ಮಾಜಿ ಶಾಸಕ ವಸಂತ ರಾವ್ ಪಾಟೀಲ್ಗೆ ಶ್ರದ್ಧಾಂಜಲಿ
ಬೆಂಗಳೂರು, ಜು.12: ನಿನ್ನೆಯಷ್ಟೇ ನಿಧನರಾದ ಮಾಜಿ ಶಾಸಕ ವಸಂತರಾವ್ ಪಾಟೀಲ್ ಅವರಿಗೆ ವಿಧಾನಸಭೆಯಲ್ಲಿ ಮಂಗಳವಾರ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಮಂಗಳವಾರ ಬೆಳಗ್ಗೆ ವಿಧಾನಸಭೆ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸಂತಾಪ ಸೂಚನೆ ನಿರ್ಣಯವನ್ನು ಮಂಡಿಸಿದ ಸ್ಪೀಕರ್ ಕೆ.ಬಿ.ಕೋಳಿವಾಡ, ಅಗಲಿದ ಗಣ್ಯರ ಗುಣಗಾನ ಮಾಡಿದರು. ಆ ಬಳಿಕ ಎಲ್ಲ ಸದಸ್ಯರು ಎದ್ದುನಿಂತು ಒಂದು ನಿಮಿಷ ಮೌನ ಆಚರಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.
Next Story





