Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಪಡಿತರ ಚೀಟಿ ನೀಡಲು ಪಂಚಾಯತ್‌ಗೆ ಅಧಿಕಾರ...

ಪಡಿತರ ಚೀಟಿ ನೀಡಲು ಪಂಚಾಯತ್‌ಗೆ ಅಧಿಕಾರ ಸಿಗಲಿ

-ಕೆ. ಎನ್. ಬಿ., ಮಂಗಳೂರು-ಕೆ. ಎನ್. ಬಿ., ಮಂಗಳೂರು14 July 2016 10:33 PM IST
share

ಮಾನ್ಯರೆ,
ಕರ್ನಾಟಕ ರಾಜ್ಯದಲ್ಲಿ ಲಕ್ಷಗಟ್ಟಲೆ ನಕಲಿ ಪಡಿತರ ಚೀಟಿ ವಿತರಣೆಯಾಗಿದೆ. ಎಪಿಎಲ್‌ಗೆ ಅರ್ಹತೆ ಇರುವವರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ ಎಂಬಿತ್ಯಾದಿ ಮಾಹಿತಿಗಳು ಆಹಾರ ಇಲಾಖೆಯಿಂದ ಹಾಗೂ ಸಚಿವರಿಂದ ಪತ್ರಿಕೆಗಳಲ್ಲಿ ಹೇಳಿಕೆ ರೂಪದಲ್ಲಿ ಲಭ್ಯವಾಗುತ್ತಿದೆ. ಇದರ ಜೊತೆಗೆ ನಕಲಿ ಪಡಿತರ ಚೀಟಿದಾರರನ್ನು ಗುರುತಿಸಿಕೊಟ್ಟರೆ ಇಲಾಖೆಯಿಂದ ನಗದು ಬಹುಮಾನವೂ ಘೋಷಿಸಲ್ಪಟ್ಟಿದೆ. ಆದರೆ ಬಹುಮಾನ ನೀಡಿದ ಮಾಹಿತಿ ಈ ತನಕ ಕಂಡುಬಂದಿಲ್ಲ. ಬರುವುದೂ ಇಲ್ಲ ಬಿಡಿ. ಆದ್ದರಿಂದ ಪಡಿತರ ಚೀಟಿ ನೀಡಲು ಸುಲಭೋಪಾಯ ಕಂಡು ಹಿಡಿಯುವುದೇ ಪರ್ಯಾಯ ದಾರಿ.
ಗ್ರಾಮ ಪಂಚಾಯತ್‌ಗಳಲ್ಲಿ ಈಗಾಗಲೇ ಮನೆಸಂಖ್ಯೆಗಳನ್ನು ನೀಡಿ ಮನೆ ಯಜಮಾನರ ಹೆಸರು ನಮೂದಿಸಿರುವ ರಿಜಿಸ್ಟ್ರಿ ಇರುತ್ತದೆ. ಮನೆ ತೆರಿಗೆ ಪರಿಷ್ಕರಣೆ ಮಾಡುವಾಗ ಆ ಮನೆಯವರ ಆದಾಯ, ಅಂತಸ್ತು ತಿಳಿದಿರುತ್ತದೆ. ಅಂತಹವರಲ್ಲಿ ಆರ್ಥಿಕ ಸ್ಥಿತಿ ಉತ್ತಮವಿರುವವರ ಯಾದಿ ತಯಾರಿಸಿ, ಉಳಿದವರನ್ನು ಪ್ರತ್ಯೇಕವಾಗಿ ಗುರುತಿಸಿ, ವಾರ್ಡುವಾರು ಪಟ್ಟಿಮಾಡಿ, ವಾರ್ಡುಸಭೆಯಲ್ಲಿ ಮಂಡಿಸಿ, ಯಾರಿಗೆ ಬಿಪಿಎಲ್ ಪಡಿತರ ಚೀಟಿ ನೀಡಬೇಕೆಂಬುದನ್ನು ನಿರ್ಧರಿಸಬಹುದು. ಪಂಚಾಯತ್ ಸದಸ್ಯರು ಸೂಚಿಸಿದ ಪ್ರಯೋಜನಾರ್ಥಿಗಳ ಯಾದಿಯನ್ನೇ ತಯಾರಿಸಿ, ಅದರಲ್ಲೂ ಯಾರಿಗೆ ಅರ್ಹತೆ ಇದೆ ಎನ್ನುವುದನ್ನು ತಿಳಿಯಲು, ಅನ್ಯ ಇಲಾಖೆಯವರಿಂದ ಸಮೀಕ್ಷೆ ನಡೆಸಬೇಕು. ಎಲ್ಲಾ ಹಂತಗಳಲ್ಲಿ ಪರಿಶೋಧನೆಗೊಳಪಟ್ಟಾಗ ನಕಲಿ ಪಡಿತರ ಚೀಟಿಗೆ ಅವಕಾಶವಿರುವುದಿಲ್ಲ. ಮನೆಯ ಕರೆಂಟ್ ಬಿಲ್ಲು ರೂ. 350, ಸೈಕಲ್ ಇಲ್ಲದವರು, ವಾಹನ ಇಲ್ಲದವರು ಎಂಬ ಮಾನದಂಡಗಳನ್ನು ಕೈ ಬಿಟ್ಟು ಅರ್ಹರಿಗೆ ಪಡಿತರ ಚೀಟಿ ನೀಡಲು ಗ್ರಾಪಂಗೆ ಅಧಿಕಾರ ನೀಡುವಂತಾಗಬೇಕು. ಇದರಿಂದ ಫಲಾನುಭವಿಗಳು ತಾಲೂಕು ಕಚೆೇರಿಗೆ ಅಲೆದಾಡುವುದನ್ನು ತಪ್ಪಿಸಬಹುದು. ಬಡ ಕೂಲಿ ಕಾರ್ಮಿಕರಿಗೆ ದಿನದ ಕೂಲಿಗೂ ಹೋಗದೆ ಕಚೆೇರಿಯಿಂದ ಕಚೆೇರಿಗೆ ಅಲೆಯುವುದು ತಪ್ಪುತ್ತದೆ. ದೇಶದ ಉದ್ಧಾರ ಗ್ರಾಮದ ಉದ್ಧಾರದಿಂದಲೇ ಎಂಬ ಕಟುಸತ್ಯವನ್ನು ತಿಳಿಯೋಣ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಹಕರಿಸಬೇಕಾಗಿದೆ.

share
-ಕೆ. ಎನ್. ಬಿ., ಮಂಗಳೂರು
-ಕೆ. ಎನ್. ಬಿ., ಮಂಗಳೂರು
Next Story
X