Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗಣಪತಿಗೆ ಕಿರಕುಳ ನೀಡಿಲ್ಲ ...

ಗಣಪತಿಗೆ ಕಿರಕುಳ ನೀಡಿಲ್ಲ ತಪ್ಪಿತಸ್ಥನಾದರೆ ಶಿಕ್ಷೆ ಅನುಭವಿಸಲು ಸಿದ್ಧ: ಕೆ.ಜೆ.ಜಾರ್ಜ್

ವಾರ್ತಾಭಾರತಿವಾರ್ತಾಭಾರತಿ12 July 2016 8:14 PM IST
share
ಗಣಪತಿಗೆ ಕಿರಕುಳ ನೀಡಿಲ್ಲ  ತಪ್ಪಿತಸ್ಥನಾದರೆ ಶಿಕ್ಷೆ ಅನುಭವಿಸಲು ಸಿದ್ಧ: ಕೆ.ಜೆ.ಜಾರ್ಜ್

ಬೆಂಗಳೂರು, ಜು.12: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ವಿಚಾರವು ನನಗೆ ಆಘಾತ ಹಾಗೂ ನೋವು ಉಂಟು ಮಾಡಿದೆ. ನನ್ನ 45 ವರ್ಷಗಳ ರಾಜಕೀಯ ಜೀವನದಲ್ಲಿ ಎಂದಿಗೂ ದ್ವೇಷದ ರಾಜಕಾರಣವನ್ನು ಮಾಡಿಲ್ಲ. ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಂಡಿಲ್ಲ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟಣೆ ನೀಡಿದ್ದಾರೆ.

ಮಂಗಳವಾರ ವಿಧಾನಸಭೆಯಲ್ಲಿ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಗಳ ಕುರಿತು ಅವರು ಸ್ಪಷ್ಟಣೆ ನೀಡಿದರು.

1969ರಲ್ಲಿ ನಾನು ಕೊಡಗು ಜಿಲ್ಲೆಯ ಒಂದು ಸಣ್ಣ ಊರಿನಿಂದ ರಾಜಕೀಯ ಪ್ರವೇಶಿಸಿದೆ. ನಾನು ಶಾಸಕ, ಸಚಿವನಾಗುತ್ತೇನೆ ಎಂದು ಕನಸಿನಲ್ಲಿಯೂ ಅಂದು ಕೊಂಡಿರಲಿಲ್ಲ. ವೀರೇಂದ್ರಪಾಟೀಲ್ ಅವರ ಸರಕಾರದಲ್ಲಿ ನಾನು ಸಚಿವನಾಗಿ ಕೆಲಸ ಮಾಡಿದ್ದೇನೆ ಎಂದು ಅವರು ಹೇಳಿದರು.

2013ರ ಜೂ.18 ಹಾಗೂ 19ರಂದು ನಾನು ಉಡುಪಿ ಹಾಗೂ ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಗಣಪತಿ ವಿರುದ್ಧ ಯಾರೂ ನನಗೆ ದೂರು ನೀಡಿಲ್ಲ. 2013ರ ಸೆ.26ರಂದು ರಾಜಗೋಪಾಲನಗರ ಪೊಲೀಸ್‌ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ನಿಯುಕ್ತಿಗೊಂಡರು ಎಂದು ಅವರು ತಿಳಿಸಿದರು. ಐದಾರು ತಿಂಗಳ ನಂತರ ಗಣಪತಿ ವಿರುದ್ಧ ಬಂದ ಒಂದು ದೂರಿನ ಹಿನ್ನೆಲೆಯಲ್ಲಿ ನಗರ ಪೊಲೀಸ್‌ಆಯುಕ್ತರಾಗಿದ್ದ ರಾಘವೇಂದ್ರ ಔರಾದ್ಕರ್ ಅವರನ್ನು 2014 ಮಾ.10ರಂದು ಅಮಾನತ್ತು ಮಾಡಿದರು. ಇದರಲ್ಲಿ ನನ್ನ ಹಸ್ತಕ್ಷೇಪವೇನು ಇರಲಿಲ್ಲ ಎಂದು ಜಾರ್ಜ್ ಸ್ಪಷ್ಟಣೆ ನೀಡಿದರು.

ನಾನು ಅವರ ವಿರುದ್ಧ ದ್ವೇಷ ಸಾಧನೆ ಮಾಡಿದ್ದರೆ, ಕಿರುಕುಳ ನೀಡಿದ್ದರೆ ಒಂದೇ ತಿಂಗಳಲ್ಲಿ ಅವರ ವಿರುದ್ಧದ ಅಮಾನತ್ತು ಆದೇಶ ರದ್ದಾಗಿ ಅವರು ಕರ್ತವ್ಯಕ್ಕೆ ಮರಳುತ್ತಿದ್ದರೆ? ಇನ್ನು ಅವರ ಭಡ್ತಿಗೆ ಸಂಬಂಧಿಸಿದ ಕಡತ ನನ್ನ ಬಳಿ ಬಂದೇ ಇರಲಿಲ್ಲ. ಪರಮೇಶ್ವರ್ ಅವರು ಗೃಹ ಸಚಿವರಾದ ನಂತರ ಕಡತ ಅವರ ಬಳಿ ಬಂತು, ಆನಂತರ ಭಡ್ತಿ ನೀಡಲಾಗಿದೆ ಎಂದು ಅವರು ಹೇಳಿದರು.

‘ನಾನು-ಜಾರ್ಜ್, ನೀವು-ಶೆಟ್ಟರ್’ ಎನ್ನುವ ಕಾರಣಕ್ಕೆ ನನ್ನ ವಿರುದ್ಧ ಆಪಾದನೆಗಳನ್ನು ಮಾಡುತ್ತಿದ್ದೀರಾ ಎನ್ನುತ್ತಿದ್ದಂತೆ ವಿರೋಧ ಪಕ್ಷದ ಸದಸ್ಯರು ಜಾರ್ಜ್ ವಿರುದ್ಧ ಮುಗಿಬಿದ್ದರು. ನಿಮ್ಮ ವಿರುದ್ಧದ ಆಪಾದನೆಗಳನ್ನು ಸಮರ್ಥಿಸಿಕೊಳ್ಳಲು ಜಾತಿ, ಧರ್ಮವನ್ನು ಬಳಕೆ ಮಾಡಿಕೊಳ್ಳಬೇಡಿ ಎಂದು ಕಿಡಿಗಾರಿದರು. ಬಳಿಕ ಮಾತು ಮುಂದುವರೆಸಿದ ಕೆ.ಜೆ.ಜಾರ್ಜ್, ನಾನು ಯಾವುದೇ ತಪ್ಪು ಮಾಡಿಲ್ಲ. ತನಿಖೆಯಾಗಲಿ ನನ್ನ ವಿರುದ್ಧದ ಆಪಾದನೆಗಳು ಸಾಬೀತಾದರೆ ಕಾನೂನು ರೀತಿ ಯಾವುದೆ ಶಿಕ್ಷೆಗೆ ಗುರಿಯಾಗಲು ನಾನು ಸಿದ್ಧನಿದ್ದೇನೆ. ಆದರೆ, ನನ್ನ ಮೇಲಿನ ಆರೋಪ ಸಾಬೀತಾಗದೆ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವುದು ಎಷ್ಟರಮಟ್ಟಿಗೆ ಸರಿ ಎಂದು ಭಾವುಕವಾಗಿ ನುಡಿದರು.

ನಾನು ಗಣಪತಿ ಸೇರಿದಂತೆ ಯಾವೊಬ್ಬ ಅಧಿಕಾರಿಗೂ ಕಿರುಕುಳ ನೀಡಿರುವ ಕುರಿತು ಒಂದೇ ಒಂದು ಸಾಕ್ಷಿಯಿಲ್ಲ. ಗಣಪತಿಗೆ ಅಧಿಕಾರಿಗಳು ಕಿರುಕುಳ ನೀಡಿದ್ದರೆ ಐಜಿ, ಡಿಜಿ, ನನಗೆ ಅಥವಾ ಮುಖ್ಯಮಂತ್ರಿಗೆ ದೂರು ನೀಡಬಹುದಿತ್ತು ಎಂದ ಅವರು, ನನ್ನ ನಾಯಕರು ಮುಖ್ಯಮಂತ್ರಿ. ಅವರು ಕೇಳಿದರೆ ನಾನು ರಾಜೀನಾಮೆ ನೀಡುತ್ತೇನೆ. ನೀವು ಕೇಳಿದರೆ ರಾಜೀನಾಮೆ ನೀಡಲು ಸಾಧ್ಯವಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X