Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಧಾರ್ಮಿಕ ಅಜ್ಞಾನದಿಂದ ಸಾಮರಸ್ಯಕ್ಕೆ...

ಧಾರ್ಮಿಕ ಅಜ್ಞಾನದಿಂದ ಸಾಮರಸ್ಯಕ್ಕೆ ಧಕ್ಕೆ: ಜೀವನ್‌ದಾಸ್

ವಾರ್ತಾಭಾರತಿವಾರ್ತಾಭಾರತಿ17 July 2016 8:39 PM IST
share
ಧಾರ್ಮಿಕ ಅಜ್ಞಾನದಿಂದ ಸಾಮರಸ್ಯಕ್ಕೆ ಧಕ್ಕೆ: ಜೀವನ್‌ದಾಸ್

ಮಂಗಳೂರು, ಜು. 17: ಧಾರ್ಮಿಕ ಜ್ಞಾನದ ಕೊರತೆಯಿಂದಾಗಿ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯುಂಟಾಗುತ್ತಿದೆ ಎಂದು ಬಜ್ಪೆ ಸಂತ ಜೋಸೆಫ್‌ರ ಪವಿಪೂರ್ವ ಕಾಲೇಜಿನ ನಿವೃತ್ತ ಶಿಕ್ಷಕ ಲಯನ್ ಜೀವನ್‌ದಾಸ್ ಶೆಟ್ಟಿ ಎಂ.ಜೆ.ಎಫ್. ಅಭಿಪ್ರಾಯಪಟ್ಟಿದ್ದಾರೆ.

ಅವರು ಜಪ್ಪುವರ್ತುಲದ ಸದ್ಭಾವನಾ ವೇದಿಕೆಯ ವತಿಯಿಂದ ಮೋರ್ಗನ್ಸ್‌ಗೇಟ್‌ನ ಕಾಸ್ಸಿಯಾ ಚರ್ಚ್ ಸಭಾಂಗಣದಲ್ಲಿ ಇಂದು ಸಂಜೆ ನಡೆದ ಈದ್ ಸೌಹಾರ್ದ ಕೂಟದಲ್ಲಿ ಮಾತನಾಡಿದರು.

ಎಲ್ಲರಿಗೂ ಒಂದೇ ಧರ್ಮ. ಆದರೆ, ಆಚಾರ ಮತ್ತು ಆರಾಧನೆಗಳು ಭಿನ್ನವಾಗಿರುತ್ತವೆ. ಮಾನವ ಮಾಡುವ ಎಲ್ಲ ಆರಾಧನೆಗಳು ಒಂದೇ ಭಗವಂತನಿಗೆ ಸಲ್ಲುತ್ತದೆ. ಆದ್ದರಿಂದ ಧರ್ಮದ ಬಗ್ಗೆ ಕೆಲವರಿಗೆ ಇರುವ ತಪ್ಪು ಗ್ರಹಿಕೆಯಿಂದಾಗಿ ಸಮಾಜದಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಗುತ್ತಿದೆ. ಮನುಷ್ಯನಲ್ಲಿ ತಪ್ಪುಗಳು ಸಂಭವಿಸುತ್ತವೆ. ಆದರೆ, ಅದಕ್ಕೆ ಪ್ರಾಯಶ್ಚಿತ್ತಪಟ್ಟು ಆ ತಪ್ಪು ಪುನರಾವರ್ತನೆಯಾಗದಂತೆ ನೋಡಿಕೊಳ್ಳಬೇಕಾದುದು ಆತನ ಧರ್ಮವಾಗಿದೆ ಎಂದು ಜೀವನ್‌ದಾಸ್ ಶೆಟ್ಟಿ ತಿಳಿಸಿದರು.

ಕುವೈಟ್‌ನ ಇಗ್ನೋ ಸೆಂಟರ್‌ನ ಉಪನ್ಯಾಸಕ ಬಿ.ಎಸ್.ಶರ್ಫುದ್ದೀನ್ ಮಾತನಾಡಿ, ಭಾರತವು ವಿವಿಧತೆಯಲ್ಲಿ ಏಕತೆಯನ್ನು ಕಂಡ ದೇಶವಾಗಿದೆ. ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತರ ಸಹಿತ ವಿವಿಧ ಧರ್ಮೀಯರಿಂದ ಈ ದೇಶಕ್ಕೆ ಅಪಾರ ಕೊಡುಗೆ ಇದೆ. ಧರ್ಮದ ಹೆಸರಿನಲ್ಲಿ ಕೆಲವರು ವಿದ್ವೇಷವನ್ನು ಹರಡಿಸಿ ಅಶಾಂತಿಯ ವಾತಾವರಣವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿರುವುದು ಖಂಡನೀಯ. ಈ ಹಿನ್ನೆಲೆಯಲ್ಲಿ ಸದ್ಭಾವನಾ ವೇದಿಕೆಯವರು ಸಮಾಜದ ಶಾಂತಿ, ಸಹಬಾಳ್ವೆಗೆ ಪ್ರಯತ್ನಿಸುವುದು ಶ್ಲಾಘನೀಯ ಎಂದರು.

ವೇದಿಕೆಯ ಸದಸ್ಯ ದೀಪಕ್ ಡಿಸೋಜ ಮಾತನಾಡಿ, ಮಾನವ ಯಾವ ಧರ್ಮೀಯನಾದರೂ ಆತ ಇತರ ಧರ್ಮವನ್ನು ಗೌರವಿಸುವಂತಾಗಬೇಕು. ಅನ್ಯಾಯ, ಅನಾಚಾರಗಳನ್ನು ಖಂಡಿಸುವ ಮನೋಭಾವ ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು. ಕೋಮು ದ್ವೇಷಕಾರಿ ಭಾಷಣದ ಮೂಲಕ ಸಾಮಾಜಿಕ ನೆಮ್ಮದಿಯನ್ನು ಹಾಳು ಮಾಡುವ ವ್ಯಕ್ತಿಯ ವಿರುದ್ಧ ಎಲ್ಲ ಧರ್ಮೀಯರೂ ವಿರೋಧಿಸುವಂತಾಗಬೇಕು ಎಂದರು.

ವೇದಿಕೆಯ ಅಧ್ಯಕ್ಷ ಎಂ.ಎ.ಸುರೇಶ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಬಿ.ಎ.ಮುಹಮ್ಮದ್ ಅಲಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X