Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೀಜಾಡಿ ಗ್ರಾಪಂ ಅಧ್ಯಕ್ಷರಾಗಿ ಸಾಕು...

ಬೀಜಾಡಿ ಗ್ರಾಪಂ ಅಧ್ಯಕ್ಷರಾಗಿ ಸಾಕು ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ13 July 2016 11:58 PM IST
share
ಬೀಜಾಡಿ ಗ್ರಾಪಂ ಅಧ್ಯಕ್ಷರಾಗಿ ಸಾಕು ಆಯ್ಕೆ

ಕುಂದಾಪುರ, ಜು.13: ಬೀಜಾಡಿ ಗ್ರಾಪಂನ ಅಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸಾಕು ಅವರು ಆಯ್ಕೆಯಾಗಿದ್ದಾರೆ.
ಬೀಜಾಡಿ ಗ್ರಾಪಂನ ಅಧ್ಯಕ್ಷ ಸ್ಥಾನ ಈ ಹಿಂದೆ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿತ್ತು. ಆ ಮೀಸಲಾತಿಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಲು ಆರಿಸಿ ಬಂದವರೇ ಇಲ್ಲದಿದ್ದುದರಿಂದ ಅಧ್ಯಕ್ಷ ಸ್ಥಾನ ಖಾಲಿ ಉಳಿದಿತ್ತು. ಉಪಾಧ್ಯಕ್ಷರಾಗಿ ಅಂದು ಆಯ್ಕೆ ಯಾಗಿದ್ದ ಜಯಂತಿ ಗಾಣಿಗ ಅವರೇ ಪ್ರಭಾರ ಅಧ್ಯಕ್ಷರಾಗಿ ಈವರೆಗೆ ಕಾರ್ಯ ನಿರ್ವಹಿಸಿಕೊಂಡು ಬರುತ್ತಿದ್ದರು.
ಗ್ರಾಪಂನ ಸದಸ್ಯರಾಗಿ ಪರಿಶಿಷ್ಟ ಪಂಗಡದ ಯಾರೂ ಇಲ್ಲದಿದ್ದರೂ, ಆ ಮೀಸಲಾತಿಯ ಸದಸ್ಯ ಸ್ಥಾನಕ್ಕೆ ಪರಿಶಿಷ್ಟ ಜಾತಿಯವರು ಸದಸ್ಯರಾಗಿ ಆಯ್ಕೆಯಾಗಲು ಅವಕಾಶವಿತ್ತು. ಆದರೆ ಅಧ್ಯಕ್ಷ ಸ್ಥಾನಕ್ಕೆ ಅದು ಅನ್ವಯವಾಗುತ್ತಿರಲಿಲ್ಲ. ಇದರಿಂದ ಉಡುಪಿ ತಾಲೂಕಿನ ಕೋಡಿ ಮತ್ತು ಕುಂದಾಪುರ ತಾಲೂಕಿನ ಬೀಜಾಡಿ ಸೇರಿ ಜಿಲ್ಲೆಯ ಒಟ್ಟು ಎರಡು ಗ್ರಾಪಂಗಳಿಗೆ ಅಧ್ಯಕ್ಷರು ಆಯ್ಕೆಯಾಗದೆ ಗೊಂದಲಗಳು ಉಂಟಾಗಿತ್ತು.
 ಈ ವಿಚಾರವನ್ನು ಇತ್ತೀಚೆಗೆ ಪಂಚಾಯತ್‌ರಾಜ್ ಕಾಯ್ದೆ ತಿದ್ದುಪಡಿಯ ಸಂದರ್ಭದಲ್ಲಿ ಗಮನಕ್ಕೆ ತರಲಾದ ಹಿನ್ನೆಲೆಯಲ್ಲಿ, ಪರಿಶಿಷ್ಟ ಪಂಗಡದ ಮೀಸಲಾತಿಗೆ ಪರಿಶಿಷ್ಟ ಜಾತಿಯವರೂ ಅಧ್ಯಕ್ಷರಾಗುವ ಅವಕಾಶ ಕಲ್ಪಿಸಿ ತಿದ್ದುಪಡಿ ಮಾಡಲಾಗಿತ್ತು. ಇದರಿಂದ ಇಂದು ಬೀಜಾಡಿ ಗ್ರಾಪಂಗೆ ಅಧ್ಯಕ್ಷರ ಆಯ್ಕೆ ನಡೆಯುವಂತಾಗಿದೆ.
ಉಡುಪಿ ಜಿಲ್ಲಾಧಿಕಾರಿ ಈ ಸಂಬಂಧ ಜು.4ರಂದು ಅಧಿಸೂಚನೆ ಹೊರಡಿಸಿದ್ದು, ಅದರಂತೆ ಇಂದು ಕುಂದಾಪುರ ತಹಶೀಲ್ದಾರ್ ಚುನಾವಣಾಧಿಕಾರಿಯಾಗಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಿಕೊಟ್ಟರು. ಒಟ್ಟು 16 ಸದಸ್ಯ ಬಲದ ಬೀಜಾಡಿ ಗ್ರಾಪಂನಲ್ಲಿ ಪರಿಶಿಷ್ಟ ಜಾತಿ ಮೀಸಲಾತಿಯಿಂದ ಆಯ್ಕೆಯಾಗಿದ್ದ ಸಾಕು ವೈಕುಂಠ ಮತ್ತು ಸಾಕು ಬೆಳಿಗ್ಗೆ ನಾಮಪತ್ರ ಸಲ್ಲಿಸಿದ್ದರು.


ಅದರಂತೆ ಅಪರಾಹ್ನ 3 ಗಂಟೆಗೆ ಚುನಾವಣೆ ನಡೆದಿದ್ದು, ಇಬ್ಬರೂ ತಲಾ 8 ಮತಗಳನ್ನು ಗಳಿಸಿದರು. ಕೊನೆಗೆ ಚೀಟಿ ಎತ್ತುವ ಮೂಲಕ ಅಧ್ಯಕ್ಷರ ಆಯ್ಕೆ ನಡೆಯಿತು. ಸಾಕು ಅಧ್ಯಕ್ಷರಾಗಿ ಆಯ್ಕೆಯಾದರು. ಪಕ್ಷಗಳ ನೆಲೆಯಲ್ಲಿ ಗ್ರಾಪಂ ಸದಸ್ಯರ ಚುನಾವಣೆ ನಡೆಯದಿದ್ದರೂ, ಆಯ್ಕೆಯಾದ ಸದಸ್ಯರಲ್ಲಿ 7 ಮಂದಿ ಕಾಂಗ್ರೆಸ್‌ನೊಂದಿಗೆ ಹಾಗೂ 7 ಮಂದಿ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದರು. ಇಬ್ಬರು ಪಕ್ಷೇತರರು ಆಯ್ಕೆಯಾಗಿ ದ್ದರು. ಆ ಪೈಕಿ ಒಬ್ಬ ಪಕ್ಷೇತರರಾದ ಸಾಕು ವೈಕುಂಠರಿಗೆ ಬಿಜೆಪಿ ಸದಸ್ಯರು ಬೆಂಬಲಿಸಿದ್ದರಿಂದ ಅವರು ಗೆಲ್ಲುವ ನಿರೀಕ್ಷೆ ಇತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X