ಕೃಷಿ ಅಭಿಯಾನಕ್ಕೆ ಚಾಲನೆ
![ಕೃಷಿ ಅಭಿಯಾನಕ್ಕೆ ಚಾಲನೆ ಕೃಷಿ ಅಭಿಯಾನಕ್ಕೆ ಚಾಲನೆ](https://www.varthabharati.in/sites/default/files/images/articles/2016/07/13/krishi-BCK.gif)
ಮಂಗಳೂರು,ಜು.12: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆಯೋಜಿಸಿರುವ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು.
ದ.ಕ. ಜಿಲ್ಲಾ ಪಂಚಾಯತ್ ಆವರಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಕೃಷಿ ಅಭಿಯಾನ ಪ್ರಚಾರ ವಾಹನಕ್ಕೆ ಹಸಿರು ನಿಶಾನೆ ತೋರಿದರು.
ಈ ಸಂದರ್ಭ ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಐ.ಶ್ರೀವಿದ್ಯಾ, ಉಪಕಾರ್ಯದರ್ಶಿ ಎನ್.ಆರ್.ಉಮೇಶ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ಜಿಲ್ಲಾ ವಾರ್ತಾಧಿಕಾರಿ ಬಿ.ಎ.ಖಾದರ್ ಶಾ ಉಪಸ್ಥಿತರಿದ್ದರು.
20 ದಿನಗಳ ಕಾಲ ಜಿಲ್ಲಾದ್ಯಂತ ಸಂಚರಿಸಲಿರುವ ಕೃಷಿ ಅಭಿಯಾನ ಕಾರ್ಯ ಕ್ರಮದಲ್ಲಿ ಕೃಷಿಕರಿಗೆ ವಿವಿಧ ಮಾಹಿತಿಗಳನ್ನು ನೀಡಲಾಗುವುದು. ಕೃಷಿ ಯಾಂತ್ರೀ ಕರಣ, ಲಘು ನೀರಾವರಿ ಯೋಜನೆ, ಕೃಷಿ ಯಂತ್ರೋಪಕರಣಗಳ ಬಾಡಿಗೆ, ಸಾವಯವ ಕೃಷಿ, ಭೂಚೇತನ ಯೋಜನೆ, ಕೃಷಿಭಾಗ್ಯ ಯೋಜನೆ, ಕೃಷಿ ಸಾಲಗಳ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಈ ಅಭಿಯಾನದಲ್ಲಿ ನಡೆಸಲಾಗುವುದು ಎಂದು ವಾರ್ತಾಧಿಕಾರಿ ವಿವರಿಸಿದರು.