Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಿಯೋ ಒಲಿಂಪಿಕ್ಸ್: ಹರ್ಯಾಣದ ಮಹಿಳೆಯರ...

ರಿಯೋ ಒಲಿಂಪಿಕ್ಸ್: ಹರ್ಯಾಣದ ಮಹಿಳೆಯರ ಮೇಲುಗೈ!

ವಾರ್ತಾಭಾರತಿವಾರ್ತಾಭಾರತಿ13 July 2016 5:50 PM IST
share
ರಿಯೋ ಒಲಿಂಪಿಕ್ಸ್: ಹರ್ಯಾಣದ ಮಹಿಳೆಯರ ಮೇಲುಗೈ!

  ಚಂಡೀಗಢ, ಜು.13: ಹರ್ಯಾಣ ರಾಜ್ಯ ಹೆಣ್ಣು ಭ್ರೂಣ ಹತ್ಯೆ ಹಾಗೂ ಪಿತೃಪ್ರಭುತ್ವದ ಮನಸ್ಥಿತಿಯ ಮೂಲಕ ಹೆಚ್ಚು ಕುಖ್ಯಾತಿ ಪಡೆದಿದೆ. ಆದರೆ, ವಿಶ್ವದ ಶ್ರೇಷ್ಠ ಕ್ರೀಡಾಕೂಟ ಒಲಿಂಪಿಕ್ಸ್ ಪ್ರಾತಿನಿಧ್ಯ ವಿಷಯಕ್ಕೆ ಬಂದಾಗ ರಾಜ್ಯದ ಮಹಿಳೆಯರು ಪುರುಷರಿಗಿಂತ ಒಂದು ಹೆಜ್ಜೆ ಮುಂದಿದ್ದಾರೆ.

ಬ್ರೆಝಿಲ್‌ನಲ್ಲಿ ನಡೆಯಲಿರುವ ರಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲಿರುವ ಭಾರತ ತಂಡದಲ್ಲಿ ಹರ್ಯಾಣ ರಾಜ್ಯದ ಅಥ್ಲೀಟ್‌ಗಳು ಗರಿಷ್ಠ ಸಂಖ್ಯೆಯಲ್ಲಿದ್ದಾರೆ. ಈ ಬಾರಿ ಭಾರತ ಒಲಿಂಪಿಕ್ಸ್‌ಗೆ ಕಳುಹಿಸಿಕೊಡುತ್ತಿರುವ ಗರಿಷ್ಠ 120 ಅಥ್ಲೀಟ್‌ಗಳ ಪೈಕಿ 21 ಅಥ್ಲೀಟ್‌ಗಳು ಹರ್ಯಾಣ ರಾಜ್ಯದವರು. ರಾಜ್ಯದ 12 ಮಹಿಳೆಯರು ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸಲಿದ್ದಾರೆ. ಹಾಕಿ ತಂಡದಲ್ಲಿ ಆರು, ಕುಸ್ತಿಯಲ್ಲಿ ಮೂವರು, ಅಥ್ಲೆಟಿಕ್ಸ್‌ನಲ್ಲಿ ಇಬ್ಬರು ಹಾಗೂ ಸ್ವಿಮ್ಮಿಂಗ್‌ನಲ್ಲಿ ಓರ್ವ ಮಹಿಳೆಯರು ಭಾಗವಹಿಸುತ್ತಿದ್ದಾರೆ.

ಇದೇ ಮೊದಲ ಬಾರಿ ಭಾರತದ ಮೂವರು ಮಹಿಳೆಯರು ಕುಸ್ತಿ ಕಣದಲ್ಲಿ ಅದೃಷ್ಟ ಪರೀಕ್ಷಿಸಲಿದ್ದಾರೆ. ಸಾಕ್ಷಿ ಮಲಿಕ್, ಬಬಿತಾ ಫೋಗತ್ ಹಾಗೂ ವಿನೇಶ್ ಫೋಗತ್ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲಿದ್ದು, ಇವರೆಲ್ಲರೂ ಹರ್ಯಾಣದವರು.

ಮಂಗಳವಾರ ಘೋಷಿಸಲ್ಪಟ್ಟ 16 ಸದಸ್ಯೆಯರನ್ನು ಒಳಗೊಂಡ ಮಹಿಳಾ ಹಾಕಿ ತಂಡದಲ್ಲಿ ರಾಜ್ಯದ ಆರು ಆಟಗಾರ್ತಿಯರಿದ್ದಾರೆ. ಅವರುಗಳೆಂದರೆ: ದೀಪಿಕಾ ಥಾಕೂರ್(ಉಪನಾಯಕಿ), ರಾಣಿ ರಾಂಪಾಲ್, ನವಜೋತ್ ಕೌರ್, ಮೋನಿಕಾ, ಗೋಲ್‌ಕೀಪರ್ ಸವಿತಾ ಪೂನಿಯಾ ಹಾಗೂ ಪೂನಂ ಮಲಿಕ್.

ರಾಜ್ಯದ ಡಿಸ್ಕಸ್ ಎಸೆತಗಾರ್ತಿ ಸೀಮಾ ಪೂನಿಯಾ ಮೂರನೆ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿದ್ದಾರೆ. ಓಟಗಾರ್ತಿ ನಿರ್ಮಲಾ ಶೆರೊನ್ ಚೊಚ್ಚಲ ಒಲಿಂಪಿಕ್ಸ್ ಆಡಲಿದ್ದಾರೆ. ಗುರ್ಗಾಂವ್‌ನ ಶಿವಾನಿ ಕಟಾರಿಯಾ ಸ್ವಿಮ್ಮಿಂಗ್‌ನಲ್ಲಿ ದೇಶವನ್ನು ಪ್ರತಿನಿಧಿಸಲಿದ್ದಾರೆ.

ಲಂಡನ್‌ನಲ್ಲಿ 2012ರಲ್ಲಿ ನಡೆದ ಒಲಿಂಪಿಕ್ಸ್ ಕೂಟದಲ್ಲಿ ಹರ್ಯಾಣದ 16 ಅಥ್ಲೀಟ್‌ಗಳಿದ್ದರು. ಕೇವಲ ಐವರು ಮಹಿಳೆಯರು ರಾಜ್ಯವನ್ನು ಪ್ರತಿನಿಧಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X