Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೃತ ಟೆಕ್ಕಿಯ ಅಂತ್ಯಸಂಸ್ಕಾರಕ್ಕೆ ಕೋಮಾ...

ಮೃತ ಟೆಕ್ಕಿಯ ಅಂತ್ಯಸಂಸ್ಕಾರಕ್ಕೆ ಕೋಮಾ ಸ್ಥಿತಿಯಲ್ಲಿರುವ ಪತ್ನಿಯ ಒಪ್ಪಿಗೆ ಅಲಭ್ಯ,ಶವವನ್ನು ಹೂಳುವ ಸಾಧ್ಯತೆ

ಅಮೆರಿಕದಲ್ಲಿ ಭಾರತೀಯ ಟೆಕ್ಕಿ ಕುಟುಂಬದ ದುರಂತ

ವಾರ್ತಾಭಾರತಿವಾರ್ತಾಭಾರತಿ18 July 2016 10:58 PM IST
share
ಮೃತ ಟೆಕ್ಕಿಯ ಅಂತ್ಯಸಂಸ್ಕಾರಕ್ಕೆ ಕೋಮಾ ಸ್ಥಿತಿಯಲ್ಲಿರುವ ಪತ್ನಿಯ ಒಪ್ಪಿಗೆ ಅಲಭ್ಯ,ಶವವನ್ನು ಹೂಳುವ ಸಾಧ್ಯತೆ

ಹೊಸದಿಲ್ಲಿ,ಜು.18: ಅಮೆರಿಕದಲ್ಲಿ ನೆಲೆಗೊಂಡಿದ್ದ ಐಟಿ ಉದ್ಯೋಗಿ, ಮಹಾರಾಷ್ಟ್ರದ ಕಲ್ಯಾಣ ಮೂಲದ ಚಂದನ್ ಗವಾಯಿ(38) ಅವರ ಸುಂದರ ಸಂಸಾರಕ್ಕೆ ಜುಲೈ 4ರಂದು ಬರಸಿಡಿಲು ಎರಗಿತ್ತು. ಅಂದು ನ್ಯೂಯಾರ್ಕ್‌ನಲ್ಲಿ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಚಂದನ್,ತಂದೆ ಕಮಲನಯನ ಗವಾಯಿ(74) ಮತ್ತು ತಾಯಿ ಅರ್ಚನಾ ಗವಾಯಿ(60) ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ, ತೀವ್ರ ಸುಟ್ಟಗಾಯಗಳಾಗಿ ತಲೆಗೆ ತೀವ್ರ ಏಟು ಬಿದ್ದಿರುವ ಪತ್ನಿ ಮನೀಷಾ ಸರ್ವದೆ(32) ಆಸ್ಪತ್ರೆಯಲ್ಲಿ ಕೋಮಾಸ್ಥಿತಿಯಲ್ಲಿದ್ದಾರೆ. ದಂಪತಿಯ 11 ತಿಂಗಳ ಗಂಡುಮಗು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದೆ. ಅಮೆರಿಕದ ಕಾನೂನಿನಂತೆ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಮುನ್ನ ಆತನ ಪತ್ನಿಯ ಒಪ್ಪಿಗೆ ಅತ್ಯಗತ್ಯವಾಗಿದೆ. ಮನೀಷಾ ಪತಿಯ ಅಂತ್ಯಸಂಸ್ಕಾರಕ್ಕೆ ಒಪ್ಪಿಗೆ ನೀಡುವ ಸ್ಥಿತಿಯಲ್ಲಿಲ್ಲ. ಹೀಗಾಗಿ ಚಂದನ್ ಮೃತದೇಹವನ್ನು ಹೂಳುವ ಸಾಧ್ಯತೆಯಿದೆ.

ಮನೀಷಾ ಕೋಮಾಸ್ಥಿತಿಯಿಂದ ಹೊರಗೆ ಬರುವವರೆಗೂ ಚಂದನ್ ಮೃತದೇಹವನ್ನು ಹೂಳಬಹುದಾಗಿದೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತೀಯ ಕಾನ್ಸುಲ್ ಜನರಲ್ ರಿವಾ ಗಂಗೂಲಿ ಅವರು ಪ್ರಸ್ತಾವಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ರವಿವಾರ ಟ್ವಿಟರ್ ಸಂದೇಶದಲ್ಲಿ ತಿಳಿಸಿದ್ದಾರೆ.
ಜು.4ರಂದು ಸುಡುಮದ್ದು ಪ್ರದರ್ಶನ ನೋಡಿ ಮನೆಗೆ ವಾಪಸಾಗುತ್ತಿದ್ದ ಗವಾಯಿ ಕುಟುಂಬದ ಕಾರಿಗೆ ಪಿಕಪ್ ಟ್ರಕ್ ಢಿಕ್ಕಿ ಹೊಡೆದಿತ್ತು. ತಕ್ಷಣ ಎರಡೂ ವಾಹನಗಳು ಹೊತ್ತಿ ಉರಿದಿದ್ದವು. ಘಟನೆಯಲ್ಲಿ ಟ್ರಕ್ ಚಾಲಕನೂ ಮೃತಪಟ್ಟಿದ್ದ.
ಚಂದನ್ ಹೆತ್ತವರ ಅಂತ್ಯಸಂಸ್ಕಾರವನ್ನು ಅಮೆರಿಕದಲ್ಲಿಯೇ ನಡೆಸಲಾಗುವುದು. ಮನೀಷಾ ಕೋಮಾಸ್ಥಿತಿಯಿಂದ ಹೊರಗೆ ಬರುವವರೆಗೂ ಚಂದನ್ ಮೃತದೇಹವನ್ನು ಹೂಳಲಾಗುವುದು. ಮನೀಷಾ ಒಪ್ಪಿಗೆ ನೀಡಿದ ಬಳಿಕ ಮೃತದೇಹವನ್ನು ಹೊರಗೆ ತೆಗೆದು ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಸುಷ್ಮಾ ಟ್ವೀಟಿಸಿದ್ದಾರೆ.
ಮೃತ ಎಲ್ಲ ಮೂವರ ಮರಣ ಪ್ರಮಾಣಪತ್ರಗಳನ್ನು ನೀಡಲಾಗುವುದು ಮತ್ತು ವಿಮೆಹಣವನ್ನು ಪಡೆಯಲು ಕುಟುಂಬಕ್ಕೆ ಎಲ್ಲ ನೆರವು ಒದಗಿಸಲಾಗುವುದು ಎಂದಿದ್ದಾರೆ.
ಕಾನ್ಸುಲ್ ಜನರಲ್‌ರ ಪ್ರಸ್ತಾವನೆಗೆ ಗವಾಯಿ ಕುಟುಂಬದ ಎಲ್ಲರೂ ಒಪ್ಪಿಕೊಳ್ಳಲಿದ್ದಾರೆ ಎಂದೂ ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X