Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜು.16ರಂದು ರೈತಸಂಘದಿಂದ ಕಡಬ ತಹಶೀಲ್ದಾರ್...

ಜು.16ರಂದು ರೈತಸಂಘದಿಂದ ಕಡಬ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ

ಕುಮಾರಧಾರ ನದಿಗೆ ಅಣೆಕಟ್ಟು ನಿರ್ಮಾಣಕ್ಕೆ ವಿರೋಧ

ವಾರ್ತಾಭಾರತಿವಾರ್ತಾಭಾರತಿ13 July 2016 8:00 PM IST
share

ಪುತ್ತೂರು, ಜು.13: ರಾಜ್ಯ ಸರಕಾರವು ಕಾನೂನು ಬಾಹಿರವಾಗಿ ಜಿಲ್ಲೆಯ ಜೀವನದಿಯಾದ ಕುಮಾರಧಾರ ನದಿಗೆ 7 ಕಡೆಗಳಲ್ಲಿ ವಿದ್ಯುತ್ ಉತ್ಪಾದನೆಗಾಗಿ ಅಣೆಕಟ್ಟು ನಿರ್ಮಾಣ ವಾಡಲು ಖಾಸಗಿ ಕಂಪೆನಿಗಳಿಗೆ ಗೌಪ್ಯವಾಗಿ ಅನುಮತಿ ನೀಡಿದ್ದು, ಪರಿಸರಕ್ಕೆ ಹಾನಿಮಾಡುವ ಹಾಗೂ ಕಾನೂನುಬಾಹಿರವಾಗಿ ನಿರ್ಮಾಣವಾಗುತ್ತಿರುವ ಈ ಯೋಜನೆಯನ್ನು ವಿರೋಧಿಸಿ ಜುಲೈ 16ರಂದು ರಾಜ್ಯ ರೈತ ಸಂಘ -ಹಸಿರುಸೇನೆ ಹಾಗೂ ಉರುಂಬಿ ಅಣೆಕಟ್ಟು ವಿರೋಧಿ ಹೋರಾಟ ಸಮಿತಿಯ ವತಿಯಿಂದ ಕಡಬ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ರಾಜ್ಯ ಕಾರ್ಯದರ್ಶಿ ಸಿ.ಕುಮಾರ ಸುಬ್ರಹ್ಮಣ್ಯ ಶಾಸ್ತ್ರಿ ತಿಳಿಸಿದ್ದಾರೆ.

ಪುತ್ತೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ರೈತ ಸಂಘ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುವುದು. ರಾಜ್ಯದ ವಿವಿಧ ಜಿಲ್ಲೆಗಳ ರೈತ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸುವರು ಎಂದರು.

ಕುಮಾರಧಾರಾ ನದಿಯಲ್ಲಿ ಸುಮಾರು 50 ಕಿ.ಮೀ. ವ್ಯಾಪ್ತಿಯಲ್ಲಿ 7 ಕಡೆಗಳಲ್ಲಿ ಜಲವಿದ್ಯುತ್ ಯೋಜನೆಗಾಗಿ ಅಣೆಕಟ್ಟುಗಳನ್ನು ನಿರ್ಮಾಣ ರಾಜ್ಯ ಸರಕಾರ ಖಾಸಗಿ ಕಂಪೆನಿಗಳಿಗೆ ಗೌಪ್ಯವಾಗಿ ಅನುಮತಿ ನೀಡಿದ್ದು, ಈ ಪೈಕಿ ಈಗಾಗಲೇ ಕೊಲ ಗ್ರಾಮದ ಪರಂಗಾಜೆ, ಕೊಣೆಮಜಲು ಮತ್ತು ಉರುಂಬಿಯ ಬಳಿ ಮೂರು ಕಡೆಗಳಲ್ಲಿ ಅಣೆಕಟ್ಟು ನಿರ್ಮಿಸಲು ಸರ್ವೇ ಕಾರ್ಯಕ್ಕೆ ಕಂಪೆನಿಗಳು ಮುಂದಾಗಿವೆ. ಇಲ್ಲಿ ಅಣೆಕಟ್ಟುಗಳು ನಿರ್ಮಾಣವಾದರೆ ನದಿ ಪಾತ್ರದ ಇಕ್ಕೆಲಗಳಲ್ಲಿರುವ ಸುಮಾರು 18 ಗ್ರಾಮಗಳ ಫಲವತ್ತಾದ ಕೃಷಿ ಭೂಮಿ ಮುಳುಗಡೆಯಾಗಲಿದೆ. ಸಾವಿರಾರು ಎಕರೆ ಅರಣ್ಯ ನಾಶವಾಗಲಿದ್ದು, ನೂರಾರು ರೈತ ಕುಟುಂಬಗಳು ಬೀದಿಗೆ ಬೀಳಲಿವೆ ಎಂದು ಅವರು ತಿಳಿಸಿದರು.

ಖಾಸಗಿ ಕಂಪೆನಿಗಳು ಯಾವುದೇ ಅನುಮತಿ ಇಲ್ಲದೆ ಭೂಸರ್ವೇ ಮಾಡುವ ಕಾರ್ಯ ಪ್ರಾರಂಭಿಸಿವೆ. ಸರಕಾರ ವಿಧಿಸಿರುವ ಷರತ್ತುಗಳನ್ನು ಉಲ್ಲಂಘಿಸಿ ದಬ್ಬಾಳಿಕೆಯ ಮೂಲಕ ಕಂಪೆನಿಗಳು ರೈತರನ್ನು ಆತಂಕಕ್ಕೆ ಒಡ್ಡುತ್ತಿವೆ. ಸರ್ವೇ ಕಾರ್ಯದ ಬಗ್ಗೆ ರೈತರಿಗೆ ಯಾವುದೇ ಪೂರ್ವ ಮಾಹಿತಿ ನೀಡಲಾಗಿಲ್ಲ. ಯೋಜನೆಯ ಬಗ್ಗೆ ಸ್ಷಷ್ಟತೆಯೂ ಇಲ್ಲ. ಮುಳುಗಡೆಯಾಗಲಿರುವ ಭೂಮಿಯ ಮಾಹಿತಿಯೂ ಇಲ್ಲ. ಈ ಬಗ್ಗೆ ಜನತೆ ಧ್ವನಿ ಎತ್ತಿದ್ದರೂ ಸರಕಾರ ಜನತೆಯ ಮಾತಿಗೆ ಕಿಂಚಿತ್ತು ಬೆಲೆ ಕೊಡದ ಕಾರಣ ಸರಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸುವ ಸಲುವಾಗಿ ಮುತ್ತಿಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

ಜಲವಿದ್ಯುತ್ ಯೋಜನೆಗಳು ಯಾವ ಭಾಗದಲ್ಲಿಯೂ ಯಶಸ್ವಿಯಾಗಿಲ್ಲ. ಆದ್ದರಿಂದ ಈ ಯೋಜನೆಗಳಿಗೆ ಸರಕಾರ ಅನುಮತಿ ನೀಡಬಾರದು. ಜಲವಿದ್ಯುತ್‌ಗಾಗಿ ಅಣೆಕಟ್ಟು ನಿರ್ಮಾಣ ಮಾಡಲೇಬಾರದು. ಸರಕಾರ ಈ ಅಣೆಕಟ್ಟು ನಿರ್ಮಾಣಕ್ಕೆ ನೀಡಲಾಗುವ 70% ಸಬ್ಸಿಡಿಯನ್ನು ನುಂಗುವ ಉದ್ದೇಶದಿಂದ ಮಾತ್ರ ಖಾಸಗಿ ಕಂಪೆನಿಗಳು ಈ ಅಣೆಕಟ್ಟು ನಿರ್ಮಾಣದ ಕೆಲಸಕ್ಕೆ ಇಳಿದಿವೆಯೇ ಹೊರತು ಅಭಿವೃದ್ಧಿ ದೃಷ್ಟಿಯಿಂದಲ್ಲ ಎಂದ ಅವರು ಅರಣ್ಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಯಾವುದೇ ಇಲಾಖೆಗಳ ಅನುಮತಿ ಪಡೆಯದೆ ಅನುಷ್ಠಾನಕ್ಕೆ ಮುಂದಾಗಿರುವ ಈ ಬೋಗಸ್ ಯೋಜನೆಯಿಂದಾಗಿ ಕೃಷಿಕರಲ್ಲಿ ಭಯದ ಮತ್ತು ಗೊಂದಲದ ವಾತಾವರಣ ಸೃಷ್ಟಿಯಾಗಿದೆ ಎಂದರು.

ರಾಜ್ಯ ರೈತ ಸಂಘ ಹಸಿರುಸೇನೆಯ ಜಿಲ್ಲಾಧ್ಯಕ್ಷ ಬಿ.ಶ್ರೀಧರ್ ಶೆಟ್ಟಿ ಬೈಲುಗುತ್ತು ಮಾತನಾಡಿ, ಈ ಹಿಂದೆ ಅಣೆಕಟ್ಟುಗಳ ವಿರುದ್ಧ ಹೋರಾಟ ಮಾಡಿದ್ದ ಶೋಬಾ ಕರಂದ್ಲಾಜೆ ಅವರೇ ಇಂಧನ ಸಚಿವರಾಗಿದ್ದಾಗ ಈ ಯೋಜನೆಗಳಿಗೆ ಅನುಮತಿ ನೀಡಿದ್ದಾರೆ ಎಂದು ಆರೋಪಿಸಿದರು. ಜಲವಿದ್ಯುತ್ ಯೋಜನೆಯಡಿಯಲ್ಲಿ ಅಣೆಕಟ್ಟು ನಿರ್ಮಾಣ ಮಾಡುವುದರ ವಿರುದ್ಧ ನಮ್ಮ ಹೋರಾಟ ಹೊರತು, ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಅಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ರೈತ ಸಂಘ ಹಸಿರು ಸೇನೆಯ ಜಿಲ್ಲಾ ಉಪಾಧ್ಯಕ್ಷ ಧರ್ಣಪ್ಪ ಗೌಡ ಇಡ್ಯಾಡಿ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X