Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾಯ್ದೆಗಳಿಂದ ವೌಢ್ಯ ಬದಲಾವಣೆ ಅಸಾಧ್ಯ:...

ಕಾಯ್ದೆಗಳಿಂದ ವೌಢ್ಯ ಬದಲಾವಣೆ ಅಸಾಧ್ಯ: ಜಮಾದಾರ್

ವಾರ್ತಾಭಾರತಿವಾರ್ತಾಭಾರತಿ18 July 2016 12:05 AM IST
share

ಬೆಂಗಳೂರು, ಜು.17:ಕಾಯ್ದೆಗಳಿಂದಲೇ ಬದಲಾವಣೆ ತರುತ್ತೇವೆ ಎನ್ನುವುದು ಕನಸಿನ ಮಾತು. ಮೂಢನಂಬಿಕೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿದರೆ ಮಾತ್ರ ಬದಲಾವಣೆ ಸಾಧ್ಯ ಎಂದು ನಿವೃತ್ತ ಐಎಎಸ್ ಅಧಿಕಾರಿ ಎಸ್.ಎಂ. ಜಮಾದಾರ್ ಹೇಳಿದ್ದಾರೆ.

ರವಿವಾರ ನಗರದ ಕರ್ನಾಟಕ ಸಾಹಿತ್ಯ ಪರಿಷತ್ತು ವಿಜಯನಗರದ ಪಂಪ ಸಭಾಂಗಣದಲ್ಲಿ ಆಯೋಜಿಸಿದ್ದ ಮೂಢನಂಬಿಕೆ ನಿಷೇಧ ಮಸೂದೆಯ ಸ್ವರೂಪ ಚಿಂತನ ಗೋಷ್ಠಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮೌಢ್ಯ ಪ್ರತಿಬಂಧಕ ಮಸೂದೆಗೆ ಇನ್ನೂ ಅನೇಕ ಅಂಶಗಳನ್ನು ಸೇರಿಸಬೇಕಿದೆ. ಪಾದಪೂಜೆ ನಿಷೇಧಕ್ಕೆ ಲಿಂಗಾ ಯತ ಮಠಗಳು, ಮಡೆಸ್ನಾನ ಹಾಗೂ ಎಡೆಸ್ನಾನ ನಿಷೇಧಕ್ಕೆ ಮಧ್ವ ಮಠಗಳು ವಿರೋಧ ವ್ಯಕ್ತಪಡಿಸುತ್ತಿವೆ. ಹೀಗಾಗಿ ಕೆಲವು ಅಂಶಗಳನ್ನು ಮಸೂದೆಗೆ ಸೇರಿಸಲು ಸರಕಾರ ಹಿಂದೇಟು ಹಾಕುತ್ತಿದೆ ಎಂದರು.

ರಾಹುಕಾಲ, ಗುಳಿಕಕಾಲ, ಯಮಗಂಡಕಾಲ ನೋಡಿ ಸರಕಾರಿ ಕಟ್ಟಡಗಳ ಶಂಕು ಸ್ಥಾಪನೆ, ಉದ್ಘಾಟನೆ ಮಾಡಲಾಗುತ್ತಿದೆ. ವಾಸ್ತು ಸರಿ ಇಲ್ಲವೆಂದು ಮುಖ್ಯಮಂತ್ರಿ ನಿವಾಸವನ್ನು ಈವರೆಗೆ 11 ಬಾರಿ ರಿಪೇರಿ ಮಾಡಲಾಗಿದೆ. ವಾಸ್ತು, ಭವಿಷ್ಯವನ್ನು ನಂಬುವ ರಾಜಕಾರಣಿಗಳು ಮೌಢ್ಯ ಪ್ರತಿಬಂಧಕ ಕಾಯ್ದೆ ಜಾರಿಗೊಳಿಸುವರೇ ಎನ್ನುವ ಅನುಮಾನ ಕಾಡುತ್ತದೆ ಎಂದು ಹೇಳಿದರು. ಎಲ್ಲ ನಂಬಿಕೆಗಳನ್ನು ಮೂಢನಂಬಿಕೆಗಳು ಎನ್ನಲು ಸಾಧ್ಯವಿಲ್ಲ. ಕೆಲವು ವಿಷಯಗಳಲ್ಲಿ ಇನ್ನೂ ವೈಜ್ಞಾನಿಕ ಅಧ್ಯಯನ ನಡೆದಿಲ್ಲ. ಯೋಗ ಬರೀ ಬಂಡಲ್ ಎಂದೇ ತಿಳಿದಿದ್ದರು. ಆದರೆ, ಯೋಗದಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದು ಎಂನ್ನುವುದು ಸಾಬೀತಾಗಿದೆ. ಹೀಗಾಗಿ ಕೆಲವು ನಂಬಿಕೆ, ಆಚರಣೆಗಳಲ್ಲಿ ಅಡಗಿರುವ ಸತ್ಯವನ್ನು ಪತ್ತೆ ಮಾಡಬೇಕು ಎಂದರು.

ಸಾಹಿತಿ ಜಿ. ರಾಮಕಷ್ಣ ಮಾತನಾಡಿ, ಹಿಂದೂ ಧರ್ಮವನ್ನು ಗುರಿಯಾಗಿಸಿ ಮೌಢ್ಯ ಪ್ರತಿಬಂಧಕ ಕಾಯ್ದೆಯನ್ನು ಜಾರಿಗೊಳಿಸಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಯಾವುದೇ ಒಂದು ಧರ್ಮದ ವಿರುದ್ಧ ರೂಪಿಸಿರುವ ಮಸೂದೆ ಇದಲ್ಲ. ರಾಷ್ಟ್ರೀಯ ಕಾನೂನು ಶಾಲೆ ರೂಪಿಸಿರುವ ಕರಡು ಮಸೂದೆಯ ಪ್ರಸ್ತಾವನೆಯಲ್ಲಿ, ಹಿಂಸೆ ಪ್ರತಿಪಾದಿಸುವ, ಒಬ್ಬರ ಆಚರಣೆಯಿಂದ ಇನ್ನೊಬ್ಬರಿಗೆ ದೈಹಿಕ ಅಥವಾ ಮಾನಸಿಕವಾಗಿ ನೋವಾಗುವ ಹಾಗೂ ಮಾನವನ ಘನತೆಗೆ ಚ್ಯುತಿ ಬರುವ ಆಚರಣೆಗಳನ್ನು ನಿಷೇಧಿಸಬೇಕು ಎಂದು ಹೇಳಲಾಗಿದೆ ಎಂದರು.

 ಪೇಜಾವರ ಸ್ವಾಮೀಜಿ ಉರುಳಾಡಲಿ: ಎಂಜಲು ಎಲೆಯ ಮೇಲೆ ಕೆಳವರ್ಗ ಮತ್ತು ದಲಿತರು ಉರುಳಾಡಿದರೆ ಅವರಿಗೆ ಯಾವುದೇ ರೋಗ ರುಜಿನಗಳು ಬರುವುದಿಲ್ಲ ಎನ್ನಲಾಗುತ್ತದೆ. ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅವರಿಗೆ ಕಾಯಿಲೆ ಬರುತ್ತದೆ. ಅವರೂ ಎಂಜಲು ಎಲೆಯ ಮೇಲೆ ಉರುಳಾಡಿ ರೋಗ ಬರದಂತೆ ನೋಡಿಕೊಳ್ಳಬಹುದಲ್ಲವೇ ಎಂದು ರಾಮಕೃಷ್ಣ ಅವರು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X