Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲಿಂಗ ಪರಿವರ್ತಿತರ ಸಮಸ್ಯೆಗಾಗಿ...

ಲಿಂಗ ಪರಿವರ್ತಿತರ ಸಮಸ್ಯೆಗಾಗಿ ವೆಬ್‌ಸೈಟ್

ವಾರ್ತಾಭಾರತಿವಾರ್ತಾಭಾರತಿ12 July 2016 8:48 PM IST
share

ಮಂಗಳೂರು,ಜು.12: ಲಿಂಗಪರಿವರ್ತಿತರ ಸಮಸ್ಯೆಗಳಿಗೆ ಧ್ವನಿಯಾಗಲು, ಸಹಾಯ ನೀಡಲು, ಲಿಂಗಪರಿವರ್ತಿತರ ಬಗ್ಗೆ ಮಾಹಿತಿ ನೀಡಲು ದೇಶದ ಮೊದಲ 24*7ವೆಬ್‌ಸೈಟ್ ಆರಂಭಿಸಲಾಗಿದೆ ಎಂದು ಲಿಂಗ ಪರಿವರ್ತಿತ ನೇಸರ ರೈ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.

www.transgenderindia.com ಹೆಸರಿನ ವೆಬ್‌ಸೈಟ್ ಜುಲೈ 12ರಿಂದ ಕಾರ್ಯಾರಂಭ ಮಾಡಿದೆ. ಸಲಿಂಗಿಗಳು ಮತ್ತು ಲಿಂಗಪರಿವರ್ತಿತರ ಬಗ್ಗೆ ಸಮಾಜದಲ್ಲಿ ಇರುವ ತಪ್ಪುಕಲ್ಪನೆ ಹೋಗಲಾಡಿಸಲು, ಲಿಂಗಪರಿವರ್ತಿತರಿಗೆ ಇ- ಪ್ರೋತ್ಸಾಹ ನೀಡಲು ವೆಬ್‌ಸೈಟ್ ಪ್ರಾರಂಭಿಸಲಾಗಿದೆ. ಲಿಂಗಪರಿವರ್ತಿತರು ಒಟ್ಟಾಗಿ ವೆಬ್‌ಸೈಟ್ ರೂಪಿಸಿದ್ದೇವೆ. ಲಿಂಗಪರಿವರ್ತಿತರ ವಿಷಯಗಳಿಗೆ ಸಂಬಂಧಿಸಿ ಆನ್‌ಲೈನ್ ಸಂಪನ್ಮೂಲವಾಗಿ ವೆಬ್‌ಸೈಟ್ ಕಾರ್ಯನಿರ್ವಹಿಸಲಿದೆ. ಲಿಂಗಪರಿವರ್ತಿತರ, ಅವರ ಕುಟುಂಬಿಕರ ನೈಜ ಜೀವನ ಅನುಭವ ಪ್ರಕಟಿಸಲಿದೆ. ಈ ಸಂಬಂಧಿತ ವಿಷಯಗಳ ಚರ್ಚೆಗೆ ವೇದಿಕೆ ಆಗಲಿದೆ ಎಂದು ಅವರು ವಿವರ ನೀಡಿದರು.

15ರ ಹರೆಯದಲ್ಲೇ ನಾನು ತಾಯಿಯನ್ನು ಕಳೆದುಕೊಂಡೆ. ಆ ಬಳಿಕ ಸೋದರಮಾವನಿಂದಲೇ ದೌರ್ಜನ್ಯಕ್ಕೆ ಒಳಗಾದೆ. 10 ವರ್ಷಗಳ ಕಾಲ ದೌರ್ಜನ್ಯ ಅನುಭವಿಸಿ ಮಾನಸಿಕವಾಗಿ ಜರ್ಜರಿತಗೊಂಡಿದ್ದೆ. ಇದರ ಪರಿಣಾಮವಾಗಿ ಲಿಗಪರಿವರ್ತನೆಯ ನಿರ್ಧಾರ ಕೈಗೊಂಡೆ. ಈ ಸಂದರ್ಭ ಕುಟುಂಬಿಕರು ನನ್ನನ್ನು ವೈದ್ಯರು, ಮನಶಾಸ್ತ್ರಜ್ಞರು, ಬಾಬಾಗಳ ಬಳಿ ಕರೆದೊಯ್ದರು. ಬಳಿಕ ನಾನು ಲಿಂಗಪರಿವರ್ತನೆಗೆ ಒಳಗಾದೆ ಎಂದು ವಿವರಿಸಿದರು.

 ಲಿಂಗಪರಿವರ್ತಿತರು ತಮ್ಮನ್ನು ಸಾರ್ವಜನಿಕವಾಗಿ ಗುರುತಿಸಿಕೊಳ್ಳಲು ಹಿಂದೇಟು ಹಾಕಿ, ಲಿಂಗಪರಿವರ್ತನೆ ಹೊಂದಿದ ವಿಷಯವನ್ನು ರಹಸ್ಯವಾಗಿಡುತ್ತಿದ್ದಾರೆ. ಲಿಂಗಪರಿವರ್ತನೆ ಹೊಂದಿದ ವ್ಯಕ್ತಿ ತಾನಾಗಿ ವಿಷಯವನ್ನು ತಿಳಿಸದ ಹೊರತು ಸಮಾಜಕ್ಕೂ ಗೊತ್ತಾಗುವುದಿಲ್ಲ. ಆದರೆ, ಲಿಂಗಪರಿವರ್ತನೆ ಹೊಂದಿದ ವ್ಯಕ್ತಿಯನ್ನು ಸಮಾಜ ಹಿಜಿಡಾ ಎಂದು ಕರೆಯುತ್ತಿದೆ. ಲಿಂಗಪರಿವರ್ತಿತರನ್ನು ಹಿಜಿಡಾ ಎಂದು ಕರೆಯುವುದು ತಪ್ಪು ಎಂದವರು ಅಭಿಪ್ರಾಯಿಸಿದರು.

ಲಿಂಗಪರಿವರ್ತಿತ ಬಬಲ್ ಮಾತನಾಡಿ, ತಾನು ಮಂಗಳೂರಿನ ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಪದವಿ ಅಧ್ಯಯನ ನಡೆಸುತ್ತಿದ್ದು, ತಾರತಮ್ಯ ಎದುರಿಸುತ್ತಿದ್ದೇನೆ. ಹಾಸ್ಟೆಲ್, ತರಗತಿಯಲ್ಲೂ ಕೀಳಾಗಿ ನೋಡುತ್ತಿದ್ದಾರೆ. ಇದರ ವಿರುದ್ಧ ಸಂಘಟಿತರಾಗಿ ಹೋರಾಟ ನಡೆಸುತ್ತೇವೆ ಎಂದರು.
ವೆಬ್‌ಸೈಟ್ ಮತ್ತು ಇತರ ಮಾಹಿತಿಗಾಗಿ ದೂ. 7338321413 ಸಂಪರ್ಕಿಸಬಹುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X