Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವೀರಾಜಪೇಟೆ: ಶಾಂತಿಯುತ ಸ್ವಯಂ ಪ್ರೇರಣೆಯ...

ವೀರಾಜಪೇಟೆ: ಶಾಂತಿಯುತ ಸ್ವಯಂ ಪ್ರೇರಣೆಯ ಬಂದ್

ವಾರ್ತಾಭಾರತಿವಾರ್ತಾಭಾರತಿ14 July 2016 10:24 PM IST
share
ವೀರಾಜಪೇಟೆ: ಶಾಂತಿಯುತ ಸ್ವಯಂ ಪ್ರೇರಣೆಯ ಬಂದ್

ವೀರಾಜಪೇಟೆ, ಜು.14: ಡಿವೈಎಸ್ಪಿ ಮಾದಪಂಡ ಗಣಪತಿ ಅವರ ಆತ್ಮಹತ್ಯೆ ಪ್ರಕರಣದ ರೂವಾರಿ ಮಾಜಿ ಗೃಹಮಂತ್ರಿ ಕೆ.ಜೆ ಜಾರ್ಜ್ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಮೂವರು ಆರೋಪಿಗಳ ಮೇಲೆ ಎಫ್‌ಐಆರ್ ದಾಖಲಾಗಬೇಕು. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಕರೆ ನೀಡಿರುವ ಕೊಡಗು ಬಂದ್‌ಗೆ ವೀರಾಜಪೇಟೆಯಲ್ಲಿ ಶಾಂತಿಯುತವಾಗಿ ಸಂಪೂರ್ಣ ಸ್ವಯಂಪ್ರೇರಣೆಯ ಬೆಂಬಲ ವ್ಯಕ್ತವಾಯಿತು. ವೀರಾಜಪೇಟೆ ಪಟ್ಟಣದಲ್ಲಿ ಬೆಳಗ್ಗೆ 7 ಗಂಟೆಯಿಂದ ಅಂಗಡಿ ಮುಂಗಟ್ಟು ಮುಚ್ಚಿದ್ದವು. 10ಗಂಟೆ ಸುಮಾರಿಗೆ ಗಡಿಯಾರ ಕಂಬದ ಬಳಿ ಜಮಾಯಿಸಿದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು 30 ನಿಮಿಷಗಳ ಕಾಲ ಹೆದ್ದಾರಿ ರಸ್ತೆ ತಡೆ ನಡೆಸಿ ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆ ಕೂಗಿ ಸಚಿವ ಜಾರ್ಜ್‌ರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು. ನಂತರ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿದರು.

ಸರಕಾರಿ ಕಚೇರಿಗಳಲ್ಲಿ ಸಿಬ್ಬಂದಿ ಕೊರತೆ ಎದ್ದು ಕಾಣುತ್ತಿತ್ತು. ಅರೆ ಸರಕಾರಿ ಕಚೇರಿಗಳು ಬಾಗಿಲು ಹಾಕಿಕೊಂಡು ಕಾರ್ಯ ನಿರ್ವಹಿಸಿದವು. ರಸ್ತೆಗಳಲ್ಲಿ ಕೆಲವೊಂದು ಖಾಸಗಿ ವಾಹನಗಳನ್ನು ಹೊರತುಪಡಿಸಿದರೆ ಯಾವುದೇ ವಾಹನಗಳು ಸಂಚರಿಸಲಿಲ್ಲ. ಖಾಸಗಿ, ಸಾರಿಗೆ ಸಂಸ್ಥೆ ಬಸ್‌ನಿಲ್ದಾಣಗಳು ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿತ್ತು. ಸರಕಾರಿ ಜೂನಿಯರ್ ಕಾಲೇಜಿನಲ್ಲಿ ನಡೆಯಿತ್ತಿರುವ ಸಪ್ಲಿಮೆಂಟರಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಯಾವುದೇ ತೊಂದರೆ ಉಂಟಾಗಲಿಲ್ಲ. ಸಮುಚ್ಚಯ ನ್ಯಾಯಾಲಯ ತೆರೆದಿದ್ದರೂ ಕಕ್ಷಿಗಾರರು ಗೈರು ಹಾಗೂ ವಕೀಲರ ಸಂಖ್ಯೆ ಕೊರತೆಯಿಂದ ನ್ಯಾಯಾಲಯದ ಕಾರ್ಯಕಲಾಪಗಳು ಸ್ಥಗಿತಗೊಂಡಿದ್ದವು. ಸಾರ್ವಜನಿಕ ಆಸ್ಪತ್ರೆಯಲ್ಲಿಯೂ ರೋಗಿಗಳ ಸಂಖ್ಯೆ ವಿರಳವಾಗಿತ್ತು. ವೀರಾಜಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು.

ಪ್ರತಿಭಟನೆಯಲ್ಲಿ ಹಲವಾರು ಸಂಘಟನೆಗಳ ನಾಯಕರು, 300ಕ್ಕೂ ಅಧಿಕ ಕಾರ್ಯಕರ್ತರು ಪಾಲ್ಗೊಂಡಿದ್ದರು. ಪ್ರತಿಭಟನೆಯ ಬಂದೋಬಸ್ತನ್ನು ಡಿವೈಎಸ್ಪಿ ನಾಗಪ್ಪವಹಿಸಿದ್ದರು. ವೃತ್ತ ನಿರೀಕ್ಷಕ ಶಾಂತಮಲ್ಲಪ್ಪ, ನಗರ ಠಾಣಾಧಿಕಾರಿ ಸುಬ್ರಹ್ಮಣ್ಯ, ಈ ಹಿಂದೆ ವೀರಾಜಪೇಟೆಯಲ್ಲಿ ಸೇವೆ ಸಲ್ಲಿಸಿದ್ದ ವೃತ್ತ ನಿರೀಕ್ಷಕ ಪ್ರಸಾದ್, ಸಬ್ ಇನ್‌ಸ್ಪೆೆಕ್ಟರ್ ಬೋಪಣ್ಣ, ಮೋಹನ್ ಅವರನ್ನು ಕರೆಸಲಾಗಿತ್ತು. 5 ಕೆಎಸ್‌ಆರ್‌ಪಿ ತುಕಡಿ, 2 ಡಿಎಆರ್ ತುಕಡಿ, 1 ರ್ಯಾಪಿಡ್ ಆಕ್ಷನ್ ಫೋರ್ಸ್ ಸೇರಿದಂತೆ 250 ಪೋಲಿಸರು ವೀರಾಜಪೇಟೆ ನಗರ ವ್ಯಾಪ್ತಿಯಲ್ಲಿ ಪಾಲ್ಗೊಂಡಿದ್ದರು.

ವೀರಾಜಪೇಟೆಯಲ್ಲಿ ಬಂದೋಬಸ್ತ್‌ಗಾಗಿ ಚಾಮರಾಜನಗರ, ಮಂಡ್ಯ ಹಾಗೂ ಮೈಸೂರು ಕಡೆಗಳಿಂದ ಪೊಲೀಸರನ್ನು ಕರೆಸಲಾಗಿತ್ತು. ಬೆಳಗ್ಗೆ ಕೊಡಗು ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಸಿಂಗ್, ಐ.ಜಿ ಬಿ.ಕೆ.ಸಿಂಗ್, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಕರೆ, ಜಿಲ್ಲೆಯ ಉಪ ಆಯುಕ್ತ ನಂಜುಂಡಸ್ವಾಮಿ ಭೇಟಿ ನೀಡಿ ಪೊಲೀಸ್ ಬಂದೋಬಸ್ತ್‌ನ್ನು ಖುದ್ದು ಪರಿಶೀಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X