Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಖಡ್ಸೆ-ದಾವೂದ್ ನಡುವೆ ಕರೆ...

ಖಡ್ಸೆ-ದಾವೂದ್ ನಡುವೆ ಕರೆ ವಿನಿಮಯವಾಗಿಲ್ಲ

ಬಾಂಬೆ ಹೈಕೋರ್ಟ್‌ಗೆ ಎಟಿಎಸ್ ವರದಿ

ವಾರ್ತಾಭಾರತಿವಾರ್ತಾಭಾರತಿ18 July 2016 11:49 PM IST
share

ಮುಂಬೈ, ಜು.18: ಮಹಾರಾಷ್ಟ್ರದ ಮಾಜಿ ಸಚಿವ ಏಕನಾಥ ಖಡ್ಸೆ ಹಾಗೂ ತಲೆಮರೆಸಿಕೊಂಡಿರುವ ಭೂಗತ ಪಾತಕಿ ದಾವೂದ್ ಇಬ್ರಾಹೀಂ ನಡುವೆ ದೂರವಾಣಿ ಕರೆಗಳ ವಿನಿಮಯವಾಗಿರುವುದು ಪತ್ತೆಯಾಗಿಲ್ಲ ಹಾಗೂ ಖಡ್ಸೆಗೆ ಭಯೋತ್ಪಾದಕನೊಂದಿಗೆ ಸಂಬಂಧವಿರುವುದೂ ಕಂಡು ಬಂದಿಲ್ಲವೆಂದು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳವಿಂದು ಬಾಂಬೆ ಹೈಕೋರ್ಟ್‌ಗೆ ತಿಳಿಸಿದೆ.

ಆದಾಗ್ಯೂ, ತನಿಖೆಯಲ್ಲಿ ಭಯೋತ್ಪಾದಕ ಆಯಾಮ ಪತ್ತೆಯಾಗಿಲ್ಲವಾದರೂ, ಇತರ ಕೆಲವು ನಿರ್ದಿಷ್ಟ ವಿಷಯಗಳು ಬೆಳಕಿಗೆ ಬಂದಿವೆ.ಅವುಗಳನ್ನು ನಗರ ಪೊಲೀಸನ ಸೈಬರ್ ಅಪರಾಧ ಘಟಕದ ಪರಿಣತರೇ ತನಿಖೆ ನಡೆಸಬೇಕಾಗಿದೆ. ಎಟಿಎಸ್ ಅದಕ್ಕೆ ಪ್ರಾಥಮಿಕ ತನಿಖೆಯ ವರದಿಯನ್ನು ನೀಡಲಿದೆ. ಆ ಬಳಿಕ ತನಿಖೆ ನಡೆಸಲಿದೆಯೆಂದು ಎಟಿಎಸ್ ತಿಳಿಸಿದೆ.

ಎಟಿಎಸ್ ಪ್ರಾಥಮಿಕ ತನಿಖೆ ನಡೆಸಿದೆ. ಹ್ಯಾಕರ್ ಒಬ್ಬ ಆರೋಪಿಸಿರುವಂತೆ ಯಾವುದೇ ಭಯೋತ್ಪಾದಕ ಆಯಾಮ ಪತ್ತೆಯಾಗಿಲ್ಲ. ಖಡ್ಸೆ ಹಾಗೂ ದಾವೂದ್ ನಡುವೆ ಯಾವುದೇ ಕರೆಗಳ ವಿನಿಮಯವಾಗಿಲ್ಲವೆಂದು ಎಟಿಎಸ್‌ನ ವಕೀಲ ನಿತಿನ್ ಪ್ರಧಾನ್ ನ್ಯಾಯಮೂರ್ತಿಗಳಾದ ಎನ್.ಎಚ್. ಪಾಟೀಲ್ ಹಾಗೂ ಪಿ.ಡಿ. ನಾಯ್ಕಾರನ್ನೊಳಗೊಂಡ ಪೀಠವೊಂದರ ಮುಂದೆ ಹೇಳಿದರು. ಈ ಪ್ರಕರಣದಲ್ಲಿ ರಾಜ್ಯದ ತನಿಖೆ ಸಂಸ್ಥೆಗಳು ನಿಷ್ಪಕ್ಷಪಾತ ತನಿಖೆ ನಡೆಸಲಾರವು. ಆದುದರಿಂದ ಸಿಬಿಐ ತನಿಖೆ ನಡೆಸಬೇಕೆಂದು ಆಗ್ರಹಿಸಿ ಗುಜರಾತ್ ಮೂಲದ ಹ್ಯಾಕರ್ ಮನೀಶ್ ಭಂಗಲೆ ಎಂಬವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸುತ್ತಿತ್ತು.

ತಾನು ನೀಡಿದ್ದ ಮಾಹಿತಿಯನ್ನು ರಾಜ್ಯದ ಯಂತ್ರಾಂಗ ಲಘುವಾಗಿ ಪರಿಗಣಿಸಿತೆಂಬ ಅರ್ಜಿದಾರನ ಪ್ರತಿಪಾದನೆ ಸರಿಯಲ್ಲ. ತಾವು ಅಗತ್ಯವಾದುದನ್ನು ಮಾಡುತ್ತಿದ್ದೇವೆ. ಸಿಬಿಐ ತನಿಖೆ ಅನವಶ್ಯವೆಂದು ಪ್ರಧಾನ್ ವಾದಿಸಿದರು. ಪ್ರಧಾನ್‌ರ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಾಲಯ, ಅಗತ್ಯವಾದಾಗ ಅಪರಾಧ ವಿಭಾಗದ ಮುಂದೆ ಹಾಜರಾಗಿ ಅವರಲ್ಲಿರುವ ಮಾಹಿತಿಯನ್ನು ಒದಗಿಸುವಂತೆ ಭಂಗಲೆಗೆ ನಿರ್ದೇಶನ ನೀಡಿತು.

ತನಗೆ ಪ್ರಾಣ ಬೆದರಿಕೆಯಿದೆಯೆಂಬ ಭಂಗಲೆಯ ಆರೋಪದ ಕುರಿತು, ಪೊಲೀಸ್ ಆಯುಕ್ತರಿಗೆ ಅರ್ಜಿ ಸಲ್ಲಿಸಬಹುದು. ಅವರು ಅರ್ಹತೆಯ ಮೇಲೆ ಅದನ್ನು ನಿರ್ಧರಿಸುತ್ತಾರೆಂದು ಹೈಕೋರ್ಟ್ ಸಲಹೆ ಮಾಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X