Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಬುರ್ಹಾನ್ ವಾನಿ ಎನ್ ಕೌಂಟರ್ ಬಗ್ಗೆ ಸಂಶಯ...

ಬುರ್ಹಾನ್ ವಾನಿ ಎನ್ ಕೌಂಟರ್ ಬಗ್ಗೆ ಸಂಶಯ ವ್ಯಕ್ತಪಡಿಸಿದ ಪ್ರಶಾಂತ್ ಭೂಷಣ್

ವಾರ್ತಾಭಾರತಿವಾರ್ತಾಭಾರತಿ17 July 2016 1:47 PM IST
share
ಬುರ್ಹಾನ್ ವಾನಿ ಎನ್ ಕೌಂಟರ್ ಬಗ್ಗೆ ಸಂಶಯ ವ್ಯಕ್ತಪಡಿಸಿದ ಪ್ರಶಾಂತ್ ಭೂಷಣ್

ಕಾಶ್ಮೀರದ ಭದ್ರತಾಪಡೆಗಳು ಹಿಜ್ಬುಲ್ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ನಡೆಸಿರುವ ಬಗ್ಗೆ ಮಾಜಿ ಆಪ್ ನಾಯಕ ಮತ್ತು ಹಿರಿಯ ಸುಪ್ರೀಂಕೋರ್ಟ್ ವಕೀಲ ಪ್ರಶಾಂತ್ ಭೂಷಣ್ ಪ್ರಶ್ನೆಗಳನ್ನು ಎತ್ತಿದ್ದಾರೆ. ಬಹಳಷ್ಟು ಮಂದಿಗೆ ಈ ಹತ್ಯೆಯ ವಾಸ್ತವದ ಬಗ್ಗೆ ಸಂಶಯವಿದೆ ಎಂದೂ ಅವರು ಹೇಳಿದ್ದಾರೆ. ಅದು ನಕಲಿ ಎನ್‌ಕೌಂಟರ್ ಆಗಿರಬಹುದೇ ಎನ್ನುವ ಬಗ್ಗೆ ಸ್ಪಷ್ಟತೆ ಇಲ್ಲ. ಬಹಳಷ್ಟು ಮಂದಿಗೆ ಈ ಬಗ್ಗೆ ಸಂಶಯವಿದೆ ಎಂದು ಅವರು ಹೇಳಿದ್ದಾರೆ.

ವಾನಿ ಏಕೆ ಭಯೋತ್ಪಾದಕನಾದ ಎನ್ನುವುದಕ್ಕೆ ಆತನ ಹಿನ್ನೆಲೆ ಪರೀಕ್ಷಿಸಬೇಕು ಎಂದಿದ್ದಾರೆ ಭೂಷಣ್. "ಒಂದು ಕಾಲದಲ್ಲಿ ಆತ ತನ್ನ ಹಿರಿಯ ಸಹೋದರನ ಜೊತೆಗೆ ಬೈಕಿನಲ್ಲಿ ತಿರುಗುತ್ತಿದ್ದ. ಆಗ ಭದ್ರತಾ ಪಡೆಗಳು ಅವರನ್ನು ತಡೆದು ಯಾವುದೇ ಕಾರಣವಿಲ್ಲದ ಆತನ ಸಹೋದರನನ್ನು ಹೊಡೆದಿದ್ದಾರೆ ಎನ್ನುವ ಸುದ್ದಿಗಳಿವೆ. ತನ್ನ ಸಹೋದರನನ್ನು ಭದ್ರತಾಪಡೆಗಳು ಹೀನಾಯವಾಗಿ ಹೊಡೆಯುವುದನ್ನು ನೋಡಿದ 15 ವರ್ಷದ ಬಾಲಕನ ಮನದಲ್ಲಿ ಎಂತಹ ಭಾವನೆಗಳು ಬಂದಿರಬಹುದು" ಎಂದು ಭೂಷಣ್ ಪ್ರಶ್ನಿಸಿದ್ದಾರೆ. ಕಾಶ್ಮೀರಿಗಳು ಆಝಾದಿ ಘೋಷಣೆ ಕೂಗುವುದು ಸೇನಾ ನಿಯಮ ಅವರ ಮೇಲೆ ಒತ್ತಡಪೂರ್ವಕವಾಗಿ ಹೇರಲಾಗಿದೆ ಎನ್ನುವುದನ್ನು ತೋರಿಸುತ್ತದೆ. ಅವರನ್ನು ಅನವಶ್ಯಕ ಹೊಡೆಯಲಾಗುತ್ತದೆ. ಅವರ ಮಹಿಳೆಯರ ಮೇಲೆ ಅತ್ಯಾಚಾರವೆಸಗಲಾಗುತ್ತದೆ ಮತ್ತು ಅಂತಹ ಹಲವು ಘಟನೆಗಳಿವೆ. ಯಾವುದೇ ದೇಶವು ತನ್ನ ಪ್ರಜೆಗಳ ಮೇಲೆ ಇಷ್ಟು ದೀರ್ಘ ಕಾಲ ಸೇನಾಡಳಿತ ಹೇರಬಾರದು. ಅದು ಮುಂದುವರಿದಲ್ಲಿ ಕೇವಲ ಭಯೋತ್ಪಾದನೆಗೆ ದಾರಿ ಮಾಡಿಕೊಡುತ್ತದೆ. ಹಲವು ದೇಶಗಳು ಇದೇ ಕಾರಣದಿಂದ ಭಯೋತ್ಪಾದನೆ ಎದುರಿಸುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.

ದಾದ್ರಿ ಪ್ರಕರಣದಲ್ಲಿ ಮೃತ ಮುಹಮ್ಮದ್ ಅಖ್ಲಾಕ್ ಕುಟುಂಬದ ಮೇಲೆ ಎಫ್‌ಐಆರ್ ದಾಖಲಿಸಿರುವುದು ತಪ್ಪು ಎಂದು ಹೇಳಿದ್ದಾರೆ. ಅಖ್ಲಾಕ್ ಮರಣಕ್ಕೆ ಕಾರಣರಾದವರನ್ನು ಪತ್ತೆ ಹಚ್ಚಲು ತನಿಖೆ ನಡೆಯಬೇಕು. ಮಾಂಸ ಗೋವಿನದ್ದೇ ಅಥವಾ ಕುರಿಯದ್ದೇ ಎನ್ನುವುದು ಮುಖ್ಯವಲ್ಲ. ಏಕೆಂದರೆ ಗೋಮಾಂಸ ತಿನ್ನುವುದು ಉತ್ತರ ಪ್ರದೇಶದಲ್ಲಿ ಅಪರಾಧವಲ್ಲ. ವ್ಯಕ್ತಿ ಗೋವನ್ನು ಕೊಂದಾಗಲಷ್ಟೇ ಅಪರಾಧವಾಗುತ್ತದೆ ಎಂದು ಭೂಷಣ್ ಹೇಳಿದ್ದಾರೆ.

ಸ್ವರಾಜ್ ಅಭಿಯಾನದ ಸಂಯೋಜಕ ಮತ್ತು ಆಪ್ ನಾಯಕ ಯೋಗೇಂದ್ರ ಯಾದವ್ ಕೂಡ ಆರೆಸ್ಸೆಸ್ ದೇಶದಲ್ಲಿ ಕೋಮುವಾದಿ ಹಿಂಸೆಗೆ ಪ್ರಚೋದಿಸುತ್ತಿರುವುದಾಗಿ ಹೇಳಿದ್ದಾರೆ. ಉತ್ತರಪ್ರದೇಶದ 2017ರ ಚುನಾವಣೆಗೆ ಮುನ್ನ ಬಿಜೆಪಿ 2014ರ ಮುಝಫ್ಫರ್ ನಗರದಂತಹ ಕೋಮುವಾದಿ ಗಲಭೆಗೆ ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು. ವಿವಾದಾತ್ಮಕ ಸಾಧ್ವಿ ಪ್ರಾಚಿ ಮತ್ತು ಯೋಗಿ ಆದಿತ್ಯನಾಥ್‌ರಿಗೆ ಪ್ರಧಾನಿ ಮೋದಿ ಹಿಂದಿನಿಂದ ಬೆಂಬಲಿಸುತ್ತಿದ್ದಾರೆ ಎಂದೂ ಅವರು ಆರೋಪಿಸಿದರು. ಸುಬ್ರಮಣಿಯನ್ ಸ್ವಾಮಿ ತಮ್ಮದೇ ಪಕ್ಷದ ಅರುಣ್ ಜೇಟ್ಲಿ ವಿರುದ್ಧ ಮಾತನಾಡಿದರೆ ಆತನನ್ನು ಟೀಕಿಸಿದರು. ಆದರೆ ತಮ್ಮ ಪಕ್ಷದ ಸಹೋದ್ಯೋಗಿಗಳ ಸಾರ್ವಜನಿಕ ಹೇಳಿಕೆಗಳ ಬಗ್ಗೆ ಏನೂ ಮಾತನಾಡಿಲ್ಲ ಎಂದು ಯಾದವ್ ಹೇಳಿದರು.

ಕೃಪೆ: www.outlookindia.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X