಿಸಿದೆ.

ಝಾಕಿರ್ ಮೇಲೆ ಹೇರಿರುವ ಕೆಲವು ಫತ್ವಾಗಳು ಮುಸ್ಲಿಂ ವರ್ಗಗಳಿಗೆ ಸಂಬಂಧೀಸಿದೆ. ಆದರೆ ಝಾಕಿರ್ ಡಾಕಾ ದಾಳಿಗೆ ಪ್ರೇರಣೆ ನೀಡುವಂತಹ ಭಾಷಣ ಮಾಡಿರುವ ಆರೋಪಗಳು ಬಂದ ಮೇಲೆ ಫತ್ವಾಗಳನ್ನು ಕೆಲವು ಸುದ್ದಿ ಪತ್ರಿಕೆಗಳು ಮತ್ತು ಟಿವಿ ವಾಹಿನಿಗಳು ತಮ್ಮ ವರದಿಯಲ್ಲಿ ಎತ್ತಿ ತೋರಿಸಿದ್ದಾರೆ ಎಂದು ದರ್ ಉಲ್ ಉಲೂಮ್ ಅಶ್ರಫ್ ಉಸ್ಮಾನಿ ಹೇಳಿದ್ದಾರೆ. ಈ ಹಿಂದೆ ದೇವ್ ಬಂದ್ ಝಾಕಿರ್ ನಾಯ್ಕ್  ವಿರುದ್ಧ ಹೇರಿರುವ ಫತ್ವಾಗಳು ಭಯೋತ್ಪಾದನೆಗೆ ಸಂಬಂಧಿಸಿದೆ ಎನ್ನುವುದು ತಪ್ಪು ಭಾವನೆ ಎಂದು ಉಸ್ಮಾನಿ ಹೇಳಿದ್ದಾರೆ.

ಈದ್ ಕಾರಣ ಬ್ಯುಸಿಯಾಗಿದ್ದರಿಂದ ದೇವ್ ಬಂದ್ ಝಾಕಿರ್ ಬಗ್ಗೆ ಏನೂ ನಿಲುವು ಹೊಂದಿಲ್ಲ ಎಂದೂ ಅವರು ಹೇಳಿದ್ದಾರೆ. ಈ ಮೊದಲು ಬಾಂಗ್ಲಾದೇಶದ ಡೈಲಿ ಸ್ಟಾರ್ ಕೂಡ ಢಾಕಾ ಭಯೋತ್ಪಾದನೆಗೆ ಝಾಕಿರ್ ಕಾರಣ ಎನ್ನುವುದು ತಪ್ಪಾಗಿ ವರದಿಯಾಗಿದೆ ಎಂದು ಕ್ಷಮೆಯಾಚಿ ಸ್ಪಷ್ಟೀಕರಣ ನೀಡಿದೆ. ಡೈಲಿ ಸ್ಟಾರ್ ವರದಿಯೊಂದನ್ನೇ ಆಧಾರವಾಗಿರಿಸಿಕೊಂಡು ಭಾರತೀಯ ಮಾಧ್ಯಮಗಳು ಝಾಕಿರ್ ಮೇಲೆ ಕತ್ತಿ ಮಸೆದಿದ್ದವು.

ಈ ನಡುವೆ ಮುಸ್ಲಿಂ ವಿವಾಂಸರು ಝಾಕಿರ್ ಬಗ್ಗೆ ವಿಭಿನ್ನ ಅಭಿಪ್ರಾಯ ಹೊಂದಿದ್ದಾರೆ. ಝಾಕಿರ್ ನಾಯ್ಕ್ ವಿರುದ್ಧ ದೊಡ್ಡ ಪಿತೂರಿ ನಡೆಯುತ್ತಿದೆ ಎಂದು ಅಖಿಲ ಭಾರತ ಮುಸ್ಲಿಂ ಖಾಸಗಿ ಕಾನೂನು ಮಂಡಳಿ ಸದಸ್ಯ ಮೌಲಾನ ರಶೀದ್ ಫರಂಗಿ ಮಹಾಲಿ ಹೇಳಿದ್ದಾರೆ. 1.4 ಕೋಟಿಗೂ ಅಧಿಕ ಬೆಂಬಲಿಗರಿರುವ ವ್ಯಕ್ತಿಯ ಕೆಲವು ಬೆಂಬಲಿಗರು ಭಯೋತ್ಪಾದಕರಾದರೆ ಆತನನ್ನು ಹೇಗೆ ಹೊಣೆಯಾಗಿಸುವುದು? ಇದು ದೊಡ್ಡ ಅನ್ಯಾಯ ಎಂದು ಮಹಾಲಿ ಅಭಿಪ್ರಾಯಪಟ್ಟಿದ್ದಾರೆ. ಸರ್ಕಾರವು ಝಾಕಿರ್ ನಾಯ್ಕ್ ಮೇಲೆ ವಿಚಾರಣೆಗೆ ಆದೇಶಿಸಿದ್ದನ್ನು ಅವರು ಸ್ವಾಗತಿಸಿದ್ದಾರೆ. ನಿಮಗೆ ಸಂಶವಿದ್ದರೆ ವಿಚಾರಣೆ ನಡೆಸಬೇಕು. ಆದರೆ ಮಾಧ್ಯಮಗಳು ವ್ಯಕ್ತಿತ್ವಹರಣ ಮಾಡುವ ರೀತಿ ಸಮರ್ಥನೀಯವಲ್ಲ ಎಂದು ಅವರು ಹೇಳಿದ್ದಾರೆ.

ಪ್ರತೀ ವ್ಯಕ್ತಿಗೂ ದೇಶದ ಕಾನೂನಿನ ಒಳಗೆ ಭಾಷಣ ಮಾಡುವ ಹಕ್ಕಿದೆ. ಆದರೆ ಮಾಧ್ಯಮ ವಿಚಾರಣೆ ಸರಿಯಲ್ಲ ಎಂದು ಶೀಬಿಲ್ ಅಕಾಡೆಮಿ ನಿರ್ದೇಶಕ ಪ್ರೊಫೆಸರ್ ಇಶ್ತಿಯಾಖ್ ಅಹ್ಮದ್ ಜಿಲ್ಲಿ ಹೇಳಿದ್ದಾರೆ. ಈ ನಡುವೆ ಅಖಿಲ ಭಾರತ ಶಿಯಾ ಖಾಸಗಿ ಕಾನೂನು ಮಂಡಳಿ ಮೌಲಾನ ಯಸೂಬ್ ಅಬ್ಬಾಸ್ ಅವರು ಝಾಕಿರ್ ನಾಯ್ಕ್ ಅವರನ್ನು ವಿರೋಧಿಸಿದ್ದಾರೆ. ತಪ್ಪು ಮಾನಸಿಕ ಸ್ಥಿತಿ ಇದ್ದವರು ಝಾಕಿರ್ ಭೋದನೆಗಳಿಂದ ಪ್ರಭಾವಿತರಾಗಿ ಭಯೋತ್ಪಾದನೆಗೆ ಇಳಿಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಝಾಕಿರ್  ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅವರ ಭಾಷಣಗಳನ್ನು ನಿಷೇಧಿಸಬೇಕು ಮತ್ತು ಅವರ ರಾಷ್ಟ್ರೀಯತೆಯನ್ನು ಹಿಂತೆಗೆದುಕೊಳ್ಳಬೇಕು ಎಂದೂ ಅವರು ಅಭಿಪ್ರಾಯಪಟ್ಟರು.

ಕೃಪೆ: jantakareporter.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X