Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟರ್ಕಿ ಕ್ಷಿಪ್ರ ಕ್ರಾಂತಿ ಯತ್ನ :...

ಟರ್ಕಿ ಕ್ಷಿಪ್ರ ಕ್ರಾಂತಿ ಯತ್ನ : ಪ್ರಶ್ನೆಗಳು ಮತ್ತು ಉತ್ತರಗಳು

ವಾರ್ತಾಭಾರತಿವಾರ್ತಾಭಾರತಿ16 July 2016 11:39 AM IST
share
ಟರ್ಕಿ ಕ್ಷಿಪ್ರ ಕ್ರಾಂತಿ ಯತ್ನ : ಪ್ರಶ್ನೆಗಳು ಮತ್ತು ಉತ್ತರಗಳು

ನವದೆಹಲಿ, ಜು.16 : ಟರ್ಕಿ ದೇಶದ ಸೇನೆಯ ಒಂದು ವಿಭಾಗ ಶುಕ್ರವಾರದಂದು ಕ್ಷಿಪ್ರ ಕ್ರಾಂತಿಯ ಮೂಲಕ 2003 ರಿಂದ ಅಧಿಕಾರದಲ್ಲಿರುವ ಅಧ್ಯಕ್ಷ ಟಯ್ಯಿಪ್ ಎರ್ಡೋಗನ್ ಅವರನ್ನು ಕಿತ್ತೊಗೆಯಲು ಯತ್ನಿಸಿದೆ. ಈ ಸೇನಾ ದಂಗೆ ಯಶಸ್ವಿಯಾಗಿದ್ದೇ ಆದಲ್ಲಿ ಈಗಾಗಲೇ  ಆಡಳಿತ ವೈಫಲ್ಯ, ಆಂತರಿಕ ಕಲಹ ಹಾಗೂ ಇಸ್ಲಾಮಿಕ್ ಸ್ಟೇಟ್ ಬೆದರಿಕೆಯಿಂದ ಕಂಗೆಟ್ಟಿರುವ  ಪಶ್ಚಿಮ ಏಷ್ಯಾದಲ್ಲಿ ಪ್ರಮುಖ ಬದಲಾವಣೆಗಳಾಗುವ ಸಂಭವವಿದೆ

ಟರ್ಕಿಯಲ್ಲಿ ನಡೆದ ಈ ಕ್ಷಿಪ್ರ ಕ್ರಾಂತಿಯ ಬಗ್ಗೆ ಕೆಲವು ಪ್ರಶ್ನೆಗಳಿಗೆ ಉತ್ತರ ನೀಡುವ ಪ್ರಯತ್ನ ಇಲ್ಲಿ ಮಾಡಲಾಗಿದೆ.

ಈ ಕ್ಷಿಪ್ರ ಕ್ರಾಂತಿಯ ಹಿಂದಿರುವವರು ಯಾರು ?
ಟರ್ಕಿಯ ಸಂಪೂರ್ಣ ಸೇನಾ ಪಡೆ ಈ ದಂಗೆಯ ಹಿಂದೆ ಇರುವಂತೆ ಕಾಣುತ್ತಿಲ್ಲ. ಈ ಕ್ಷಿಪ್ರ ಕ್ರಾಂತಿ ಯತ್ನ ಕೆಲವೇ ಕೆಲವು ಗಂಟೆಗಳ ತರುವಾಯ ಎಡವುತ್ತಿರುವುದನ್ನು ಗಮನಿಸಿದರೆ, ಸೇನೆಯ ಇನ್ನೂ ಹಲವು ವಿಭಾಗಗಳು ಎರ್ಡೋಗನ್ ಅವರಿಗೆ ಬೆನ್ನು ತಿರುಗಿಸಲು ಇನ್ನೂ ಮನಸ್ಸು ಮಾಡಿಲ್ಲವೆಂಬುದು ಸ್ಪಷ್ಟ.
 
ಈ ಕ್ಷಿಪ್ರ ಕ್ರಾಂತಿ ಏತಕ್ಕಾಗಿ ?
ಎರ್ಡೋಗನ್ ಅವರು ಕಳೆದ ಒಂದು ದಶಕಕ್ಕಿಂತಲೂ ಹೆಚ್ಚು ಕಾಲದಿಂದ ಅಧಿಕಾರದಲ್ಲಿದ್ದಾರಲ್ಲದೆ ಟರ್ಕಿಯಲ್ಲಿ ಸಾಕಷ್ಟು ಸುಧಾರಣೆಗಳನ್ನೂ ತಂದಿದ್ದಾರೆ. ಆದರೆ ಅಲ್ಲಿನ ಸೇನಾ ಪಡೆಯು ದೇಶದ ಪಿತಾಮಹನೆಂದು ಕರೆಯಲ್ಪಡುವ ಮುಸ್ತಾಫ ಕೇಮಲ್ ಅಟಟುರ್ಕ್  ಅವರ ಕೇಮಾಲಿಸಮ್ ಸಿದ್ಧಾಂತವನ್ನು ಎತ್ತಿ ಹಿಡಿಯುತ್ತಿದೆ. ಅತ್ತ ಎರ್ಡೋಗನ್ ಅವರನ್ನು ಇಸ್ಲಾಮಿಸ್ಟ್ ಹಾಗೂ ಸಂಪ್ರದಾಯವಾದಿಯೆಂದು ಬಣ್ಣಿಸಲಾಗುತ್ತದೆ.

ಈ ಕ್ಷಿಪ್ರ ಕ್ರಾಂತಿ ಯಶಸ್ವಿಯಾಗುವುದೇ ?
 
ಈ ಕ್ಷಣದಲ್ಲಿ ಈ ಕ್ಷಿಪ್ರ ಕ್ರಾಂತಿ ತನ್ನ ವೇಗವನ್ನು ಕಳೆದುಕೊಂಡಿದೆಯೆಂಬಂತೆ ಕಾಣುತ್ತಿದೆ. ಎರ್ಡೋಗನ್ ಕೂಡ ಸಾರ್ವಜನಿಕರ ಹಾಗೂ ಸೇನಾ ಪಡೆಗಳ ಒಂದು ವಿಭಾಗದ  ಬೆಂಬಲ ಹೊಂದಿದ್ದಾರೆ. ಮೇಲಾಗಿ ಸಾವಿರಾರು ಜನರು ಪ್ರಜಾಪ್ರಭುತ್ವವಾದಿ ಎರ್ಡೋಗನ್ ಸರಕಾರದ ಪರವಾಗಿ ಬೀದಿಗಿಳಿದಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X