Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶರಾವತಿ ನದಿಗೆ ತೂಗು ಸೇತುವೆ

ಶರಾವತಿ ನದಿಗೆ ತೂಗು ಸೇತುವೆ

ಶಾಶ್ವತ ಪರಿಹಾರದ ಸಂಭ್ರಮದಲ್ಲಿ ಜನತೆ

ವಾರ್ತಾಭಾರತಿವಾರ್ತಾಭಾರತಿ17 July 2016 10:58 PM IST
share
ಶರಾವತಿ ನದಿಗೆ ತೂಗು ಸೇತುವೆ

ಕಾರವಾರ, ಜು.17: ಕಳೆದ ಹಲವು ವರ್ಷಗಳಿಂದ ದೋಣಿಯನ್ನೇ ಅವಲಂಬಿಸಿ ನದಿದಾಟುತ್ತಿದ್ದ ಸುಮಾರು ಏಳು ಗ್ರಾಮದ ಜನರಿಗೆ ಶರಾವತಿ ತೂಗು ಸೇತುವೆ ಶಾಶ್ವತ ಪರಿಹಾರ ಕಲ್ಪಿಸಿದೆ. ಜನರ ಅಗತ್ಯತೆ ಬಗೆಹರಿಸಿಕೊಳ್ಳಲು ಆರೋಗ್ಯ ಸಮಸ್ಯೆ ಪರಿಹಾರಕ್ಕೆ, ಶಾಲಾ ಕಾಲೇಜುಗಳಿಗೆ ತೆರಳಬೇಕಾದರೆ ಮಳೆ-ಗಾಳಿ ಎನ್ನದೆ ದೋಣಿಗಳ ಮೂಲಕ ಸೂಕ್ತ ರಕ್ಷಣೆ ಇಲ್ಲದೆ ಸಾಗುತ್ತಿದ್ದರು. ಈಗ ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ಹೊನ್ನಾವರದ ಕುದ್ರಗಿ ಹಾಗೂ ಉಪ್ರೋಣಿ ಗ್ರಾಪಂಗಳಿಗೆ ಸಂಪರ್ಕ ಕಲ್ಪಿಸಲು ಶರಾವತಿ ನದಿಗೆ ನಿರ್ಮಾಣ ಮಾಡಿದ್ದ ತೂಗು ಸೇತುವೆಯನ್ನು ಸಚಿವ ಆರ್.ವಿ. ದೇಶಪಾಂಡೆ ಲೋಕಾರ್ಪಣೆಗೊಳಿಸಿದರು. ಇದು ಇಲ್ಲಿನ ಜನರಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿದೆ.

 ಸುಮಾರು ನಾಲ್ಕು ಗ್ರಾಪಂಗಳ 20 ಸಾವಿರ ಜನರಿಗೆ ಅನುಕೂಲವಾಗುವ ಜೊತೆಗೆ ಸೇತುವೆಯು ಪ್ರವಾಸೋದ್ಯಮಕ್ಕೂ ಹೆಚ್ಚಿನ ಸಹಕಾರಿಯಾಗಲಿದೆ. ಮಂಗಳೂರಿನ ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ನಿರ್ಲಕ್ಷಿಸಲ್ಪಟ್ಟ ಶರಾವತಿ ನದಿಯ ತೂಗುಸೇತುವೆ ಮುಂದಿನ ದಿನದಲ್ಲಿ ಇಲ್ಲಿನ ಜನ ಜೀವ ಭಯವಿಲ್ಲದೆ ಸಂಚರಿಸಲು ಸುಲಲಿತವಾದ ಸಂಪರ್ಕ ಕಲ್ಪಿಸಿರುವುದು ಈ ಭಾಗ ಅಭಿವೃದ್ಧಿಗೆ ಸಹಕಾರಿಯಾಗಲಿದೆ.

ಕಳೆದ ಹಲವಾರು ದಶಕಗಳಿಂದ ಮಾರುಕಟ್ಟೆಗಳಿಗೆ ತೆರಳುವಾಗ, ಆರೋಗ್ಯ ಚಿಕಿತ್ಸೆ ಪಡೆಯಲು ಹೊನ್ನಾವರಕ್ಕೆ ತೆರಳಬೇಕಾಗಿತ್ತು. ಈ ಸಂದರ್ಭ ಶರಾವತಿ ನದಿಯನ್ನು ದೋಣಿಯ ಮೂಲಕ ದಾಟುವುದು ಜನರಿಗೆ ಅನಿವಾರ್ಯವಾಗಿದ್ದರಿಂದ ಜೀವವನ್ನು ಅಂಗೈಯಲ್ಲಿಟ್ಟು ಕೊಂಡು ಸಾಗಬೇಕಾದ ಸ್ಥಿತಿ ಇತ್ತು. ಮಳೆಗಾಲದಲ್ಲಿ ನದಿ ತುಂಬಿ ಹರಿಯುವಾಗ, ಪ್ರವಾಹ ಬಂದ ವೇಳೆಯಲ್ಲಿ ದೋಣಿ ಮೂಲಕ ಸಾಗುವ ಸ್ಥಿತಿಯೂ ಇರಲಿಲ್ಲ. ನದಿ ದಾಟುವ ವೇಳೆ ಕೆಲವು ಅನಾಹುತಗಳಾಗಿ ಪ್ರಾಣಹಾನಿ ಸಂಭವಿಸಲು ಕಾರಣವಾಗಿತ್ತು.

ಗ್ರಾಮಸ್ಥರ ಮೊಗದಲ್ಲಿ ಹರ್ಷ :

ಕುದರಗಿ ಗ್ರಾಪಂ ಸುತ್ತ ಮುತ್ತಲಿನ ಹಳ್ಳಿಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಕೇವಲ 10ನೆ ತರಗತಿವರೆಗೆ ಮಾತ್ರ ಅವಕಾಶವಿತ್ತು. ನಂತರ ವಿದ್ಯಾಭ್ಯಾಸ ಮಾಡಬೇಕೆಂದರೆ ದೋಣಿಯಲ್ಲಿ ಸಾಗುವ ದುಸ್ಥಿತಿ ಇತ್ತು. ಸಂಸಿ, ಕುದ್ರಿಗಿ ಭಾಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಒಂದೇ ಇದ್ದರಿಂದ ಹೆಚ್ಚಿನ ಚಿಕಿತ್ಸೆ ಪಡೆಯಬೇಕು ಎಂದರೆ ಸುಮಾರು 26 ಕಿ.ಮೀ. ದೂರದ ಆಸ್ಪತ್ರೆಗೆ ತೆರಳಲು ನದಿ ದಾಟಬೇಕಿತ್ತು. ಆದರೆ ಇದೀಗ ವಿದ್ಯಾರ್ಥಿಗಳು ಸೇರಿದಂತೆ ಜನಸಾಮಾನ್ಯರಿಗೆ ಅನುಕೂಲವಾಗಿದ್ದು ಜನರಲ್ಲಿ ಕೊಂಚ ಸಮಾಧಾನ ತಂದಿದೆ.

ನಾವು ದಿನನಿತ್ಯದ ವ್ಯವಹಾರಗಳನ್ನು ನಡೆಸಬೇಕಾದರೆ ಶರಾವತಿ ನದಿ ದಾಟುವಾಗ ಅಂಗೈಯಲ್ಲಿ ಜೀವ ಹಿಡಿದು ಸಾಗುವ ಪರಿಸ್ಥಿತಿ ಇತ್ತು. ಕೆಲವೊಮ್ಮೆ ಸೂಕ್ತ ಸಮಯದಲ್ಲಿ ದೋಣಿಗಳು ಸಿಗುತ್ತಿರಲಿಲ್ಲ. ಹಲವಾರು ವರ್ಷಗಳಿಂದ ನಾವು ಕಂಡ ಕನಸು ಸರಕಾರ ಈಡೇರಿಸಿದೆ. ತೂಗು ಸೇತುವೆ ನಿರ್ಮಾಣ ನಮಗೆಲ್ಲರಿಗೂ ಖುಷಿ ತಂದಿದೆ.

                             -ರಮೇಶ ನಾಯ್ಕ, ಸ್ಥಳೀಯ

 ಕಳೆದ 15 ವರ್ಷಗಳ ಹಿಂದೆ ಈ ಪ್ರದೇಶಕ್ಕೆ ಬೇಟಿ ನೀಡಿದಾಗ ಇಲ್ಲಿನ ಗ್ರಾಮಸ್ಥರು ದೋಣಿ ಮೂಲಕ ದಾಟುವುದನ್ನು ನೋಡಿ ಆತಂಕವಾಗಿತ್ತು. ಇವರಿಗೆ ಯಾವುದಾದರೊಂದು ಶಾಶ್ವತ ವ್ಯವಸ್ಥೆ ಕಲ್ಪಿಸಲು ಪ್ರಯತ್ನಿಸುವ ಪಣ ತೊಟ್ಟಿದ್ದೆ. ಅದು ಈಗ ನೇರವೆರಿದೆ. ಕೇವಲ ಏಳು ತಿಂಗಳಿನಲ್ಲಿ ತೂಗು ಸೇತುವೆ ನಿರ್ಮಾಣವಾಗಿದ್ದು, ಸೇತುವೆ ರಕ್ಷಣೆ ಜೊತೆ ಸಂಪೂರ್ಣ ಲಾಭಪಡೆದುಕೊಳ್ಳಬೇಕು.

                                           

                            -ನಿವೇದಿತ್ ಆಳ್ವ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X