Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಡೇವಿಸ್‌ಕಪ್: ಭಾರತಕ್ಕೆ ಮುನ್ನಡೆ

ಡೇವಿಸ್‌ಕಪ್: ಭಾರತಕ್ಕೆ ಮುನ್ನಡೆ

ರಾಮ್‌ಕುಮಾರ್, ಸಾಕೇತ್‌ಗೆ ಗೆಲುವು

ವಾರ್ತಾಭಾರತಿವಾರ್ತಾಭಾರತಿ15 July 2016 11:51 PM IST
share
ಡೇವಿಸ್‌ಕಪ್: ಭಾರತಕ್ಕೆ ಮುನ್ನಡೆ

ಚಂಡೀಗಡ, ಜು.15: ಭಾರತದ ಯುವ ಟೆನಿಸ್ ಆಟಗಾರ ರಾಮ್‌ಕುಮಾರ್ ರಾಮನಾಥನ್ ಡೇವಿಸ್‌ಕಪ್‌ನಲ್ಲಿ ಆಡಿದ ತನ್ನ ಚೊಚ್ಚಲ ಪಂದ್ಯದಲ್ಲಿ ಗೆಲುವಿನ ಸವಿ ಉಂಡಿದ್ದಾರೆ. ಸಾಕೇತ್ ಮೈನೇನಿ ಭಾರತದ ಮುನ್ನಡೆಯನ್ನು ಹೆಚ್ಚಿಸಿದ್ದಾರೆ.

ಶುಕ್ರವಾರ ಇಲ್ಲಿ ಆರಂಭವಾದ ಏಷ್ಯಾ/ಓಶಿಯಾನಿಯಾ ಗ್ರೂಪ್-1 ಡೇವಿಸ್‌ಕಪ್ ಪಂದ್ಯದಲ್ಲಿ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಗೆಲುವು ಸಾಧಿಸಿರುವ ರಾಮನಾಥನ್ ಹಾಗೂ ಮೈನೇನಿ ದಕ್ಷಿಣ ಕೊರಿಯಾದ ವಿರುದ್ಧ ಭಾರತಕ್ಕೆ 2-0 ಮುನ್ನಡೆ ಒದಗಿಸಿಕೊಟ್ಟಿದ್ದಾರೆ. ಮೊದಲ ಪಂದ್ಯದಲ್ಲಿ ರಾಮನಾಥನ್ ಕೊರಿಯಾದ ಸಿಯೊಂಗ್ ಚಾನ್ ಹಾಂಗ್‌ರನ್ನು ಮಣಿಸುವುದರೊಂದಿಗೆ ಭಾರತಕ್ಕೆ 1-0 ಮುನ್ನಡೆ ಒದಗಿಸಿಕೊಟ್ಟರು.

ಎರಡು ಗಂಟೆ, 36 ನಿಮಿಷಗಳ ಕಾಲ ನಡೆದ ಹೋರಾಟದಲ್ಲಿ 21ರ ಹರೆಯದ ರಾಮ್‌ಕುಮಾರ್, ಕೊರಿಯಾದ ಆಟಗಾರನಿಗೆ ಪ್ರತಿರೋಧ ಒಡ್ಡಿದರು. ಹಾಂಗ್ ಗಾಯದ ಸಮಸ್ಯೆಯಿಂದ ಪಂದ್ಯದಿಂದ ಹಿಂದೆ ಸರಿದ ಕಾರಣ ರಾಮ್‌ಕುಮಾರ್‌ಗೆ ಜಯ ಒಲಿಯಿತು. ದಿಢೀರನೆ ಕಾಣಿಸಿಕೊಂಡ ಗಾಯದಿಂದಾಗಿ ಹಾಂಗ್ ಪಂದ್ಯದಿಂದ ಹಿಂದೆ ಸರಿದಾಗ ರಾಮ್‌ಕುಮಾರ್ 6-3, 2-6, 6-3, 6-5(15-15) ಸೆಟ್‌ಗಳಿಂದ ಮುನ್ನಡೆಯಲ್ಲಿದ್ದರು.

 ಡೇವಿಸ್‌ಕಪ್‌ನ ಎರಡನೆ ಸಿಂಗಲ್ಸ್ ಪಂದ್ಯದಲ್ಲಿ ಸಾಕೇತ್ ಮೈನೇನಿ ಕೊರಿಯಾದ ಅನುಭವಿ ಆಟಗಾರ ಯಾಂಗ್-ಕಿಯೂ ಲಿಮ್‌ರನ್ನು 6-1, 3-6, 6-4, 3-6, 5-2 ಸೆಟ್‌ಗಳ ಅಂತರದಿಂದ ಮಣಿಸಿ ಭಾರತಕ್ಕೆ ಡೇವಿಸ್‌ಕಪ್‌ನ ಮೊದಲದಿನವೇ 2-0 ಮುನ್ನಡೆ ಒದಗಿಸಿಕೊಟ್ಟಿದ್ದಾರೆ.

3 ಗಂಟೆ, 9 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ಇದೇ ಮೊದಲ ಬಾರಿ ಐದು ಸೆಟ್‌ಗಳ ಅಂತರದಿಂದ ಜಯ ಸಾಧಿಸಿರುವ 28ರ ಹರೆಯದ ಮೈನೇನಿ ಗೆಲುವಿನ ದಡ ಸೇರಿದ ತಕ್ಷಣ ಜೆರ್ಸಿಯನ್ನು ಕಳಚಿ, ಗಾಳಿಗೆ ಪಂಚ್ ನೀಡಿ ಸಂಭ್ರಮಪಟ್ಟರು. ಮೈನೇನಿ ಸಹ ಆಟಗಾರರು ಅವರನ್ನು ಭುಜದ ಮೇಲೆ ಕುಳ್ಳಿರಿಸಿ ಸಂಭ್ರಮಕ್ಕೆ ಸಾಥ್ ನೀಡಿದರು.

ಕಳೆದ ಕೆಲವು ದಿನಗಳಿಂದ ನಗರದಲ್ಲಿ ಸುರಿದಿರುವ ಮಳೆ ಹುಲ್ಲುಹಾಸಿನಲ್ಲಿ ನಡೆಯುತ್ತಿರುವ ಪಂದ್ಯದ ಮೇಲೆ ಪರಿಣಾಮ ಬೀರಿದೆ. ಸೆಂಟರ್‌ಕೋರ್ಟ್ ಒಣಗಿದ್ದರೂ ಚೆಂಡು ಹೆಚ್ಚು ಪುಟಿದೇಳುತ್ತಿರಲಿಲ್ಲ. ಇದು ಪಂದ್ಯದ ಗುಣಮಟ್ಟವನ್ನು ಕುಗ್ಗಿಸಿದೆ. ಸೂರ್ಯರಶ್ಮಿ ಕಾಣಿಸದಿದ್ದರೂ ವಿಪರೀತ ಸೆಖೆಯ ವಾತಾವರಣ ಆಟಗಾರರ ಫಿಟ್‌ನೆಸ್‌ನ್ನು ಪರೀಕ್ಷೆಗೆ ಒಡ್ಡಿದೆ. ಕೊರಿಯಾದ ಆಟಗಾರರು ಹುಲ್ಲುಹಾಸಿನ ಅಂಗಳದಲ್ಲಿ ಹೊಂದಿಕೊಂಡು ಉತ್ತಮ ಹೋರಾಟ ನೀಡಿದರು.

ಭಾರತದ ಡಬಲ್ಸ್ ಜೋಡಿ ರೋಹನ್ ಬೋಪಣ್ಣ ಹಾಗೂ ಲಿಯಾಂಡರ್ ಪೇಸ್ ಶನಿವಾರ ನಡೆಯಲಿರುವ ತಮ್ಮ ಮೊದಲ ಪಂದ್ಯದಲ್ಲಿ ಹಾಂಗ್ ಚುಂಗ್ ಹಾಗೂ ಯುನ್‌ಸಿಯೊಂಗ್ ಚುಂಗ್‌ರನ್ನು ಎದುರಿಸಲಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X