ನಾರಿ ಶಕ್ತಿ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಉಡುಪಿ, ಜು.13: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭ ಕೇಂದ್ರ ಸರಕಾರ ಪ್ರದಾನ ಮಾಡಲಿರುವ ‘ನಾರಿ ಶಕ್ತಿ ಪುರಸ್ಕಾರ’ ಪ್ರಶಸ್ತಿಗಾಗಿ ಅರ್ಹ ವ್ಯಕ್ತಿ ಮತ್ತು ಸಂಸ್ಥೆಗಳಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.
ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ವಿಶೇಷವಾಗಿ ‘ಬೇಟಿ ಬಚಾವೋ, ಬೇಟಿ ಪಡಾವೋ’ ಕ್ಷೇತ್ರದಲ್ಲಿ ಕೆಲಸ ಮಾಡಿರುವ ವ್ಯಕ್ತಿಗಳು, ಜಿಪಂ, ಗ್ರಾಪಂಗಳಿಗೆ ರಾಣಿ ರುದ್ರಮ್ಮ ದೇವಿ ಪ್ರಶಸ್ತಿ, ಮಹಿಳೆಯರಿಗೆ ಉತ್ತಮ ಸೌಕರ್ಯ, ಸೇವೆಯನ್ನು ಒದಗಿಸುವಲ್ಲಿ ಶ್ರಮಿಸಿದ ಅತ್ಯುತ್ತಮ ಸ್ಥಳೀಯ ಸಂಸ್ಥೆಗಳಿಗೆ ‘ಮಾತಾ ಜೀಜಾಬಾಯಿ’ ಪ್ರಶಸ್ತಿ, ಲಿಂಗಾನುಪಾತವನ್ನು ಉತ್ತಮಪಡಿಸಲು ಶ್ರಮಿಸಿದ ವ್ಯಕ್ತಿ ಹಾಗೂ ಸಂಘ ಸಂಸ್ಥೆಗಳಿಗೆ ಕನ್ನಗಿ ದೇವಿ ಪ್ರಶಸ್ತಿ, ಮಹಿಳಾ ಉದ್ಯೋಗ ಕ್ಷೇತ್ರದಲ್ಲಿ ಶ್ರಮಿಸಿದ ವ್ಯಕ್ತಿ ಹಾಗೂ ಖಾಸಗಿ ಸಂಘ ಸಂಸ್ಥೆಗಳಿಗೆ/ಸಾರ್ವಜನಿಕ ಸಂಸ್ಥೆಗಳಿಗೆ ‘ದೇವಿ ಅಹಲ್ಯಾಬಾಯಿ ಹೋಳ್ಕರ್’ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಪ್ರಶಸ್ತಿ ಪ್ರಸ್ತಾವಗಳನ್ನು ಕೇಂದ್ರ ಸರಕಾರದ ಮಾರ್ಗಸೂಚಿಯಲ್ಲಿ ತಿಳಿಸಿರುವಂತೆ ರಾಣಿ ರುದ್ರಮ್ಮ ದೇವಿ ಪ್ರಶಸ್ತಿಯನ್ನು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಮೂಲಕ, ಮಾತಾ ಜೀಜಾಬಾಯಿ ಪ್ರಶಸ್ತಿಯನ್ನು ನಗರಾಭಿವೃದ್ಧಿ ಇಲಾಖೆಯ ಮೂಲಕ ಕನ್ನಗಿದೇವಿ ಪ್ರಶಸ್ತಿಯನ್ನು ಹಾಗೂ ದೇವಿ ಅಹಲ್ಯಾಬಾಯಿ ಹೋಳ್ಕರ್ ಪ್ರಶಸ್ತಿಯನ್ನು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗಳ ಮೂಲಕ ಸೂಕ್ತ ಶಿಫಾರಸಿನೊಂದಿಗೆ ಜಿಲ್ಲಾ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಜು.31ರೊಳಗೆ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಮಾಹಿತಿಗಳಿಗಾಗಿ ಜಿಲ್ಲಾ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ-204, ಮೊದಲನೆ ಮಹಡಿ, ರಜತಾದ್ರಿ, ಬಿ ಬ್ಲಾಕ್ ಮಣಿಪಾಲ, (ದೂ.ಸಂ::0820-2574978) ಇವರನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಕಟನೆ ತಿಳಿಸಿದೆ.