Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮ್ಮ ವೇತನವನ್ನು ಶೇ.100ರಷ್ಟು...

ತಮ್ಮ ವೇತನವನ್ನು ಶೇ.100ರಷ್ಟು ಹೆಚ್ಚಿಸಿಕೊಳ್ಳಲು ಸಜ್ಜಾದ ಸಂಸದರು

ಎ.1ರಿಂದಲೇ ಪೂರ್ವಾನ್ವಯವಾಗಿ ಜಾರಿ

ವಾರ್ತಾಭಾರತಿವಾರ್ತಾಭಾರತಿ18 July 2016 8:30 PM IST
share
ತಮ್ಮ ವೇತನವನ್ನು ಶೇ.100ರಷ್ಟು ಹೆಚ್ಚಿಸಿಕೊಳ್ಳಲು ಸಜ್ಜಾದ ಸಂಸದರು

ಹೊಸದಿಲ್ಲಿ,ಜು.18: ನರೇಂದ್ರ ಮೋದಿಯವರು ಪ್ರಧಾನಿಯಾದ ನಂತರ ಅಚ್ಛೇ ದಿನ್‌ಗಳು ಯಾರಿಗೆ ಬಂದಿವೆಯೋ ಗೊತ್ತಿಲ್ಲ, ಕಾಯುವವರಂತೂ ಕಾಯುತ್ತಲೇ ಇದ್ದಾರೆ. ಆದರೆ ಸಂಸತ್ತಿನ ಸುಮಾರು 800 ಸದಸ್ಯರ ಪಾಲಿಗಂತೂ ‘ಅಚ್ಛೇ ದಿನ್’ಗಳು ಬರುತ್ತಿರುವುದು ಸುಳ್ಳಲ್ಲ. ಪ್ರಧಾನಿ ಮೋದಿ ಹೂಂ ಎನ್ನುವುದೇ ತಡ, ಸಂಸದರ ಮೂಲವೇತನ ಈಗಿನ ಮಾಸಿಕ 50,000 ರೂ.ಗಳಿಂದ ಒಂದು ಲಕ್ಷ ರೂ.ಗೆ ಏರಲಿದೆ.
ಮೊದಲು ಸಂಸದರ ಸಮಿತಿಯಿಂದ ಶಿಫಾರಸುಗೊಂಡು, ಬಳಿಕ ಸಚಿವರ ಸಮಿತಿಯಿಂದ ಮಂಜೂರುಗೊಂಡು ಸಂಪುಟಕ್ಕೆ ಸಲ್ಲಿಸಲಾಗಿರುವ ಸಂಸದರ ನೂತನ ವೇತನಗಳು ಮತ್ತು ಭತ್ತೆಗಳ ಪ್ರಸ್ತಾವನೆಗೆ ಹಸಿರು ನಿಶಾನೆಯನ್ನು ತೋರಿಸುವ ಬಗ್ಗೆ ನಿರ್ಧಾರವೊಂದನ್ನು ಈಗ ಮೋದಿ ಕೈಗೊಳ್ಳಬೇಕಿದೆ.
ವೇತನ ಮತ್ತು ಭತ್ತೆಗಳ ಪರಿಷ್ಕರಣೆಗೆ ಪ್ರಧಾನಿ ಒಪ್ಪಿಕೊಂಡರೆ, ಸಂಸತ್ತು ಪ್ರಸಕ್ತ ಅಧಿವೇಶನದಲ್ಲಿಯೇ ಇದನ್ನು ಅಂಗೀಕರಿಸುವ ನಿರೀಕ್ಷೆಯಿದೆ. ನೂತನ ವೇತನಗಳು ಎಪ್ರಿಲ್ 1ರಿಂದ ಪೂರ್ವಾನ್ವಯಗೊಂಡು ಜಾರಿಯಾಗಲಿವೆ.
ಸಂಸದರು ಒಂದು ಲಕ್ಷ ರೂ.ಗಳ ದುಪ್ಪಟ್ಟು ಮಾಸಿಕ ವೇತನವನ್ನು ಜೇಬಿಗಿಳಿಸಲಿದ್ದಾರೆ. ಜೊತೆಗೆ ಕ್ಷೇತ್ರಭತ್ತೆಯು 90,000 ರೂ.ಗಳಿಗೆ ಹೆಚ್ಚಲಿದೆ. ಸಂಸದರ ಕಚೇರಿ ಸಿಬ್ಬಂದಿಗಳಿಗೂ ಶೇ.100ರಷ್ಟು ವೇತನ ಏರಿಕೆ ಭಾಗ್ಯ ದೊರೆಯಲಿದೆ.
ಸಂಸದರ ಅಧಿಕೃತ ನಿವಾಸಗಳಿಗೆ ವಾರ್ಷಿಕ ಪೀಠೋಪಕರಣ ಭತ್ತೆ ಇಮ್ಮಡಿಗೊಂಡು 1.50 ಲ.ರೂ.ಗಳಾಗಲಿವೆ. ಅವರ ಮತಕ್ಷೇತ್ರದಲ್ಲಿಯ ಅಧಿಕೃತ ನಿವಾಸಕ್ಕೆ ಮಾಸಿಕ 1,700 ರೂ.ವೌಲ್ಯದ ಉಚಿತ ಬ್ರಾಡ್‌ಬ್ಯಾಂಡ್ ಸೇವೆ ಲಭಿಸಲಿದೆ.
ಮಾಜಿ ಸಂಸದರ ಮಾಸಿಕ ಪಿಂಚಣಿಯು ಈಗಿನ 20,000 ರೂ.ಗಳಿಂದ 35,000 ರೂ.ಗಳಿಗೆ ಜಿಗಿಯಲಿದೆ.
ವೇತನ,ಕ್ಷೇತ್ರ ಮತ್ತು ಕಚೇರಿ ಸಿಬ್ಬಂದಿ ಭತ್ತೆಗಳು ಸೇರಿದಂತೆ ಸಂಸದರ ಮೂಲ ಸಂಭಾವನೆಯ ಮೊತ್ತ ಮಾಸಿಕ 1,90,000 ರೂ.ಗಳಿಂದ 2,80,000 ರೂ.ಗಳಿಗೆ ಏರಿಕೆಯಾಗಲಿದೆ.
ಸಂಸದರ ವೇತನಗಳನ್ನು ಕೊನೆಯ ಬಾರಿ ಆರು ವರ್ಷಗಳ ಹಿಂದೆ ಪರಿಷ್ಕರಿಸಲಾಗಿತ್ತು. ತಮ್ಮ ವೇತನವನ್ನು ತಾವೇ ಹೆಚ್ಚಿಸಿಕೊಳ್ಳುವ ಅವಕಾಶ ಕಾನೂನು ರೂಪಕರಿಗೆ ಇರಕೂಡದು ಎಂಬ ಟೀಕಾಕಾರರ ಅಭಿಪ್ರಾಯಕ್ಕೆ ಕೆಲವು ಸಂಸದರೂ ಸಹಮತ ವ್ಯಕ್ತಪಡಿಸಿದ್ದಾರೆ.
ವೇತನ ಏರಿಕೆಗೆ ನನ್ನ ವಿರೋಧವಿದೆ. ನಾವಿಲ್ಲಿ ಜನರ ಸೇವೆಗಾಗಿ ಶ್ರಮಿಸುತ್ತಿದ್ದೇವೆ ಮತ್ತು ನಮಗೆ ಈಗೇನು ದೊರೆಯುತ್ತಿದೆಯೇ ಅದು ಸಾಕಷ್ಟಿದೆ ಎಂದು ತೃಣಮೂಲ ಕಾಂಗ್ರೆಸ್ ಪಕ್ಷದ ಪ್ರಸೂನ್ ಬ್ಯಾನರ್ಜಿ ಹೇಳಿದರೆ, ವೇತನ ಹೆಚ್ಚಳವನ್ನು ನಾವು ನಿರ್ಧರಿಸಬಾರದು, ಸ್ವತಂತ್ರ ಸಮಿತಿಯೊಂದು ಆ ಕಾರ್ಯವನ್ನು ಮಾಡಬೇಕು ಎನ್ನುವುದು ನಮ್ಮ ಸ್ಪಷ್ಟ ಅಭಿಪ್ರಾಯವಾಗಿದೆ ಎಂದು ಸಿಪಿಎಂ ಸಂಸದ ಎಂ.ರಾಜೇಶ ಹೇಳಿದರು.
ಆದರೆ ಹೆಚ್ಚಿನ ಸಂಸದರು ವೇತನ ಏರಿಕೆಗೆ ಸಹಮತ ವ್ಯಕ್ತಪಡಿಸಿದ್ದಾರೆ
ಸರಕಾರಿ ನೌಕರರ ವೇತನಗಳನ್ನು ಹೆಚ್ಚಿಸಲಾಗಿದೆ. ಸಂಸದರ ವೇತನಗಳನ್ನೂ ಹೆಚ್ಚಿಸಬೇಕು ಎಂದು ಬಿಜೆಪಿ ಸಂಸದ ಜಗದಾಂಬಿಕಾ ಪಾಲ್ ಹೇಳಿದರೆ, ಸೂಕ್ತ ವೇತನವು ಭ್ರಷ್ಟಾಚಾರಕ್ಕೆ ಅಂತ್ಯ ಹಾಡಲಿದೆ ಎಂದು ತೆಲುಗು ದೇಶಮ್‌ನ ಕೆ.ರಾಮಮೋಹನ್ ನಾಯ್ಡು ಅಭಿಪ್ರಾಯ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X