ಕಾಸರಗೋಡು: ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ಕಾಸರಗೋಡು, ಜು.16: ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನೀರ್ಚಾಲು ಮಾನ್ಯದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿಯನ್ನು ಮೀಪುಗುರಿಯ ಶಿಹಾಬ್ (18) ಎಂದು ಗುರುತಿಸಲಾಗಿದೆ.
ಮೂವರು ಸಹಪಾಠಿಗಳ ಜೊತೆಗೆ ಶಿಹಾಬ್ ಮಾನ್ಯದ ಶ೦ಶುಲ್ ನಗರದಲ್ಲಿರುವ ಪಂಚಾಯತ್ ಕೆರೆಗೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.
ಜೊತೆಗಿದ್ದ ಮಕ್ಕಳ ಬೊಬ್ಬೆ ಕೇಳಿ ಧಾವಿಸಿ ಬಂದ ಸ್ಥಳೀಯರು ಕೆರೆಯಲ್ಲಿ ಮುಳುಗಿದ್ದ ಶಿಹಾಬ್ ನನ್ನು ಮೇಲಕ್ಕೆತ್ತಿದರೂ ಜೀವ ಉಳಿಸಲಾಗಲಿಲ್ಲ.
ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Next Story





