Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಪೂರ್ಣ ಹದೆಗೆಟ್ಟ ಕಳ್ಳಿಗೆ ಗ್ರಾಮದ...

ಸಂಪೂರ್ಣ ಹದೆಗೆಟ್ಟ ಕಳ್ಳಿಗೆ ಗ್ರಾಮದ ರಸ್ತೆ: ಹೈಕೋರ್ಟ್‌ನಲ್ಲಿ ದಾವೆ ಹೂಡುವ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ13 July 2016 8:53 PM IST
share
ಸಂಪೂರ್ಣ ಹದೆಗೆಟ್ಟ ಕಳ್ಳಿಗೆ ಗ್ರಾಮದ ರಸ್ತೆ: ಹೈಕೋರ್ಟ್‌ನಲ್ಲಿ ದಾವೆ ಹೂಡುವ ಎಚ್ಚರಿಕೆ

ಬಂಟ್ವಾಳ, ಜು. 13: ಸಂಪೂರ್ಣ ಹದೆಗೆಟ್ಟು ಸಂಚಾರಕ್ಕೆ ಅಯೋಗ್ಯವಾಗಿರುವ ತಾಲೂಕಿನ ಕಳ್ಳಿಗೆ ಗ್ರಾಮದ ದರಿಬಾಗಿಲಿನಿಂದ ನೆತ್ರಕೆರೆ - ಬೆಂಜನಪದವು ರಸ್ತೆ ಮತ್ತು ಜಾರದಗುಂಡಿಯಿಂದ ಕನಪಾಡಿ - ಬೆದ್ರಾಡಿ ವರೆಗಿನ 6 ಕಿಲೋ ಮೀಟರ್ ರಸ್ತೆಯ ಕಾಮಗಾರಿಯನ್ನು ಮಳೆಗಾಲ ಮುಗಿದಾಕ್ಷಣ ಕೈಗೆತ್ತಿಕೊಳ್ಳದಿದ್ದರೆ ರಾಜ್ಯ ಮತ್ತು ಕೇಂದ್ರ ಸರಕಾರದ ವಿರುದ್ಧ ಉಚ್ಛ ನ್ಯಾಯಾಲಯದಲ್ಲಿ ದಾವೆ ಹೂಡಲಾಗುವುದು ಎಂದು ಕಳ್ಳಿಗೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪುರುಷ ಎನ್. ಸಾಲಿಯಾನ್ ಎಚ್ಚರಿಸಿದ್ದಾರೆ.

ಬಧವಾರ ಸಂಜೆ ಬಿ.ಸಿ.ರೋಡ್ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಗೆ ಫೆಬ್ರವರಿ ತಿಂಗಳಲ್ಲಿ ಬರೆದ ಪತ್ರದ ಹಿನ್ನೆಲೆಯಲ್ಲಿ ಪ್ರಧಾನಿ ಕಚೇರಿ ತುರ್ತು ಸ್ಪಂದನೆ ನೀಡಿ ಈ ರಸ್ತೆಯ ಬಗ್ಗೆ ಸಂಪೂರ್ಣ ವರದಿ ಸಲ್ಲಿಸುವಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದರು. ಅದರಂತೆ ಬಂಟ್ವಾಳ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಇಂಜಿನಿಯರ್ ಸ್ಥಳ ಪರಿಶೀಲನೆ ನಡೆಸಿ ಈ ರಸ್ತೆ ಸಂಪೂರ್ಣ ಹದೆಗೆಟ್ಟಿದ್ದು ಪುನರ್ ನಿರ್ಮಾಣ ಕಾಮಗಾರಿಗೆ ಒಟ್ಟು ಮೂರೂವರೆ ಕೋಟಿ ರೂ. ಅನುದಾನದ ಅವಶ್ಯಕತೆಯಿದೆ ಎಂದು ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ತಕ್ಷಣ ಅನುದಾನ ಬಿಡುಗಡೆಗೊಳಿಸುವಂತೆ ರಾಜ್ಯ ಸರಕಾರದ ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ವರದಿ ಸಲ್ಲಿಸಿದ್ದಾರೆ. ಈ ವರದಿಯನ್ನು ಪುರಸ್ಕರಿಸಿ ಹದಗೆಟ್ಟಿರುವ ರಸ್ತೆಯನ್ನು ಅಭಿವೃದ್ಧಿಪಡಿಸಲು ಅನುದಾನ ಬಿಡುಗಡೆ ಮಾಡಿ ಮಳೆಗಾಲ ಮುಗಿದಾಕ್ಷಣ ಕಾಮಗಾರಿ ಆರಂಭಿಸಬೇಕು. ಇಲ್ಲವಾದರೆ ರಸ್ತೆ ಅಭಿವೃದ್ಧಿಪಡಿಸಲು ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡುವಂತೆ ಹೈ ಕೋರ್ಟ್‌ನಲ್ಲಿ ದಾವೆ ಹೂಡಲಾಗುವುದು ಎಂದು ಹೇಳಿದರು.

ಕಳ್ಳಿಗೆ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈಯವರ ಸ್ವ ಗ್ರಾಮವಾಗಿದ್ದು ಇದೇ ರಸ್ತೆಯಲ್ಲಿ ಅವರು ದಿನನಿತ್ಯ ಓಡಾಡುತ್ತಿದ್ದಾರೆ. ಸಚಿವರ ಸಹಿತ ಸಂಸದ ನಳೀನ್ ಕುಮಾರ್ ಕಟೀಲ್‌ರ ಗಮನಕ್ಕೂ ಈ ರಸ್ತೆ ಅಭಿವೃದ್ಧಿಗೆ ಕೋರಿ ಮನವಿ ಸಲ್ಲಿಸಲಾಗಿದೆ ಎಂದ ಅವರು, ಇವರಿಂದ ಯಾವುದೇ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಕಳೆದ ಫೆಬ್ರವರಿ ತಿಂಗಳಲ್ಲಿ ಪ್ರಧಾನಿಯವರಿಗೆ ಪತ್ರ ಬರೆಯಲಾಗಿತ್ತು. ಇದೀಗ ಈ ರಸ್ತೆಯ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗುವ ನಿರೀಕ್ಷೆಯಲ್ಲಿದ್ದೇವೆ. ಇಲ್ಲದಿದ್ದಲ್ಲಿ ನ್ಯಾಯಾಲಯದ ಮೊರೆ ಹೋಗಲಾಗುವುದು ಖಂಡಿತ. ಇದರ ಹಿಂದೆ ಯಾವುದೇ ರಾಜಕೀಯ ದುರುದ್ದೇಶವಿಲ್ಲದೆ ಗ್ರಾಮದ ಹಿತ ದೃಷ್ಠಿಯಿಂದ ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಸ್ಪಷ್ಟಪಡಿಸಿದರು.

ಅದೇ ರೀತಿ ಕಳ್ಳಿಗೆ ಗ್ರಾಮದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಕಳ್ಳಿಗೆ ಗ್ರಾಮವನ್ನು ಸ್ಮಾರ್ಟ್ ವಿಲೇಜ್ ಯೋಜನೆಗೆ ಸೇರಿಸಿಕೊಳ್ಳಲು ಪ್ರಧಾನಿಯವರ ಬಳಿಗೆ ಗ್ರಾಮಸ್ಥರ ನಿಯೋಗವೊಂದನ್ನು ಕರೆದೊಯ್ಯಲು ನಿರ್ಧರಿಸಲಾಗಿದೆ. ಈ ಸಂಬಂಧ ಪ್ರಧಾನಿಯವರ ಅನುಮತಿಗಾಗಿ ಕಾಯಲಾಗುತ್ತಿದೆ. ಹಾಗೆಯೇ ಬ್ರಹ್ಮರಕೂಟ್ಲುವಿನ ಬ್ರಹ್ಮ ಸನ್ನಿಧಿಯ ಬಳಿ ದ್ವಿಮುಖ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿಸುವ ನಿಟ್ಟಿನಲ್ಲಿ ಕೇಂದ್ರ ಸಾರಿಗೆ ಸಚಿವ ನಿತೀನ್ ಗಡ್ಕರಿಯನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಟೋಲ್ ಪ್ಲಾಝಾ ಬಳಿ 4+4 ಆಗಿ ರಸ್ತೆಯನ್ನು ಅಗಲೀಕರಿಸುವ ನಿಟ್ಟಿನಲ್ಲಿ ಸರ್ವೇ ಕಾರ್ಯ ಶೀಘ್ರದಲ್ಲೇ ನಡೆಯಲಿದೆ. ಹಾಗೆಯೇ ಇಲ್ಲಿನ ಎರಡು ಬಸ್ ತಂಗುದಾಣವನ್ನು ನಿರ್ಮಿಸಿಕೊಡುವ ಬಗ್ಗೆ ರಾ.ಹೆ.ಪ್ರಾ.ದ ಯೋಜನಾ ನಿರ್ದೇಶಕರು ಲಿಖಿತ ಭರವಸೆ ನೀಡಿದ್ದಾರೆ ಎಂದು ಅವರು ವಿವರಿಸಿದರು.

ಬ್ರಹ್ಮರಕೊಟ್ಲುವಿನ ದರಿಬಾಗಿಲು ಎಂಬಲ್ಲಿ ರೈಲು ತಂಗುದಾಣವನ್ನು ನಿರ್ಮಿಸಬೇಕೆಂಬ ತಮ್ಮ ಬೇಡಿಕೆಗೆ ರೈಲ್ವೆ ಸಚಿವರಿದಂಲೂ ಸ್ಪಂದನೆ ದೊರೆತಿದ್ದು ದಕ್ಷಿಣ ರೈಲ್ವೆ ಇಲಾಖಾಧಿಕಾರಿಗಳು ಈಗಾಗಲೇ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಶೀಘ್ರವೇ ಇಲ್ಲಿ ರೈಲು ತಂಗುದಾಣಕ್ಕೆ ಮಂಜೂರಾತಿ ದೊರಕುವ ಭರವಸೆ ಇದೆ. ಐದು ತಿಂಗಳಿನಿಂದ ಈ ಎಲ್ಲ ಸಮಸ್ಯೆಗಳ ಪರಿಹಾರಕ್ಕಾಗಿ ಓರ್ವ ಪಂಚಾಯತ್ ಸದಸ್ಯನ ವ್ಯಾಪ್ತಿಯನ್ನು ಮೀರಿ ಕಾರ್ಯನಿರ್ವಹಿಸಿದ ತೃಪ್ತಿ ಇದೆ. ಪ್ರಧಾನಿ ಸೇರಿದಂತೆ ವಿವಿಧ ಇಲಾಖೆಗಳಿಗೆ ನಿರಂತರವಾಗಿ ಹತ್ತಾರು ಪತ್ರ ವ್ಯವಹಾರ ನಡೆಸಲಾಗಿದ್ದು ಇದಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಗ್ರಾಪಂ ಸದಸ್ಯ ಮಹೇಶ್ ಚಂದ್ರಿಗೆ, ಬ್ರಹ್ಮರಕೊಟ್ಲು ಸರಕಾರಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಮಾಧವ ಎಂ. ಪೂಜಾರಿ, ಕಳ್ಳಿಗೆ ಗ್ರಾಮ ಸಮಿತಿ ಬಿಜೆಪಿಯ ಪ್ರ.ಕಾರ್ಯದರ್ಶಿ ನವೀನ್ ಪೆರಿಯೋಡಿ, ಮನೋಜ್ ವಳವೂರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X