Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲ:ಫಿಶ್‌ಮಿಲ್‌ ಗಳಿಗೆ ಚೆನ್ನೈ...

ಉಳ್ಳಾಲ:ಫಿಶ್‌ಮಿಲ್‌ ಗಳಿಗೆ ಚೆನ್ನೈ ಹಸಿರು ಪೀಠದಿಂದ 25 ಲಕ್ಷ ರೂ. ದಂಡ

ಏಷ್ಯನ್ ಫಿಶ್‌ಮಿಲ್ ಮುಚ್ಚುವಂತೆ ಆದೇಶ

ವಾರ್ತಾಭಾರತಿವಾರ್ತಾಭಾರತಿ13 July 2016 9:16 PM IST
share
ಉಳ್ಳಾಲ:ಫಿಶ್‌ಮಿಲ್‌ ಗಳಿಗೆ ಚೆನ್ನೈ ಹಸಿರು ಪೀಠದಿಂದ 25 ಲಕ್ಷ ರೂ. ದಂಡ

ಮಂಗಳೂರು, ಜು.13: ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಚೆನ್ನೈ ಪೀಠವು ಫಿಶ್‌ಮಿಲ್ ಹಾಗೂ ಆಯಿಲ್ ಮ್ಯಾನ್ಯುಫ್ಯಾಕ್ಚರರ್ ಅಸೋಯೇಶನ್ ಸಂಸ್ಥೆಗೆ 25 ರೂ.ಲಕ್ಷ ದಂಡವನ್ನು ವಿಧಿಸಿ ಆದೇಶ ನೀಡಿದೆ.

ಉಳ್ಳಾಲ ನಗರದ ನಿವಾಸಿಯಾದ ಮುಹಮ್ಮದ್ ಕಬೀರ್ ಎಂಬವರು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಚೆನ್ನೈ ಪೀಠದಲ್ಲಿ ಮೀನಿನಿಂದ ತಯಾರಿಸಲ್ಪಡುವ ಉತ್ಪನ್ನಗಳ ಉದ್ದಿಮೆಗಳಿಂದ ಜಲಮಾಲಿನ್ಯ, ವಾಯು ಮಾಲಿನ್ಯ ದುರ್ವಾಸನೆ ಹಾಗೂ ಕರಾವಳಿ ನಿಯಂತ್ರಣ ನಿಯಮ ಉಲ್ಲಂಘನೆ ಆಗುತ್ತಿರುವುದಾಗಿ ಹಾಗೂ ಇದರಿಂದ ಪರಿಸರ ಹಾನಿ ಉಂಟಾಗುತ್ತಿರುವುದನ್ನು ನಿಲ್ಲಿಸಲು ಕೋರಿ ಅರ್ಜಿ ಸಲ್ಲಿಸಿದ್ದರು. ಇಂಡಿಯನ್ ಫಿಶ್ ಮಿಲ್ ಹಾಗೂ ಇತರ 14 ಉದ್ದಿಮೆಗಳ ವಿರುದ್ಧ ಅರ್ಜಿ ಸಲ್ಲಿಸಿದ್ದರು.

ಹಸಿರು ನ್ಯಾಯಾಧಿಕರಣ ಪೀಠವು ಈ ಪ್ರಕರಣವನ್ನು ವಿಲೇವಾರಿ ಮಾಡಿ, ಈ ಪ್ರಕರಣದ 24ನೆ ಪ್ರತಿವಾದಿಗಳಾದ ಫಿಶ್‌ಮಿಲ್ ಹಾಗೂ ಆಯಿಲ್ ಮ್ಯಾನ್ಯುಫ್ಯಾಕ್ಚರರ್ ಅಸೋಯೇಶನ್ ಸಂಸ್ಥೆಗೆ 25 ಲಕ್ಷ ರೂ. ದಂಡ ವಿಧಿಸಿದೆ. ಇನ್ನುಳಿದಂತೆ 9  ಉದ್ದಿಮೆಗಳಿಗೆ ತಲಾ 5 ಲಕ್ಷ ರೂ. ಮತ್ತು  5 ಉದ್ದಿಮೆಗಳಿಗೆ 8 ಲಕ್ಷ ರೂ. ದಂಡ ವಿಧಿಸಿ ಆದೇಶ ನೀಡಿದೆ.

ಏಷ್ಯನ್ ಫಿಶ್‌ಮಿಲ್ ಮತ್ತು ಆಯಿಲ್ ಕಂಪೆನಿಯನ್ನು ಈ ಕೂಡಲೆ ಮುಚ್ಚುವಂತೆ ಆದೇಶ ನೀಡಿದೆಯಲ್ಲದೆ, ಮಂಡಳಿಯು ಈ ಎಲ್ಲಾ ಉದ್ದಿಮೆಗಳು ಸೇರಿ ಸ್ಥಾಪಿಸಿರುವ ಸಮೂಹ ಕೊಳಚೆ ನೀರಿನ ಶುದ್ಧೀಕರಣವನ್ನು ಪರಿಶೀಲನೆ ನಡೆಸಿ ಮಂಡಳಿ ನಿರ್ದೇಶನದ ಅನುಗುಣವಾಗಿ ಸ್ಥಾಪಿಸಲ್ಪಟ್ಟಿದೆಯೆ ಎಂದು ಪರಿಶೀಲಿಸುವಂತೆಯೂ ಆದೇಶದಲ್ಲಿ ತಿಳಿಸಿದೆ.

ಮೇಲೆ ತಿಳಿಸಿದ ಉದ್ದಿಮೆಗಳು ಭರಿಸುವ ದಂಡವನ್ನು ಪೊಲ್ಯುಟರ್ ಪೇ ಪ್ರಿನ್ಸಿಪಲ್ ಅಡಿಯಲ್ಲಿ ಪಾವತಿಸಲು ಸೂಚಿಸಲಾಗಿದೆ. ಈ ಎಲ್ಲಾ ದಂಡದ ಮೊತ್ತವನ್ನು ಪರಿಸರ ಸಂರಕ್ಷಣಾ ಪರಿಹಾರ ನಿಧಿಗೆ ಈ ಆದೇಶದ ದಿನಾಂಕದಿಂದ ಒಂದು ತಿಂಗಳೊಳಗಾಗಿ ಪಾವತಿಸುವಂತೆಯೂ ಅದೇಶಿಸಿದೆ ಮತ್ತು ಮಂಡಳಿಯು ಈ ಉದ್ದಿಮೆಗಳ ವಿರುದ್ಧ ತೆಗೆದುಕೊಂಡ ಕ್ರಮವನ್ನು ಎತ್ತಿಹಿಡಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X