Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯಾರದೋ ಸಮಾಧಾನಕ್ಕಾಗಿ ಸಚಿವರನ್ನು...

ಯಾರದೋ ಸಮಾಧಾನಕ್ಕಾಗಿ ಸಚಿವರನ್ನು ಬಲಿಕೊಡಲು ಸಾಧ್ಯವಿಲ್ಲ: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ16 July 2016 7:47 PM IST
share
ಯಾರದೋ ಸಮಾಧಾನಕ್ಕಾಗಿ ಸಚಿವರನ್ನು ಬಲಿಕೊಡಲು ಸಾಧ್ಯವಿಲ್ಲ: ದಿನೇಶ್ ಗುಂಡೂರಾವ್

ಮಂಗಳೂರು, ಜು.16: ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ವಿಧಾನಸಭಾ ಅಧಿವೇಶನ ನಡೆಯಲು ಬಿಡದೆ ಬ್ಲಾಕ್‌ಮೇಲ್ ಮಾಡುತ್ತಿರುವ ಬಿಜೆಪಿಯು ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಒಂದೇ ಒಂದು ಗಂಭೀರ ಸಾಕ್ಷವನ್ನು ದಾಖಲೆ ಸಮೇತ ನೀಡಿದರೆ ಸರಕಾರ ಕ್ರಮ ಕೈಗೊಳ್ಳುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೆ.ಜೆ. ಜಾರ್ಜ್ ಯಾವುದೇ ತಪ್ಪು ಮಾಡಿಲ್ಲ ಎನ್ನುವುದಕ್ಕೆ ನಮ್ಮಲ್ಲಿ ಅನೇಕ ಸಾಕ್ಷಗಳಿದೆ. ಆದರೆ ಅವರು ತಪ್ಪು ಮಾಡಿದ್ದಾರೆ ಎಂದು ಆಪಾದಿಸುವ ವಿಪಕ್ಷಗಳು ಅವರ ವಿರುದ್ಧ ಒಂದೇ ಒಂದು ಗಂಭೀರ ಸಾಕ್ಷವನ್ನು ದಾಖಲೆ ಸಮೇತ ತೋರಿಸುತ್ತಿಲ್ಲ. ಯಾರದೋ ಸಮಾಧಾನಕ್ಕಾಗಿ ಕೆ.ಜೆ. ಜಾರ್ಜ್‌ರನ್ನು ಸಚಿವ ಸಂಪುಟದಿಂದ ತೆಗೆಯಲು ಆಗುವುದಿಲ್ಲ ಎಂದು ಹೇಳಿದರು.

ನಮಗೆ ಸರಕಾರ ತೆಗೆದುಕೊಳ್ಳುವ ತೀರ್ಮಾನದ ಬಗ್ಗೆ ವಿಶ್ವಾಸವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಕೆ.ಜೆ.ಜಾರ್ಜ್ ಅವರ ಬಗ್ಗೆಯೂ ವಿಶ್ವಾಸವಿದೆ. ಯಾರೋ ಹೇಳಿದಕ್ಕೆ ಸಚಿವರನ್ನು ಬಲಿಕೊಡಲು ಆಗುವುದಿಲ್ಲ ಎಂದು ಹೇಳಿದರು.

ಬಿಜೆಪಿಯನ್ನು ನಂಬಬೇಡಿ: ಗಣಪತಿ ಪತ್ನಿ ಪಾವನಾಗೆ ಸಲಹೆ

ಎಂ.ಕೆ.ಗಣಪತಿ ಪತ್ನಿ ಪಾವನಾ ಅವರು ಬಿಜೆಪಿಯನ್ನು ನಂಬಬೇಡಿ. ಪಾವನಾ ಅವರ ಭಾವನೆಯನ್ನು ಇಟ್ಟುಕೊಂಡು ರಾಜಕಾರಣ ಮಾಡುತ್ತಿರುವ ಬಿಜೆಪಿ ಅವರನ್ನು ದುರುಪಯೋಗ ಮಾಡುತ್ತದೆ. ಬಿಜೆಪಿಯವರಿಗೆ ಕೇವಲ ರಾಜಕೀಯ ಲಾಭ ಬೇಕು. ಡಿ.ಕೆ.ರವಿ ಪ್ರಕರಣದಲ್ಲಿಯೂ ಅವರು ಇದೇ ರೀತಿ ವರ್ತಿಸಿದ್ದರು. ಸಿಬಿಐಗೆ ಪ್ರಕರಣವನ್ನು ನೀಡಿ ಒಂದು ವರ್ಷ ಕಳೆದರೂ ಅದರ ವರದಿ ಇನ್ನು ಬಂದಿಲ್ಲ. ಡಿ.ಕೆ. ರವಿ ಪ್ರಕರಣದ ವರದಿಯನ್ನು ನೀಡುವಂತೆ ಬಿಜೆಪಿ ಒತ್ತಾಯವನ್ನೂ ಮಾಡಿಲ್ಲ. ಡಿ.ಕೆ. ರವಿ ಪ್ರಕರಣದಲ್ಲಿ ಅವರ ತಾಯಿಯನ್ನು ಭಾವನಾತ್ಮಕವಾಗಿ ದುರುಪಯೋಗ ಮಾಡಿಕೊಂಡರು. ಪ್ರಧಾನಿಯವರಿಗೂ ಈ ಬಗ್ಗೆ ಒತ್ತಾಯವನ್ನು ಹಾಕಿಲ್ಲ. ಇದೇ ರೀತಿ ಗಣಪತಿ ಪ್ರಕರಣದಲ್ಲಿ ಪಾವನಾ ಅವರ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಹೇಳಿದರು.

ನಾವು ಯಾವುದನ್ನೂ ಮುಚ್ಚಿಡುತ್ತಿಲ್ಲ. ಸತ್ಯಾಂಶ ಹೊರಬರಬೇಕು. ನಮ್ಮ ಸರಕಾರ ಇದ್ದಾಗ ಗಣಪತಿ ಅವರಿಗೆ ಯಾವುದೇ ರೀತಿಯ ಕಿರುಕುಳ ಆಗಿಲ್ಲ. ಆಗಿದ್ದರೆ ಅದರ ದಾಖಲೆಯನ್ನು ಕೊಡಿ ಎಂದು ವಿಪಕ್ಷವನ್ನು ಆಗ್ರಹಿಸಿದರು.

ವಿಧಾನಸಭೆಯಲ್ಲಿ ಪ್ರಕರಣದ ಬಗ್ಗೆ ಸರಕಾರ ಉತ್ತರ ಕೊಟ್ಟಿದೆ. ಆದರೆ ವಿಧಾನಸಭಾ ಅಧಿವೇಶನ ನಡೆಯಲು ಬಿಡದೆ ವಿರೋಧ ಪಕ್ಷಗಳು ಬ್ಲಾಕ್‌ಮೇಲ್ ಮಾಡುತ್ತಿವೆ ಎಂದು ಆಪಾದಿಸಿದರು.

ವಿರೋಧ ಪಕ್ಷಗಳು ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ಭಾವನಾತ್ಮಕ ವಿಚಾರಗಳನ್ನು ಇಟ್ಟುಕೊಂಡು ಜನರ ಮನಸ್ಸನ್ನು ಹಾಳು ಮಾಡುತ್ತಿದೆ. ನಮ್ಮ ಪಕ್ಷ ಮತ್ತು ಸರಕಾರದ ವಿರುದ್ಧ ಅಪಪ್ರಚಾರವನ್ನು ನಡೆಸುತ್ತಿವೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಚಿವ ಬಿ.ರಮಾನಾಥ ರೈ, ವಿಧಾನಪರಿಷತ್ ಸಚೇತಕ ಐವನ್ ಡಿಸೋಜ, ಶಾಸಕರಾದ ಜೆ.ಆರ್. ಲೋಬೊ, ಮೊಯ್ದಿನ್ ಬಾವ, ಮೂಡ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X