Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಿಲಾರು: ಎರಡು ಮನೆಗಳಿಂದ ನಗ-ನಗದು ದೋಚಿದ...

ಪಿಲಾರು: ಎರಡು ಮನೆಗಳಿಂದ ನಗ-ನಗದು ದೋಚಿದ ಕಳ್ಳರು

ವಾರ್ತಾಭಾರತಿವಾರ್ತಾಭಾರತಿ16 July 2016 6:28 PM IST
share
  • ಪಿಲಾರು: ಎರಡು ಮನೆಗಳಿಂದ ನಗ-ನಗದು ದೋಚಿದ ಕಳ್ಳರು
  • ಪಿಲಾರು: ಎರಡು ಮನೆಗಳಿಂದ ನಗ-ನಗದು ದೋಚಿದ ಕಳ್ಳರು

ಉಳ್ಳಾಲ, ಜು.16: ಉಳ್ಳಾಲ ಠಾಣಾ ವ್ಯಾಪ್ತಿಯ ಪಿಲಾರು, ದಾರಂದ ಬಾಗಿಲು ಎಂಬಲ್ಲಿಯ ಎರಡು ಮನೆಗಳ ಬೀಗ ಮುರಿದು ಒಳ ನುಗ್ಗಿದ ಕಳ್ಳರು ನಗ, ನಗದು, ಎಟಿಎಂ ಕಾರ್ಡ್‌ಗಳನ್ನು ದೋಚಿ ಪರಾರಿಯಾಗಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಪಿಲಾರು ದಾರಂದ ಬಾಗಿಲಿನ ಎರಡು ಮನೆಗಳಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಕಳ್ಳರು ಎರಡು ಮನೆಗಳ ಬಾಗಿಲು ಮುರಿದು ಒಳನುಗ್ಗಿ ನಗ, ನಗದು ದೋಚಿ ಪರಾರಿಯಾಗಿದ್ದಾರೆ.

ದಾರಂದ ಬಾಗಿಲಿನ ಶೇಖ್ ಬಾಬ್‌ಜಾನ್ ಎಂಬವರ ಮನೆಯ ಮುಖ್ಯದ್ವಾರದ ಬೀಗ ಒಡೆದು ಒಳನುಗ್ಗಿದ ಕಳ್ಳರು ಮೂರು ಕೋಣೆಗಳ ಕಬಾಟಿನಲ್ಲಿದ್ದ 4ಗ್ರಾಂನ ಬ್ರೇಸ್‌ಲೆಟ್, 2ಗ್ರಾಂನ ಕಿವಿ ಓಲೆ,31ಗ್ರಾಂನ ಸರ ಸೇರಿ ಒಟ್ಟು ಒಂದು ಲಕ್ಷಕ್ಕೂ ಅಧಿಕ ಬೆಳೆಬಾಳುವ 37 ಗ್ರಾಂ ಚಿನ್ನ ಮತ್ತು ಒಂದು ಎಟಿಎಂ ಕಾರ್ಡನ್ನು ದೋಚಿ ಪರಾರಿಯಾಗಿದ್ದಾರೆ. ಬಾಬ್‌ಜಾನ್ ಅವರು ವಿದೇಶದಲ್ಲಿ ನೆಲೆಸಿದ್ದು ಮನೆಯಲ್ಲಿ ಅವರ ಪತ್ನಿ ಖುರ್ಷಿದಾ ಮತ್ತು ಮಗ ಶೇಖ್ ಶಾಹಿರ್ ವಾಸವಿದ್ದು ಶುಕ್ರವಾರ ಸಂಜೆ ಖುರ್ಷಿದಾ ಅವರು ಮಗನೊಂದಿಗೆ ಬಜ್ಪೆಯಲ್ಲಿರುವ ಅಳಿಯನ ಮನೆಗೆ ತೆರಳಿದ್ದರು. ಶನಿವಾರ ಬೆಳಿಗ್ಗೆ ಮಗ ಶಾಹಿರ್ ಮನೆಗೆ ಬಂದಾಗ ಬಾಗಿಲನ್ನು ಒಡೆದು ಕಳ್ಳತನ ನಡೆದ ವಿಷಯ ಬೆಳಕಿಗೆ ಬಂದಿದೆ.

ಬಾಬುಜಾನ್ ಅವರ ಮನೆಯಿಂದ ಕೂಗಳತೆಯ ಅಂತರದಲ್ಲಿರುವ ರಮಣಿ ಶೆಟ್ಟಿ ಎಂಬವರ ಹಳೆಯ ಹಂಚಿನ ಮನೆಯ ಬಾಗಿಲನ್ನೂ ಒಡೆದ ಕಳ್ಳರು ಮನೆಯೊಳಗಿದ್ದ ಕಬಾಟಿನ ಬಾಗಿಲು ಮುರಿದು ರಮಣಿಯವರ ಮೊಮ್ಮಗುವಿನ ಕಾಲಿನ ಬೆಳ್ಳಿ ಗೆಜ್ಜೆ, ಸೊಂಟದ ಬೆಳ್ಳಿ ಸರ ಮತ್ತು ಚಿನ್ನದ ಉಂಗುರವನ್ನು ದೋಚಿದ್ದಾರೆ. ರಮಣಿಯವರು ಶುಕ್ರವಾರ ರಾತ್ರಿ ಕಾರ್ಯಕ್ರಮವೊಂದನ್ನು ಮುಗಿಸಿ ಹತ್ತಿರದ ಸಂಬಂಧಿ ಮನೆಯಲ್ಲಿ ತಂಗಿದ್ದ ವೇಳೆ ಕಳ್ಳರು ಮನೆಗೆ ಕನ್ನ ಹಾಕಿದ್ದಾರೆ.

ಸ್ಥಳಕ್ಕೆ ಉಳ್ಳಾಲ ಪೊಲೀಸ್ ಠಾಣಾ ಅಪರಾಧ ವಿಬಾಗದ ಎಸೈ ರಾಜೇಂದ್ರ ಭೇಟಿ ನೀಡಿ ಪರಿಶೀಲಿಸಿದ್ದು, ಬೆರಳಚ್ಚು ತಜ್ಞರು, ಶ್ವಾನದಳದಿಂದ ತಪಾಸಣೆ ನಡೆಸಲಾಗಿದೆ.

ಕಳೆದ ವಾರವಷ್ಟೇ ಕೋಟೆಕಾರು ಸ್ಟೆಲ್ಲಾ ಮೆರೀಸ್ ಮತ್ತು ಕೊಲ್ಯದ ಜಾಯ್‌ಲ್ಯಾಂಡ್ ಶಾಲೆಗಳಲ್ಲಿ ಕಳ್ಳತನ ನಡೆದಿದ್ದು,ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X