ಸದಸ್ಯರ ಮಾತಿಗೆ ವಿಪಕ್ಷಗಳು ಅಡ್ಡಿ: ಪರಮೇಶ್ವರ್ ಆರೋಪ

ಬೆಂಗಳೂರು, ಜು.13: ಸದನದಲ್ಲಿ ಆಡಳಿತ ಪಕ್ಷದ ಸದಸ್ಯರು ಮಾತನಾಡುವುದಕ್ಕೆ ವಿರೋಧ ಪಕ್ಷಗಳು ಅಡ್ಡಿ ಪಡಿಸುತ್ತಿದ್ದಾರೆ. ಇದರಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಲಂಕಷವಾಗಿ ಚರ್ಚೆ ನಡೆಸಲು ಸಾಧ್ಯವಿದೆಯೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರಶ್ನಿಸಿದರು.
ಬುಧವಾರ ವಿಧಾನಪರಿಷತ್ನಲ್ಲಿ ಮಾತನಾಡಿದ ಅವರು, ಯಾವುದೇ ವಿಷಯವನ್ನು ಕೂಲಂಕಷವಾಗಿ ಚರ್ಚಿಸಿದರೆ ಮಾತ್ರವೆ ಸತ್ಯಾಂಶ ಹೊರಕ್ಕೆ ಬರುವುದು. ಆದರೆ, ವಿಪಕ್ಷಗಳು ಸುಗಮ ಚರ್ಚೆಗೆ ಅವಕಾಶವನ್ನೇ ಮಾಡಿಕೊಡುತ್ತಿಲ್ಲ ಎಂದು ಆರೋಪಿಸಿದರು.
ಸದನದಲ್ಲಿ ವಿಪಕ್ಷಗಳು ಚರ್ಚೆಗೆ ಪದೇ ಪದೇ ಅಡ್ಡಿ ಪಡಿಸುತ್ತಿದ್ದಾರೆ. ಇದರಿಂದ ಆಡಳಿತ ಪಕ್ಷದ ಸದಸ್ಯರು ತಮ್ಮ ಅಭಿಪ್ರಾಯವನ್ನು ಹೇಳಲು ಸಾಧ್ಯವಾಗುತ್ತಿಲ್ಲ. ವಿಪಕ್ಷ ಸದಸ್ಯರ ಮಾತನ್ನು ಆಡಳಿತ ಪಕ್ಷದ ಎಲ್ಲ ಸದಸ್ಯರು ತಾಳ್ಮೆಯಿಂದ ಆಲಿಸಿದ್ದಾರೆ. ಅದೇ ಮಾದರಿಯಲ್ಲಿ ವಿಪಕ್ಷಗಳು ತಾಳ್ಮೆಯಿಂದ ಕೇಳಬೇಕು. ಈ ಬಗ್ಗೆ ಸಭಾಪತಿಗಳು ವಿಪಕ್ಷಗಳಿಗೆ ಸೂಚನೆ ನೀಡಬೇಕೆಂದು ಮನವಿ ಮಾಡಿದರು.
Next Story





