Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಿಷ್ಟಾಚಾರ ಉಲ್ಲಂಘನೆ: ಕೆರೆಬೈಲು...

ಶಿಷ್ಟಾಚಾರ ಉಲ್ಲಂಘನೆ: ಕೆರೆಬೈಲು ಅಂಗನವಾಡಿ ಉದ್ಘಾಟನೆ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ15 July 2016 11:59 PM IST
share
  • ಶಿಷ್ಟಾಚಾರ ಉಲ್ಲಂಘನೆ: ಕೆರೆಬೈಲು ಅಂಗನವಾಡಿ ಉದ್ಘಾಟನೆ ಮುಂದೂಡಿಕೆ
  • ಶಿಷ್ಟಾಚಾರ ಉಲ್ಲಂಘನೆ: ಕೆರೆಬೈಲು ಅಂಗನವಾಡಿ ಉದ್ಘಾಟನೆ ಮುಂದೂಡಿಕೆ

ಉಳ್ಳಾಲ, ಜು.15: ಉಳ್ಳಾಲ ಕೆರೆಬೈಲಿನ ಶಿಥಿಲಾವಸ್ಥೆಯಲ್ಲಿದ್ದ ಅಂಗನವಾಡಿ ಕೇಂದ್ರ ಕಟ್ಟಡವನ್ನು 7 ಲಕ್ಷ ರೂ. ವೆಚ್ಚದಲ್ಲಿ ಪುನರ್ ನಿರ್ಮಿಸಲಾಗಿದ್ದು, ಶುಕ್ರವಾರ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಆಮಂತ್ರಣ ಪತ್ರಿಕೆಯಲ್ಲಿ ಕ್ಷೇತ್ರದ ಶಾಸಕ ಯು.ಟಿ ಖಾದರ್ ಹೆಸರನ್ನು ಕಡೆಗಣಿಸಿದ್ದು, ಶಿಷ್ಟಾಚಾರ ಉಲ್ಲಂಘನೆಯಾದ ಕಾರಣ ನಗರಸಭೆ ಅಧ್ಯಕ್ಷರ ಆದೇಶದ ಮೇರೆಗೆ ಉದ್ಘಾಟನಾ ಕಾರ್ಯಕ್ರಮವನ್ನು ಶನಿವಾರಕ್ಕೆ ಮುಂದೂಡಲಾಗಿದೆ.

ಉಳ್ಳಾಲ ನಗರಸಭೆ ವ್ಯಾಪ್ತಿಯ ಕೆರೆಬೈಲ್ ಅಂಗನವಾಡಿ ಕಟ್ಟಡವು ಸಂಪೂರ್ಣವಾಗಿ ಶಿಥಿಲಗೊಂಡಿತ್ತು. ಈ ಹಿನ್ನೆಲೆಯಲ್ಲಿ ನಗರಸಭೆಯು ನೂತನ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಎಸ್‌ಎಫ್‌ಸಿ ಯೋಜನೆಯಿಂದ 4 ಲಕ್ಷ ರೂ., ನಗರಸಭೆಯಿಂದ 1 ಲಕ್ಷ ರೂ. ಹಾಗೂ ಶೌಚಾಲಯ ನಿರ್ಮಾಣಕ್ಕೆ ಹದಿನಾಲ್ಕನೆ ಹಣಕಾಸು ಯೋಜನೆಯಡಿ 2 ಲಕ್ಷ ರೂ. ಅನುದಾನ ನೀಡಿತ್ತು. ಕಟ್ಟಡವು ನಿರ್ಮಾಣಗೊಂಡು ಬಿಜೆಪಿಯ ನಗರಸಭಾ ಸದಸ್ಯೆ ಮತ್ತು ನಗರಾಡಳಿತದ ನೇತೃತ್ವದಲ್ಲಿ ಶುಕ್ರವಾರ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯಲ್ಲಿ ಸ್ಥಳೀಯ ಶಾಸಕ ಸಚಿವ ಯು.ಟಿ ಖಾದರ್‌ರ ಹೆಸರು ನಮೂದಿಸದೆ ಕಾರ್ಯಕ್ರಮಕ್ಕೂ ಅವರನ್ನು ಕರೆದಿರಲಿಲ್ಲ. ಇದನ್ನರಿತ ನಗರಸಭಾ ಅಧ್ಯಕ್ಷ ಹುಸೈನ್ ಕುಂಞಿಮೋನು ಗುರುವಾರ ರಾತ್ರಿಯೇ ಕಾರ್ಯಕ್ರಮ ನಡೆಸದಂತೆ ಸಂಬಂಧಪಟ್ಟವರಿಗೆ ತಿಳಿಸಿದ್ದರು.

ಶುಕ್ರವಾರ ಬೆಳಗ್ಗೆ ಸ್ಥಳೀಯರು ನೂತನ ಅಂಗನವಾಡಿ ಕೇಂದ್ರವನ್ನು ಸಿಂಗರಿಸಿ ಉದ್ಘಾಟನೆಗೆ ಸಜ್ಜಾಗಿದ್ದರು. ಈ ಸಂದರ್ಭ ಉದ್ಘಾಟನಾ ಕಾರ್ಯಕ್ರಮ ಮುಂದೂಡಲ್ಪಟ್ಟ ವಿಚಾರ ತಿಳಿದುಬಂತು. ಶಿಷ್ಟಾಚಾರದ ಕಾರಣ ಕಾರ್ಯಕ್ರಮ ಮುಂದೂಡಲ್ಪಟ್ಟಿದೆ ಎನ್ನುವುದನ್ನು ಅರಿಯದ ಕೆರೆಬೈಲು ನಾಗರಿಕರು ನಗರಸಭೆಗೆ ತೆರಳಿ ಅಂಗನವಾಡಿ ಕಟ್ಟಡ ಉದ್ಘಾಟಿಸುವಂತೆ ಅಧ್ಯಕ್ಷರು ಮತ್ತು ನಗರ ಪೌರಾಯುಕ್ತರಲ್ಲಿ ಆಕ್ರೋಶವ್ಯಕ್ತಪಡಿಸಿದ್ದು, ನಗರಸಭೆ ಆಡಳಿತವು ಸಚಿವ ಖಾದರ್ ಅವರ ಸಮಕ್ಷಮದಲ್ಲೇ ಶನಿವಾರ ಬೆಳಿಗ್ಗೆ ಅಂಗನವಾಡಿ ಕೇಂದ್ರವನ್ನು ಉದ್ಘಾಟಿ ಸುವುದಾಗಿ ಭರವಸೆ ನೀಡಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X