Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಿಲಿಕುಳ ಮೃಗಾಲಯಕ್ಕೆ ವರ್ಷಾಂತ್ಯದಲ್ಲಿ...

ಪಿಲಿಕುಳ ಮೃಗಾಲಯಕ್ಕೆ ವರ್ಷಾಂತ್ಯದಲ್ಲಿ ಹೊಸಬರ ಸೇರ್ಪಡೆ!

ವಾರ್ತಾಭಾರತಿವಾರ್ತಾಭಾರತಿ14 July 2016 3:33 PM IST
share
ಪಿಲಿಕುಳ ಮೃಗಾಲಯಕ್ಕೆ ವರ್ಷಾಂತ್ಯದಲ್ಲಿ ಹೊಸಬರ ಸೇರ್ಪಡೆ!

ಮಂಗಳೂರು,ಜು.14: ಪಿಲಿಕುಳದ ಡಾ. ಶಿವರಾಮ ಕಾರಂತ ನಿಸರ್ಗಧಾಮದ ಮೃಗಾಲಯಕ್ಕೆ ಈ ವರ್ಷಾಂತ್ಯಕ್ಕೆ ಮಧ್ಯ ಆಫ್ರಿಕಾದಿಂದ ಹೊಸಬರು ಸೇರ್ಪಡೆಯಾಗಲಿದ್ದಾರೆ. ರಾಜ್ಯದ ಪ್ರಮುಖ ವನ್ಯಜೀವಿ ಮೃಗಾಲಯವಾಗಿ ಗುರುತಿಸಿಕೊಂಡಿರುವ ಪಿಲಿಕುಳದ ಮೃಗಾಲಯಕ್ಕೆ ಮುಂದಿನ ಆರು ತಿಂಗಳೊಳಗೆ ಮಧ್ಯ ಆಫ್ರಿಕಾದಿಂದ ಜಿರಾಫೆ, ಚಿಂಪಾಂಜಿ ಹಾಗೂ ಝೀಬ್ರಾ ಜೋಡಿಗಳ ಆಗಮನವಾಗಲಿದೆ ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ ಇಂದು ತಿಳಿಸಿದ್ದಾರೆ. ಬಹುತೇಕವಾಗಿ ದೇಶದೊಳಗೆ ಮೃಗಾಲಯಗಳಲ್ಲಿ ಪ್ರಾಣಿಗಳನ್ನು ಒಂದು ಮೃಗಾಲಯಿಂದ ಇನ್ನೊಂದು ಮೃಗಾಲಯಕ್ಕೆ ಪರಸ್ಪರ ವಿನಿಮಯ ಮಾಡಿಕೊಳ್ಳಲಾಗುತ್ತದೆ. ಆದರೆ ಪಿಲಿಕುಳಕ್ಕೆ ಮಧ್ಯ ಆಫ್ರಿಕಾದಿಂದ ಈ ಹೊಸಬರನ್ನು ಖರೀದಿಸಲು ಈಗಾಗಲೇ ಪ್ರಾಯೋಜಕರನ್ನು ಸಂಪರ್ಕಿಸಿ ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಪಡೆಯಲಾಗಿದೆ. ಜಿರಾಫೆ ಜೋಡಿ 75 ಲಕ್ಷ ರೂ.ಗಳಿಗೆ, ಚಿಂಪಾಂಜಿ ಹಾಗೂ ಝೀಬ್ರಾಗಳ ಜೋಡಿಯನ್ನು ತಲಾ 50 ಲಕ್ಷ ರೂ.ಗಳಿಗೆ ಖರೀದಿಸಲು ಸಿದ್ಧತೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. ಪಿಲಿಕುಳ ನಿಸರ್ಗಧಾಮವು, ಹುಲಿ, ಚಿರತೆ, ಆನೆ ಸೇರಿದಂತೆ 1000ದಷ್ಟು ವನ್ಯಜೀವಿಗಳನ್ನು ಹೊಂದಿದ್ದು, ಇವುಗಳಲ್ಲಿ 120 ಅಪರೂಪದ, ವಿನಾಶದಂಚಿನಲ್ಲಿರುವ ವನ್ಯಜೀವಿಗಳೂ ಇರುವುದು ವಿಶೇಷತೆ. ಪಿಲಿಕುಳ ಮೃಗಾಲಯದ ಆಕರ್ಷಣೆಯನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮಧ್ಯ ಆಫ್ರಿಕಾಯಿಂದ ಈ ಪ್ರಾಣಿಗಳನ್ನು ಖರೀದಿಸಲು ನಿರ್ಧರಿಸಲಾಗಿದೆ. ಕಾರ್ಪ್ ಬ್ಯಾಂಕ್, ಎಂಆರ್‌ಪಿಎಲ್ ಮೊದಲಾದ ಸಂಸ್ಥೆಗಳು ಈ ಬಗ್ಗೆ ಆಸಕ್ತಿ ತೋರಿಸಿದ್ದು, ಇನ್ನಷ್ಟು ಪ್ರಾಯೋಜಕರನ್ನು ಕಲೆ ಹಾಕಲಾಗುತ್ತಿದೆ ಎಂದು ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕ ಜಯಪ್ರಕಾಶ್ ಭಂಡಾರಿ ಮಾಹಿತಿ ನೀಡಿದರು. ಮಧ್ಯ ಆಫ್ರಿಕಾ ಮತ್ತು ಇಲ್ಲಿನ ವಾತಾವರಣ ಬಹುತೇಕವಾಗಿ ಸಾಮಾನ್ಯವಾಗಿರುವುದರಿಂದ ಅಲ್ಲಿಂದ ಖರೀದಿಸಲಾಗುವ ಪ್ರಾಣಿಗಳನ್ನು ಇಲ್ಲಿ ಸಾಕಲು ಯಾವುದೇ ರೀತಿಯ ತೊಂದರೆ ಆಗದು. ಮಾತ್ರವಲ್ಲದೆ ಮೃಗಾಲಯದಲ್ಲಿ ಸಾಕಷ್ಟು ಸ್ಥಳಾವಕಾಶ ಹಾಗೂ ಮೂಲಭೂತ ಸೌಕರ್ಯದ ವ್ಯವಸ್ಥೆ ಇದೆ. ಆ ಪ್ರಾಣಿಗಳನ್ನು ಮಧ್ಯ ಆಫ್ರಿಕಾದಿಂದ ವಿಮಾನದ ಮೂಲಕ ತರಬೇಕಾಗಿರುವುದರಿಂದ ಹಲವಾರು ರೀತಿಯ ಪ್ರಕ್ರಿಯೆಗಳನ್ನು ನಿರ್ವಹಿಸಲು ಸುಮಾರು ಆರು ತಿಂಗಳ ಕಾಲಾವಕಾಶ ಬೇಕಾಗಿದೆ ಎಂದು ಜಯಪ್ರಕಾಶ್ ಭಂಡಾರಿ ತಿಳಿಸಿದರು. 

ಮೃಗಾಲಯಕ್ಕೆ ವಾರ್ಷಿಕ 7 ಲಕ್ಷ ವೀಕ್ಷಕರ ಭೇಟಿ
ಪಿಲಿಕುಳ ನಿಸರ್ಗಧಾಮದ ಮೃಗಾಲಯಕ್ಕೆ ವಾರ್ಷಿಕ ಸರಾಸರಿ ಸುಮಾರು 7 ಲಕ್ಷದಷ್ಟು ಪ್ರವಾಸಿಗರು, ವೀಕ್ಷಕರು ಭೇಟಿ ನೀಡುತ್ತಾರೆ. ಅದರಲ್ಲೂ ಮಕ್ಕಳಿಗೆ ಬೇಸಿಗೆ ಹಾಗೂ ನವರಾತ್ರಿ ರಜಾ ಅವಧಿಯಲ್ಲಿ ಮೃಗಾಲಯಕ್ಕೆ ಭೇಟಿ ನೀಡುವವರ ಸಂಖ್ಯೆ ಅಧಿಕ ಎನ್ನುತ್ತಾರೆ ಮೃಗಾಲಯದ ಹಿರಿಯ ವಿಜ್ಞಾನಿ ವಿಕ್ರಂ ಲೋಬೋ. ಕಾಳಿಂಗ ಸರ್ಪ ಮೃಗಾಲಯದ ವಿಶೇಷ ಆಕರ್ಷಣೆ!

share
ವಾರ್ತಾಭಾರತಿ
ವಾರ್ತಾಭಾರತಿ
Next Story
X